Homeಮುಖಪುಟಲಡಕ್‍ಗೆ ಹೋಗಲು ಅಧಿಕಾರಿಗಳು ಹೆದರೋದ್ಯಾಕೆ ಗೊತ್ತೇ?

ಲಡಕ್‍ಗೆ ಹೋಗಲು ಅಧಿಕಾರಿಗಳು ಹೆದರೋದ್ಯಾಕೆ ಗೊತ್ತೇ?

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರ ಇಬ್ಭಾಗವಾಗಿದೆ. ಒಂದು ಜಮ್ಮುಕಾಶ್ಮೀರ ಮತ್ತೊಂದು ಲಡಕ್.ಇವೆರೆಡು ಈಗ ಕೇಂದ್ರಾಡಳಿತಕ್ಕೆ ಒಳಪಟ್ಟ ಪ್ರದೇಶಗಳು. ಜಮ್ಮುಕಾಶ್ಮೀರದಲ್ಲಿ ವಿಧಾನಸಭೆ ಇದ್ದರೆ, ಲಡಕ್‍ನಲ್ಲಿ ಇಲ್ಲ. ಇಲ್ಲಿಗೆ ಇಬ್ಬರು ಲೆಫ್ಟಿನೆಂಟ್ ಗೌರ್ನರ್ ಗಳು ನೇಮಕ ಆಗಬೇಕು. ಆದರೆ ಇದುವರೆಗೆ ಆ ಪ್ರಕ್ರಿಯೆ ನಡೆದಿಲ್ಲ. ಕಣಿವೆ ರಾಜ್ಯ ಎರಡು ಭಾಗವಾದ ಮೇಲೆ ಗಡಿಗಳನ್ನು ಗುರುತಿಸಿದೆ. ಲಡಕ್‍ನಲ್ಲಿ ಎರಡು ಜಿಲ್ಲೆಗಳು ಇದ್ದರೆ, ಜಮ್ಮುಕಾಶ್ಮೀರದಲ್ಲಿ 20 ಜಿಲ್ಲೆಗಳು ಉಳಿದಿವೆ. ವಿಂಗಡಣೆಯೇನೋ ಆಯಿತು. ಆದರೆ ನೌಕರರ ನಿಯೋಜನೆ ಆಗಬೇಕಲ್ಲವೇ? ಹೊಸ ನೇಮಕಾತಿಯೂ ನಡೆಯಬೇಕಲ್ಲವೇ? ಇದು ಸರ್ಕಾರಕ್ಕೆ ತಲೆನೋವು ಸೃಷ್ಟಿಸಿದೆ.

ಜಮ್ಮು ವಿಭಾಗದಲ್ಲಿ ಹತ್ತು ಜಿಲ್ಲೆಗಳು ಮತ್ತು ಕಾಶ್ಮೀರ ವಿಭಾಗದಲ್ಲಿ ಹತ್ತು ಜಿಲ್ಲೆಗಳು ಬರುತ್ತವೆ. ಜಮ್ಮು ಉಪವಿಭಾಗ 26,293 ಚದರ ಕಿ.ಲೋ ಮೀಟರ್ ವ್ಯಾಪ್ತಿಯಲ್ಲಿ ಹರಡಿಕೊಂಡಿದೆ. ಇಲ್ಲಿ 53,50,811 ಮಂದಿ ಜನರು ವಾಸವಿದ್ದಾರೆ. ಅಂತೆಯೇ ಕಾಶ್ಮೀರ 15,948 ಚದರ ಕಿ.ಲೋ ಮೀಟರ್ ವ್ಯಾಪ್ತಿಯಲ್ಲಿ ವಿಸ್ತರಿಸಿದೆ. ಈ ವಿಭಾಗದಲ್ಲಿ 69,07,623 ಜನ ವಾಸಿಸುತ್ತಿದ್ದಾರೆ ಎಂಬ ಅಂಕಿ ಅಂಶಗಳು 2011 ಜನಗಣತಿಯಿಂದ ತಿಳಿಯುತ್ತದೆ. ಅಂದರೆ ಜಮ್ಮುಕಾಶ್ಮೀರ ಎರಡು ವಿಭಾಗಗಳಿಂದ ಸೇರಿದರೆ 1,22,58,434 ಜನ ನೆಲೆಸಿರುವ ಮಾಹಿತಿ ಲಭ್ಯವಾಗುತ್ತದೆ.

ಜಮ್ಮುಕಾಶ್ಮೀರದಲ್ಲಿ ಕೃಷಿ ಯೋಗ್ಯ ಭೂಮಿ ಇದ್ದು ಸೇಬು, ಕೇಸರಿ ಬೆಳೆಗೆ ಪ್ರಸಿದ್ದಿ ಪಡೆದಿದೆ. ಲಕ್ಷಾಂತರ ಮಂದಿ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಉತ್ತಮ ರಸ್ತೆಗಳು, ವಾಸ ಯೋಗ್ಯ ಮನೆಗಳು, ಹೋಟೆಲ್‍ಗಳು, ಸುಂದರವಾದ ಮರಗಿಡ, ಶುದ್ಧ ಕುಡಿಯುವ ನೀರು ಹೀಗೆ ಎಲ್ಲಾ ಸೌಲಭ್ಯಗಳು ದೊರೆಯುತ್ತವೆ. ಐಶಾರಾಮಿ ರೆಸ್ಟೋರೆಂಟ್‍ಗಳಿಗೆ ಕೊರತೆ ಇಲ್ಲ. ಹೀಗಾಗಿ ಅಧಿಕಾರಿಗಳು ಇಲ್ಲಿರಲು ಇಷ್ಟಪಡುತ್ತಾರೆ.

ಲಡಕ್‍ನಲ್ಲಿ ಲೇಹ್ ಮತ್ತು ಕಾರ್ಗಿಲ್ ಎರಡು ಜಿಲ್ಲೆಗಳು ಬರುತ್ತವೆ. ಇದು ಶಿಖರ ಪ್ರದೇಶ. ಮರುಭೂಮಿ ಬಿಟ್ಟರೆ ಬೇರೆ ಏನನ್ನು ನೋಡಲು ಸಾಧ್ಯವಿಲ್ಲ. ಉತ್ತಮ ರಸ್ತೆ ಇಲ್ಲ. ಕಡಿದಾದ ದಾರಿಗಳು, ಸದಾ ಹಿಮ ಬೀಳುವ ಸ್ಥಳ. ಕುಡಿಯುವ ನೀರು ಸಿಗುವುದು ಕಷ್ಟ. ಮಂಜುಗಡ್ಡೆ ಕರಗಿಸಿ ನೀರಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ವರ್ಷಪೂರ್ತಿ ಹಿಮ ಬೀಳುತ್ತಲೇ ಇರುತ್ತದೆ. ವಾಸ ಯೋಗ್ಯ ಮನೆಗಳ ಕೊರತೆ ಇದೆ. ಮರಗಿಡಗಳಿಲ್ಲದ ಪ್ರದೇಶ ಇದಾಗಿದೆ. ಏಪ್ರಿಲ್-ಜುಲೈ ತಿಂಗಳವರೆಗೆ ವ್ಯವಸಾಯ ಮಾಡಲು ಆಗುವುದೇ ಇಲ್ಲ. ಲಡಕ್ 59,146 ಚದರ ಕಿಲೋ ಮೀಟರ್ ವ್ಯಾಪ್ತಿ ಹೊಂದಿದ್ದು 2,90,000 ಜನ ಇಲ್ಲಿ ವಾಸಿಸುತ್ತಾರೆ. ಕಾರ್ಗಿಲ್ ಮುಸ್ಲಿಂ ಬಾಹುಳ್ಯ ಪ್ರದೇಶವಾಗಿದ್ದು 1,43,388 ಜನರಿದ್ದರೆ, ಲಡಕ್ ಬೌದ್ದರ ಪ್ರಾಬಲ್ಯವಿರುವ ಪ್ರದೇಶ. ಇಲ್ಲಿ ಬೌದ್ಧರ ಸಂಖ್ಯೆ 1,47,107 ಇದೆ. ಲಡಕ್‍ನಲ್ಲಿ ಮೈನಸ್ 40 ಡಿಗ್ರಿ ಸೆಲ್ಸಿಯಸ್ ಹವಾಮಾನವಿರುತ್ತದೆ. ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚು.

ಹೌದು, ಇದೇ ಕಾರಣಕ್ಕಾಗಿಯೇ ಜಮ್ಮುಕಾಶ್ಮೀರ ಬಿಟ್ಟು ಹೋಗಲು ಯಾವ ಅಧಿಕಾರಿಯೂ ಇಚ್ಚಿಸುತ್ತಿಲ್ಲ. ಇಲ್ಲಿನ ಹವಾಗುಣ, ಸೌಲಭ್ಯಗಳು, ರಸ್ತೆಗಳು, ಹೋಟೆಲ್‍ಗಳು, ಅಂಗಡಿಮುಂಗಟ್ಟುಗಳು, ವ್ಯವಸಾಯಯೋಗ್ಯ ಭೂಮಿ ಪ್ರಮುಖ ಕಾರಣ. ಜಮ್ಮುಕಾಶ್ಮೀರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ನೌಕರರಿದ್ದಾರೆ. ಇವರ ಪೈಕಿ 80 ಸಾವಿರ ಮಂದಿ ನೌಕರರು ಸ್ವತಂತ್ರರಾಗಿ ಮತ್ತು ಅರೆ ಸ್ವತಂತ್ರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ವರದಿಗಳು ತಿಳಿಸುತ್ತವೆ. ಸರ್ಕಾರ ಈಗ 350 ಮಂದಿ ಪೊಲೀಸ್ ಅಧಿಕಾರಿಗಳನ್ನು ಲಡಕ್‍ಗೆ ನಿಯೋಜನೆ ಮಾಡಿದೆ. ಅವರ್ಯಾರೂ ಅಲ್ಲಿಗೆ ಹೋಗಲು ಸುತಾರಾಂ ಇಷ್ಟಪಡುತ್ತಿಲ್ಲ.

ಕೆಲವು ನೌಕರರು ಲಡಕ್ ತಮ್ಮ ಸ್ವಂತ ಸ್ಥಳವಾಗಿದ್ದರೂ ಅಲ್ಲಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಲಡಕ್‍ಗೆ ನಿಯೋಜನೆ ಗೊಂಡಿರುವ ಅಧಿಕಾರಿಗಳು ಮೌನ ವಹಿಸಿದ್ದಾರೆ. ಬಹುತೇಕ ಅಧಿಕಾರಿಗಳು ಲಡಕ್ ಅನ್ನು ಆಯ್ಕೆ ಮಾಡಿಕೊಳ್ಳಲು ತಣ್ಣಗಿನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದರಿಂದ ಯಾವ ಕ್ರಮ ಕೈಗೊಳ್ಳಬೇಕು ಎಂಬ ಪ್ರಶ್ನೆ ಸರ್ಕಾರಕ್ಕೆ ಎದುರಾಗಿದೆ. ಕೆಲವು ನೌಕರರು ಲಡಕ್ ಆಯ್ಕೆಗೆ ಸರ್ಕಾರ ಸೂಚಿಸಿದರೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

ಪ್ರವಾಸಿಗರು ಲಡಕ್ ಕುರಿತು ಹೇಳುವ ಮಾತುಗಳು ಕೂಡ ಇಲ್ಲಿ ಗಮನಾರ್ಹ. ಲಡಕ್‍ನಲ್ಲಿ ಆಕ್ಸಿಜನ್ ಕಡಿಮೆ. ಒಣಭೂಮಿ ಮರಗಳಿಲ್ಲ. ದೈಹಿಕ ದೌರ್ಬಲ್ಯ ಇರುವವರು ಇಲ್ಲಿಗೆ ಭೇಟಿ ನೀಡುವುದೇ ಸರಿಯಲ್ಲ. ದೆಹಲಿಯಲ್ಲಿ ಮೂರು ಅಂತಸ್ತಿನ ಮಹಡಿ ಹತ್ತಿದಾಗ ಆಗುವಷ್ಟು ಸುಸ್ತು ಒಂದು ಮಹಿಡಿಯನ್ನು ಹತ್ತಿದಾಗ ಆಗುತ್ತದೆ. ಸಾಹಸ ಚಟುವಟಿಕೆ, ಚಾರಣ ನಡೆಸಲು ಪ್ರಶಸ್ತ ಸ್ಥಳ ಯುವಕರು ಇಲ್ಲಿ ಸಾಹಸ ಕಾರ್ಯಗಳನ್ನು ಕೈಗೊಳ್ಳಬಹುದು. ಲಡಕ್‍ನಿಂದ ಪ್ರತಿವರ್ಷ ಶೇಕಡ 45ರಷ್ಟು ಸ್ಥಳೀಯರು ದೆಹಲಿ ಮತ್ತು ಜಮ್ಮು ಪ್ರದೇಶಗಳಿಗೆ ವಲಸೆ ಹೋಗುತ್ತಾರೆ. ಪ್ರತಿ ವರ್ಷ 100 ಜನ ವೃದ್ಧರಲ್ಲಿ 10 ಮಂದಿ ಸಾವನ್ನಪ್ಪುತ್ತಾರೆ. ಹೀಗೆ ಹಲವು ವಿಷಯಗಳ ಬಗ್ಗೆ ಅನುಭವದ ಮಾತುಗಳನ್ನು ದಾಖಲಿಸಿದ್ದಾರೆ.

ಲಡಕ್ ಪ್ರದೇಶದಲ್ಲಿ ಪದೇಪದೇ ಪ್ರವಾಹ ಎದುರಾಗುತ್ತದೆ. ಭೂಕುಸಿತ ಉಂಟಾಗುತ್ತದೆ. ಹಲವು ಮಂದಿ ಸಾವನ್ನಪ್ಪಿರುವ ಘಟನೆಗಳು ಕಣ್ಣಮುಂದಿವೆ. ಇಷ್ಟೆಲ್ಲಾ ಅನಾನುಕೂಲಗಳನ್ನು ಇಟ್ಟುಕೊಂಡು ಅಧಿಕಾರಿಗಳು ಲಡಕ್ ಹೋಗುವುದಾದರೂ ಹೇಗೆ? ಸರ್ಕಾರ ಸೂಕ್ತ ಸೌಲಭ್ಯ ಕಲ್ಪಿಸಿದರೆ ಅಧಿಕಾರಿಗಳು ಅಲ್ಲಿಗೆ ಹೋಗಿ ನಿಷ್ಟೆಯಿಂದ ಕೆಲಸ ಮಾಡಲು ಸಾಧ್ಯ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...