Homeಅಂತರಾಷ್ಟ್ರೀಯಲಡಾಖ್‌ನಲ್ಲಿ ಸೆರೆಹಿಡಿದ ಚೀನಾ ಸೈನಿಕನ ಬಿಡುಗಡೆ ಸದ್ಯಕ್ಕಿಲ್ಲ: ವರದಿಯ ಮೂಲ

ಲಡಾಖ್‌ನಲ್ಲಿ ಸೆರೆಹಿಡಿದ ಚೀನಾ ಸೈನಿಕನ ಬಿಡುಗಡೆ ಸದ್ಯಕ್ಕಿಲ್ಲ: ವರದಿಯ ಮೂಲ

ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿರುವ ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು.

- Advertisement -
- Advertisement -

ಪೂರ್ವ ಲಡಾಖ್‌ನಲ್ಲಿ ಸೋಮವಾರ ಭಾರತೀಯ ಸೇನೆಗೆ ಸಿಕ್ಕಿಬಿದ್ದ ಚೀನಾದ ಸೈನಿಕನನ್ನು ಮುಂದಿನ ಕೆಲವು ದಿನಗಳವರೆಗೆ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿರುವ ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು.

ಈ ಸೈನಿಕನನ್ನು ಚೀನಾ ಪೀಪಲ್ಸ್ ಲಿಬರೇಶನ್ ಆರ್ಮಿ(ಪಿಎಲ್‌ಎ)ಗೆ ಹಸ್ತಾಂತರಿಸುವ ಮೊದಲು ಚೀನಾ ತಜ್ಞರು ಪ್ರಶ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಈ ಸೈನಿಕ ದಾರಿ ತಪ್ಪಿದ್ದನು. ಈತನಿಗೆ ಆಮ್ಲಜನಕ, ಆಹಾರ ಮತ್ತು ಬೆಚ್ಚಗಿನ ಬಟ್ಟೆಗಳು ಸೇರಿದಂತೆ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ. ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿ ಪ್ರೋಟೋಕಾಲ್ ಪ್ರಕಾರ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕನನ್ನು ಚೀನೀ ಸೈನ್ಯಕ್ಕೆ ಹಿಂತಿರುಗಿಸಲಾಗುತ್ತದೆ” ಎಂದು ಭಾರತೀಯ ಸೇನೆಯ ಪ್ರಕಟಣೆ ತಿಳಿಸಿತ್ತು.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

“ನಾಪತ್ತೆಯಾದ ಸೈನಿಕ ಎಲ್ಲಿದ್ದಾನೆ ಎಂಬ ಬಗ್ಗೆ ಚೀನಾದ ಸೈನ್ಯದಿಂದ ಮನವಿ ಬಂದಿದ್ದು, ಔಪಚಾರಿಕ ಕಾರ್ಯಗಳು ಪೂರ್ಣಗೊಂಡ ನಂತರ ಅವರನ್ನು ಚುಶುಲ್-ಮೊಲ್ಡೊ ಮೀಟಿಂಗ್ ಪಾಯಿಂಟ್‌ನಲ್ಲಿ ಚೀನಾದ ಅಧಿಕಾರಿಗಳಿಗೆ ಹಿಂತಿರುಗಿಸಲಾಗುವುದು” ಎಂದು ಸೇನೆಯು ತಿಳಿಸಿತ್ತು.

ಸಿಕ್ಕಿಬಿದ್ದ ಸೈನಿಕ, ನಾಗರಿಕ ಮತ್ತು ಮಿಲಿಟರಿ ದಾಖಲೆಗಳನ್ನು ಹೊತ್ತೊಯ್ಯುತ್ತಿದ್ದನೆಂದು ಕೆಲವು ವರದಿಗಳು ಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಚೀನಾದ ಅಧಿಕಾರಿಯೊಬ್ಬರು ಕಳೆದ ರಾತ್ರಿ ನೀಡಿದ ಹೇಳಿಕೆಯಲ್ಲಿ, ಸೈನಿಕನು “ಸ್ಥಳೀಯ ದನಗಾಹಿಗಳಿಗೆ ಸಹಾಯ ಮಾಡುವಾಗ ಕಳೆದುಹೋಗಿದ್ದಾನೆ” ಎಂದು ಹೇಳಿದ್ದಾರೆ.

ಗಾಲ್ವಾನ್ ಕಣಿವೆಯ ಲಡಾಖ್‌ನಲ್ಲಿ ಚೀನಿಯರೊಂದಿಗಿನ ಘರ್ಷಣೆಯಲ್ಲಿ ಕರ್ತವ್ಯದಲ್ಲಿದ್ದ 20 ಭಾರತೀಯ ಸೈನಿಕರು ಜೂನ್‌ನಲ್ಲಿ ಸಾವನ್ನಪ್ಪಿದ್ದರು. ಆಗ ಉಭಯ ದೇಶಗಳಲ್ಲಿ ಉದ್ವಿಗ್ನತೆ ಉತ್ತುಂಗಕ್ಕೇರಿತ್ತು. ಕಳೆದ ತಿಂಗಳು, ಪ್ಯಾಂಗೊಂಗ್ ತ್ಸೊದಲ್ಲಿ ಎರಡೂ ಪಡೆ ಮುಖಾಮುಖಿಯಾಗುತ್ತಿದ್ದಂತೆ ಒಂದಕ್ಕಿಂತ ಹೆಚ್ಚು ಬಾರಿ ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು.

ಇದನ್ನೂ ಓದಿ: ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಇತ್ತೀಚೆಗೆ ಭಾರತ-ಚೀನಾ ನಡುವಿನ ಸಂಬಂಧ ಚಿಂತಾಜನಕವಾಗಿದ್ದು, ಯಾವ ಸಂಧರ್ಭದಲ್ಲಿ ಏನುಬೇಕಾದರೂ ನಡೆಯಬಹುದು ಎಂಬ ಭೀತಿಯುಂಟಾಗಿದೆ. ಎರಡೂ ದೇಶಗಳೂ ಗಡಿಯಲ್ಲಿ ಸೇನೆಯನ್ನು ಜಮಾವಣೆ ಮಾಡಿವೆ.

ಈ ಪ್ರಕ್ಷುಬ್ದ ವಾತಾವರಣಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿದ್ದು, ಚೀನಾ ವಿರುದ್ಧ ಕೇಂದ್ರ ಸರ್ಕಾರದ ಪ್ರತಿಯೊಬ್ಬರೂ ಒಂದೊಂದು ಮಾಹಿತಿ ನೀಡುತ್ತಿದ್ದಾರೆ. ಒಬ್ಬರು ಯಾವುದೇ ತೊಂದರೆಯಿಲ್ಲ ಎಂದರೆ, ಮತ್ತೊಬ್ಬರು ತೊಂದರೆಯಿದೆ ಎನ್ನುತ್ತಾರೆ. ಇನ್ನೊಬ್ಬರು ಭೂಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂದರೆ, ಮತ್ತೊಬ್ಬರು ಆಕ್ರಮಿಸಿಕೊಂಡಿದೆ ಎನ್ನುತ್ತಾರೆ. ಒಬ್ಬರು ಗೌಪ್ಯ ಮಾತುಕತೆ ನಡೆಸುತ್ತಿದ್ದೇವೆ ಎನ್ನುತ್ತಾರೆ, ಮತ್ತೊಬ್ಬರು ಚೀನಾದೊಟ್ಟಿಗೆ ಯುದ್ಧ ಮಾಡಲು ಸಿದ್ಧ ಎನ್ನುತ್ತಾರೆ.

ಒಟ್ಟಾರೆಯಾಗಿ, ಕೇಂದ್ರ ಸರ್ಕಾರ ಪ್ರಜೆಗಳಿಂದ ಸತ್ಯವನ್ನು ಮುಚ್ಚಿಡುತ್ತಿದೆ ಎಂದು ಹಲವರು ಆರೋಪಿಸಿದ್ದು, ನರೇಂದ್ರ ಮೋದಿಯವರು ಚೀನಾ ಹೆಸರನ್ನು ಹೇಳಲು ಭಯಪಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...