Homeಅಂತರಾಷ್ಟ್ರೀಯಲಡಾಖ್‌ನಲ್ಲಿ ಸೆರೆಹಿಡಿದ ಚೀನಾ ಸೈನಿಕನ ಬಿಡುಗಡೆ ಸದ್ಯಕ್ಕಿಲ್ಲ: ವರದಿಯ ಮೂಲ

ಲಡಾಖ್‌ನಲ್ಲಿ ಸೆರೆಹಿಡಿದ ಚೀನಾ ಸೈನಿಕನ ಬಿಡುಗಡೆ ಸದ್ಯಕ್ಕಿಲ್ಲ: ವರದಿಯ ಮೂಲ

ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿರುವ ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು.

- Advertisement -
- Advertisement -

ಪೂರ್ವ ಲಡಾಖ್‌ನಲ್ಲಿ ಸೋಮವಾರ ಭಾರತೀಯ ಸೇನೆಗೆ ಸಿಕ್ಕಿಬಿದ್ದ ಚೀನಾದ ಸೈನಿಕನನ್ನು ಮುಂದಿನ ಕೆಲವು ದಿನಗಳವರೆಗೆ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿರುವ ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು.

ಈ ಸೈನಿಕನನ್ನು ಚೀನಾ ಪೀಪಲ್ಸ್ ಲಿಬರೇಶನ್ ಆರ್ಮಿ(ಪಿಎಲ್‌ಎ)ಗೆ ಹಸ್ತಾಂತರಿಸುವ ಮೊದಲು ಚೀನಾ ತಜ್ಞರು ಪ್ರಶ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಈ ಸೈನಿಕ ದಾರಿ ತಪ್ಪಿದ್ದನು. ಈತನಿಗೆ ಆಮ್ಲಜನಕ, ಆಹಾರ ಮತ್ತು ಬೆಚ್ಚಗಿನ ಬಟ್ಟೆಗಳು ಸೇರಿದಂತೆ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ. ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿ ಪ್ರೋಟೋಕಾಲ್ ಪ್ರಕಾರ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕನನ್ನು ಚೀನೀ ಸೈನ್ಯಕ್ಕೆ ಹಿಂತಿರುಗಿಸಲಾಗುತ್ತದೆ” ಎಂದು ಭಾರತೀಯ ಸೇನೆಯ ಪ್ರಕಟಣೆ ತಿಳಿಸಿತ್ತು.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

“ನಾಪತ್ತೆಯಾದ ಸೈನಿಕ ಎಲ್ಲಿದ್ದಾನೆ ಎಂಬ ಬಗ್ಗೆ ಚೀನಾದ ಸೈನ್ಯದಿಂದ ಮನವಿ ಬಂದಿದ್ದು, ಔಪಚಾರಿಕ ಕಾರ್ಯಗಳು ಪೂರ್ಣಗೊಂಡ ನಂತರ ಅವರನ್ನು ಚುಶುಲ್-ಮೊಲ್ಡೊ ಮೀಟಿಂಗ್ ಪಾಯಿಂಟ್‌ನಲ್ಲಿ ಚೀನಾದ ಅಧಿಕಾರಿಗಳಿಗೆ ಹಿಂತಿರುಗಿಸಲಾಗುವುದು” ಎಂದು ಸೇನೆಯು ತಿಳಿಸಿತ್ತು.

ಸಿಕ್ಕಿಬಿದ್ದ ಸೈನಿಕ, ನಾಗರಿಕ ಮತ್ತು ಮಿಲಿಟರಿ ದಾಖಲೆಗಳನ್ನು ಹೊತ್ತೊಯ್ಯುತ್ತಿದ್ದನೆಂದು ಕೆಲವು ವರದಿಗಳು ಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಚೀನಾದ ಅಧಿಕಾರಿಯೊಬ್ಬರು ಕಳೆದ ರಾತ್ರಿ ನೀಡಿದ ಹೇಳಿಕೆಯಲ್ಲಿ, ಸೈನಿಕನು “ಸ್ಥಳೀಯ ದನಗಾಹಿಗಳಿಗೆ ಸಹಾಯ ಮಾಡುವಾಗ ಕಳೆದುಹೋಗಿದ್ದಾನೆ” ಎಂದು ಹೇಳಿದ್ದಾರೆ.

ಗಾಲ್ವಾನ್ ಕಣಿವೆಯ ಲಡಾಖ್‌ನಲ್ಲಿ ಚೀನಿಯರೊಂದಿಗಿನ ಘರ್ಷಣೆಯಲ್ಲಿ ಕರ್ತವ್ಯದಲ್ಲಿದ್ದ 20 ಭಾರತೀಯ ಸೈನಿಕರು ಜೂನ್‌ನಲ್ಲಿ ಸಾವನ್ನಪ್ಪಿದ್ದರು. ಆಗ ಉಭಯ ದೇಶಗಳಲ್ಲಿ ಉದ್ವಿಗ್ನತೆ ಉತ್ತುಂಗಕ್ಕೇರಿತ್ತು. ಕಳೆದ ತಿಂಗಳು, ಪ್ಯಾಂಗೊಂಗ್ ತ್ಸೊದಲ್ಲಿ ಎರಡೂ ಪಡೆ ಮುಖಾಮುಖಿಯಾಗುತ್ತಿದ್ದಂತೆ ಒಂದಕ್ಕಿಂತ ಹೆಚ್ಚು ಬಾರಿ ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು.

ಇದನ್ನೂ ಓದಿ: ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಇತ್ತೀಚೆಗೆ ಭಾರತ-ಚೀನಾ ನಡುವಿನ ಸಂಬಂಧ ಚಿಂತಾಜನಕವಾಗಿದ್ದು, ಯಾವ ಸಂಧರ್ಭದಲ್ಲಿ ಏನುಬೇಕಾದರೂ ನಡೆಯಬಹುದು ಎಂಬ ಭೀತಿಯುಂಟಾಗಿದೆ. ಎರಡೂ ದೇಶಗಳೂ ಗಡಿಯಲ್ಲಿ ಸೇನೆಯನ್ನು ಜಮಾವಣೆ ಮಾಡಿವೆ.

ಈ ಪ್ರಕ್ಷುಬ್ದ ವಾತಾವರಣಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿದ್ದು, ಚೀನಾ ವಿರುದ್ಧ ಕೇಂದ್ರ ಸರ್ಕಾರದ ಪ್ರತಿಯೊಬ್ಬರೂ ಒಂದೊಂದು ಮಾಹಿತಿ ನೀಡುತ್ತಿದ್ದಾರೆ. ಒಬ್ಬರು ಯಾವುದೇ ತೊಂದರೆಯಿಲ್ಲ ಎಂದರೆ, ಮತ್ತೊಬ್ಬರು ತೊಂದರೆಯಿದೆ ಎನ್ನುತ್ತಾರೆ. ಇನ್ನೊಬ್ಬರು ಭೂಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂದರೆ, ಮತ್ತೊಬ್ಬರು ಆಕ್ರಮಿಸಿಕೊಂಡಿದೆ ಎನ್ನುತ್ತಾರೆ. ಒಬ್ಬರು ಗೌಪ್ಯ ಮಾತುಕತೆ ನಡೆಸುತ್ತಿದ್ದೇವೆ ಎನ್ನುತ್ತಾರೆ, ಮತ್ತೊಬ್ಬರು ಚೀನಾದೊಟ್ಟಿಗೆ ಯುದ್ಧ ಮಾಡಲು ಸಿದ್ಧ ಎನ್ನುತ್ತಾರೆ.

ಒಟ್ಟಾರೆಯಾಗಿ, ಕೇಂದ್ರ ಸರ್ಕಾರ ಪ್ರಜೆಗಳಿಂದ ಸತ್ಯವನ್ನು ಮುಚ್ಚಿಡುತ್ತಿದೆ ಎಂದು ಹಲವರು ಆರೋಪಿಸಿದ್ದು, ನರೇಂದ್ರ ಮೋದಿಯವರು ಚೀನಾ ಹೆಸರನ್ನು ಹೇಳಲು ಭಯಪಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...