Homeಮುಖಪುಟಲಡಾಖ್: 'ರಾಜ್ಯತ್ವ'ಕ್ಕೆ ಆಗ್ರಹಿಸಿ ಪ್ರತಿಭಟನೆ; ಕೊರೆವ ಚಳಿಯಲ್ಲೂ ಬೀದಿಗಿಳಿದ ಸಾವಿರಾರು ಜನ

ಲಡಾಖ್: ‘ರಾಜ್ಯತ್ವ’ಕ್ಕೆ ಆಗ್ರಹಿಸಿ ಪ್ರತಿಭಟನೆ; ಕೊರೆವ ಚಳಿಯಲ್ಲೂ ಬೀದಿಗಿಳಿದ ಸಾವಿರಾರು ಜನ

- Advertisement -
- Advertisement -

ಲಡಾಖ್ ಪ್ರದೇಶಕ್ಕೆ ‘ರಾಜ್ಯತ್ವ’ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ಜನರು; ಕೊರೆವ ಚಳಿಯಲ್ಲೂ ಲೆಕ್ಕಿಸದೆ ಬೀದಿಗೆ ಇಳಿದಿದ್ದಾರೆ. ‘ಕೇಂದ್ರಾಡಳಿತ ಪ್ರದೇಶಕ್ಕೆ ಆರನೇ ಶೆಡ್ಯೂಲ್ ಅಡಿಯಲ್ಲಿ ರಾಜ್ಯತ್ವ ಮತ್ತು ಸಾಂವಿಧಾನಿಕ ರಕ್ಷಣೆ’ಗಾಗಿ ಒತ್ತಾಯಿಸಿ ಸಾವಿರಾರು ಜನರು ಮೆರವಣಿಗೆಗಳಲ್ಲಿ ಭಾಗವಹಿಸಿದ್ದರಿಂದ ಲಡಾಖ್ ವ್ಯಾಪಕವಾದ ಸ್ಥಗಿತಕ್ಕೆ ಸಾಕ್ಷಿಯಾಯಿತು.

ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆಗಳನ್ನು ಆಯೋಜಿಸಿವೆ. ರಕ್ತ ಹೆಪ್ಪುಗಟ್ಟುವ ತಾಪಮಾವಿದ್ದರೂ ಸಾವಿರಾರು ಜನ ಪುರುಷರು ಮತ್ತು ಮಹಿಳೆಯರು ಲೇಹ್ ಮುಖ್ಯ ನಗರದ ಮೂಲಕ ಮೆರವಣಿಗೆ ನಡೆಸಿದರು. ಲಡಾಖ್‌ನ ಎರಡು ಪ್ರದೇಶಗಳನ್ನು ಪ್ರತಿನಿಧಿಸುವ ‘ಎಲ್‌ಎಬಿ ಮತ್ತು ಕೆಡಿಎ’ಗಳು ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತನೆಯಾದಾಗಿನಿಂದ ರಾಜ್ಯತ್ವ ಮತ್ತು ಆರನೇ ಶೆಡ್ಯೂಲ್ ಸ್ಥಾನಮಾನಕ್ಕಾಗಿ ಪ್ರತಿಪಾದಿಸುತ್ತಿವೆ. ಆಗಸ್ಟ್ 2021 ರಲ್ಲಿ, ಎಲ್‌ಎಬಿ ಮತ್ತು ಕೆಡಿಎ ತಮ್ಮ ಬೇಡಿಕೆಗಳನ್ನು ವರ್ಧಿಸಲು ಒಟ್ಟಿಗೆ ಸೇರಿಕೊಂಡವು.

ಪ್ರತಿಭಟನಾಕಾರರು ಲಡಾಖ್‌ನ ರಾಜ್ಯತ್ವ, ಸಂವಿಧಾನದ ಆರನೇ ಶೆಡ್ಯೂಲ್‌ನ ಅನುಷ್ಠಾನ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಸಂಸದೀಯ ಸ್ಥಾನಗಳನ್ನು ಸ್ಥಾಪಿಸುವ ಘೋಷಣೆಗಳನ್ನು ಕೂಗಿದರು.

ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಮತ್ತು ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) 6 ನೇ ಶೆಡ್ಯೂಲ್ ಜಾರಿ, ರಾಜ್ಯತ್ವ, ಭೂಮಿ ಮತ್ತು ಉದ್ಯೋಗ ಭದ್ರತೆ ಮತ್ತು ಪ್ರತ್ಯೇಕತೆಗೆ ಒತ್ತಾಯಿಸಿ ಕರೆ ನೀಡಿರುವ ‘ಲೇಹ್ ಚಲೋ ಆಂದೋಲನ’ದಲ್ಲಿ ಸಾವಿರಾರು ಜನರು ಭಾಗವಹಿಸಿದ್ದಾರೆ.

ಆರ್ಟಿಕಲ್ 370 ಮತ್ತು 35 (ಎ) ರದ್ದತಿಯ ನಂತರ ಲಡಾಖ್ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತನೆಯಾಯಿತು. ಇದು ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ಕಾರಣವಾಯಿತು. ಲಡಾಖ್‌ನ ನಿವಾಸಿಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಸುದೀರ್ಘ ಕಾಲದ ಕೇಂದ್ರದ ಆಡಳಿತದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ ಮತ್ತು ಈ ಪ್ರದೇಶವನ್ನು ಆಳಲು ತಮ್ಮ ಪ್ರತಿನಿಧಿಗಳನ್ನು ನಾವೆ ಆಯ್ಕೆ ಮಾಡಲು ಸಾಧ್ಯವಾಗುವ ಸಂಪೂರ್ಣ ರಾಜ್ಯತ್ವ ಮಾತ್ರ ತಮ್ಮ ಬೇಡಿಕೆಗಳನ್ನು ಪೂರೈಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಲಡಾಖ್ ಜನರಿಗೆ ‘ಭೂಮಿ ಮತ್ತು ಉದ್ಯೋಗದ ರಕ್ಷಣೆಯನ್ನು ಖಾತ್ರಿಪಡಿಸುವ’ ಉದ್ದೇಶದಿಂದ ಜನವರಿ 2023ರಲ್ಲಿ, ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸಚಿವ ರೈ ನೇತೃತ್ವದಲ್ಲಿ ಉನ್ನತ ಅಧಿಕಾರದ ಸಮಿತಿಯನ್ನು ಸ್ಥಾಪಿಸಿತು. ಲಡಾಖ್‌ನ ಪ್ರತಿನಿಧಿಗಳು ಅಲ್ಲಿನ ಸಾರ್ವಜನಿಕ ಸೇವಾ ಆಯೋಗವನ್ನು ಹಾಕಬೇಕೆಂದು ಒತ್ತಾಯಿಸಿ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

ಇದಲ್ಲದೆ, ಪ್ರತಿನಿಧಿಗಳು ಮತ್ತು ರಾಜ್ಯ ಸಚಿವ ನಡುವಿನ ಮುಂಬರುವ ಸಭೆಯ ದಿನಾಂಕವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ.ಆದರೆ, ಫೆಬ್ರುವರಿ ಆರಂಭದಲ್ಲಿಯೇ ಸಭೆ ನಡೆಯುವ ಸಾಧ್ಯತೆ ಇದೆ ಎಂಬ ಸೂಚನೆಗಳಿವೆ.

ಜ್ಞಾಪಕ ಪತ್ರವು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ 2019 ರ ತಿದ್ದುಪಡಿಗಾಗಿ ಕರಡು ಮಸೂದೆಯನ್ನು ಸಹ ಒಳಗೊಂಡಿದೆ. ಇದು ಲಡಾಖ್ ಪ್ರದೇಶದ ಇಬ್ಬರು ಸಂಸತ್ತಿನ ಸದಸ್ಯರಿಗೆ – ಲೇಹ್‌ನಿಂದ ಒಬ್ಬರು ಮತ್ತು ಕಾರ್ಗಿಲ್‌ನಿಂದ ಒಬ್ಬರಿಗೆ ತಿದ್ದುಪಡಿಯನ್ನು ಪ್ರಸ್ತಾಪಿಸಿದೆ. ಹೆಚ್ಚುವರಿಯಾಗಿ, ಸಿಕ್ಕಿಂನಂತಹ ರಾಜ್ಯಗಳಂತೆಯೇ ಲಡಾಖ್ ರಾಜ್ಯಸಭೆಯಲ್ಲಿ ಒಂದು ಸ್ಥಾನವನ್ನು ಪಡೆಯುತ್ತದೆ ಎಂಬ ಆಶಾವಾದವಿದೆ.

ಇದನ್ನೂ ಓದಿ; ಹೆಚ್ಚು ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿ ಭಾರತದ ಬೆಂಗಳೂರು-ಪುಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...