Homeಮುಖಪುಟಲಡಾಖ್: 'ರಾಜ್ಯತ್ವ'ಕ್ಕೆ ಆಗ್ರಹಿಸಿ ಪ್ರತಿಭಟನೆ; ಕೊರೆವ ಚಳಿಯಲ್ಲೂ ಬೀದಿಗಿಳಿದ ಸಾವಿರಾರು ಜನ

ಲಡಾಖ್: ‘ರಾಜ್ಯತ್ವ’ಕ್ಕೆ ಆಗ್ರಹಿಸಿ ಪ್ರತಿಭಟನೆ; ಕೊರೆವ ಚಳಿಯಲ್ಲೂ ಬೀದಿಗಿಳಿದ ಸಾವಿರಾರು ಜನ

- Advertisement -
- Advertisement -

ಲಡಾಖ್ ಪ್ರದೇಶಕ್ಕೆ ‘ರಾಜ್ಯತ್ವ’ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ಜನರು; ಕೊರೆವ ಚಳಿಯಲ್ಲೂ ಲೆಕ್ಕಿಸದೆ ಬೀದಿಗೆ ಇಳಿದಿದ್ದಾರೆ. ‘ಕೇಂದ್ರಾಡಳಿತ ಪ್ರದೇಶಕ್ಕೆ ಆರನೇ ಶೆಡ್ಯೂಲ್ ಅಡಿಯಲ್ಲಿ ರಾಜ್ಯತ್ವ ಮತ್ತು ಸಾಂವಿಧಾನಿಕ ರಕ್ಷಣೆ’ಗಾಗಿ ಒತ್ತಾಯಿಸಿ ಸಾವಿರಾರು ಜನರು ಮೆರವಣಿಗೆಗಳಲ್ಲಿ ಭಾಗವಹಿಸಿದ್ದರಿಂದ ಲಡಾಖ್ ವ್ಯಾಪಕವಾದ ಸ್ಥಗಿತಕ್ಕೆ ಸಾಕ್ಷಿಯಾಯಿತು.

ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆಗಳನ್ನು ಆಯೋಜಿಸಿವೆ. ರಕ್ತ ಹೆಪ್ಪುಗಟ್ಟುವ ತಾಪಮಾವಿದ್ದರೂ ಸಾವಿರಾರು ಜನ ಪುರುಷರು ಮತ್ತು ಮಹಿಳೆಯರು ಲೇಹ್ ಮುಖ್ಯ ನಗರದ ಮೂಲಕ ಮೆರವಣಿಗೆ ನಡೆಸಿದರು. ಲಡಾಖ್‌ನ ಎರಡು ಪ್ರದೇಶಗಳನ್ನು ಪ್ರತಿನಿಧಿಸುವ ‘ಎಲ್‌ಎಬಿ ಮತ್ತು ಕೆಡಿಎ’ಗಳು ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತನೆಯಾದಾಗಿನಿಂದ ರಾಜ್ಯತ್ವ ಮತ್ತು ಆರನೇ ಶೆಡ್ಯೂಲ್ ಸ್ಥಾನಮಾನಕ್ಕಾಗಿ ಪ್ರತಿಪಾದಿಸುತ್ತಿವೆ. ಆಗಸ್ಟ್ 2021 ರಲ್ಲಿ, ಎಲ್‌ಎಬಿ ಮತ್ತು ಕೆಡಿಎ ತಮ್ಮ ಬೇಡಿಕೆಗಳನ್ನು ವರ್ಧಿಸಲು ಒಟ್ಟಿಗೆ ಸೇರಿಕೊಂಡವು.

ಪ್ರತಿಭಟನಾಕಾರರು ಲಡಾಖ್‌ನ ರಾಜ್ಯತ್ವ, ಸಂವಿಧಾನದ ಆರನೇ ಶೆಡ್ಯೂಲ್‌ನ ಅನುಷ್ಠಾನ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಸಂಸದೀಯ ಸ್ಥಾನಗಳನ್ನು ಸ್ಥಾಪಿಸುವ ಘೋಷಣೆಗಳನ್ನು ಕೂಗಿದರು.

ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಮತ್ತು ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) 6 ನೇ ಶೆಡ್ಯೂಲ್ ಜಾರಿ, ರಾಜ್ಯತ್ವ, ಭೂಮಿ ಮತ್ತು ಉದ್ಯೋಗ ಭದ್ರತೆ ಮತ್ತು ಪ್ರತ್ಯೇಕತೆಗೆ ಒತ್ತಾಯಿಸಿ ಕರೆ ನೀಡಿರುವ ‘ಲೇಹ್ ಚಲೋ ಆಂದೋಲನ’ದಲ್ಲಿ ಸಾವಿರಾರು ಜನರು ಭಾಗವಹಿಸಿದ್ದಾರೆ.

ಆರ್ಟಿಕಲ್ 370 ಮತ್ತು 35 (ಎ) ರದ್ದತಿಯ ನಂತರ ಲಡಾಖ್ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತನೆಯಾಯಿತು. ಇದು ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ಕಾರಣವಾಯಿತು. ಲಡಾಖ್‌ನ ನಿವಾಸಿಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಸುದೀರ್ಘ ಕಾಲದ ಕೇಂದ್ರದ ಆಡಳಿತದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ ಮತ್ತು ಈ ಪ್ರದೇಶವನ್ನು ಆಳಲು ತಮ್ಮ ಪ್ರತಿನಿಧಿಗಳನ್ನು ನಾವೆ ಆಯ್ಕೆ ಮಾಡಲು ಸಾಧ್ಯವಾಗುವ ಸಂಪೂರ್ಣ ರಾಜ್ಯತ್ವ ಮಾತ್ರ ತಮ್ಮ ಬೇಡಿಕೆಗಳನ್ನು ಪೂರೈಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಲಡಾಖ್ ಜನರಿಗೆ ‘ಭೂಮಿ ಮತ್ತು ಉದ್ಯೋಗದ ರಕ್ಷಣೆಯನ್ನು ಖಾತ್ರಿಪಡಿಸುವ’ ಉದ್ದೇಶದಿಂದ ಜನವರಿ 2023ರಲ್ಲಿ, ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸಚಿವ ರೈ ನೇತೃತ್ವದಲ್ಲಿ ಉನ್ನತ ಅಧಿಕಾರದ ಸಮಿತಿಯನ್ನು ಸ್ಥಾಪಿಸಿತು. ಲಡಾಖ್‌ನ ಪ್ರತಿನಿಧಿಗಳು ಅಲ್ಲಿನ ಸಾರ್ವಜನಿಕ ಸೇವಾ ಆಯೋಗವನ್ನು ಹಾಕಬೇಕೆಂದು ಒತ್ತಾಯಿಸಿ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

ಇದಲ್ಲದೆ, ಪ್ರತಿನಿಧಿಗಳು ಮತ್ತು ರಾಜ್ಯ ಸಚಿವ ನಡುವಿನ ಮುಂಬರುವ ಸಭೆಯ ದಿನಾಂಕವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ.ಆದರೆ, ಫೆಬ್ರುವರಿ ಆರಂಭದಲ್ಲಿಯೇ ಸಭೆ ನಡೆಯುವ ಸಾಧ್ಯತೆ ಇದೆ ಎಂಬ ಸೂಚನೆಗಳಿವೆ.

ಜ್ಞಾಪಕ ಪತ್ರವು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ 2019 ರ ತಿದ್ದುಪಡಿಗಾಗಿ ಕರಡು ಮಸೂದೆಯನ್ನು ಸಹ ಒಳಗೊಂಡಿದೆ. ಇದು ಲಡಾಖ್ ಪ್ರದೇಶದ ಇಬ್ಬರು ಸಂಸತ್ತಿನ ಸದಸ್ಯರಿಗೆ – ಲೇಹ್‌ನಿಂದ ಒಬ್ಬರು ಮತ್ತು ಕಾರ್ಗಿಲ್‌ನಿಂದ ಒಬ್ಬರಿಗೆ ತಿದ್ದುಪಡಿಯನ್ನು ಪ್ರಸ್ತಾಪಿಸಿದೆ. ಹೆಚ್ಚುವರಿಯಾಗಿ, ಸಿಕ್ಕಿಂನಂತಹ ರಾಜ್ಯಗಳಂತೆಯೇ ಲಡಾಖ್ ರಾಜ್ಯಸಭೆಯಲ್ಲಿ ಒಂದು ಸ್ಥಾನವನ್ನು ಪಡೆಯುತ್ತದೆ ಎಂಬ ಆಶಾವಾದವಿದೆ.

ಇದನ್ನೂ ಓದಿ; ಹೆಚ್ಚು ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿ ಭಾರತದ ಬೆಂಗಳೂರು-ಪುಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...