Homeಮುಖಪುಟಲಡಾಖ್‌ ರಾಜ್ಯ ಸ್ಥಾನಮಾನದ ಬೇಡಿಕೆ; ಆಗಸ್ಟ್ 15ರಿಂದ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ

ಲಡಾಖ್‌ ರಾಜ್ಯ ಸ್ಥಾನಮಾನದ ಬೇಡಿಕೆ; ಆಗಸ್ಟ್ 15ರಿಂದ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ಹವಾಮಾನ ಕಾರ್ಯಕರ್ತ ಸೋಮನ್ ವಾಂಗ್ಚುಕ್ ಅವರು ಸ್ವಾತಂತ್ರ್ಯ ದಿನದಂದು 28 ದಿನಗಳ ಉಪವಾಸವನ್ನು ಪ್ರಾರಂಭಿಸುವುದಾಗಿ ಭಾನುವಾರ ಘೋಷಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ಮತ್ತು ಸಾಂವಿಧಾನಿಕ ರಕ್ಷಣೆಯ ಬೇಡಿಕೆಗಳ ಕುರಿತು ಮಾತುಕತೆಗೆ ಲಡಾಖ್ ಅಧಿಕಾರಿಗಳನ್ನು ಸರ್ಕಾರ ಆಹ್ವಾನಿಸದಿದ್ದರೆ, ನಾನು ಮತ್ತೆ ಉಪವಾಸವನ್ನು ಪ್ರಾರಂಭಿಸುವುದಾಗಿ ಅವರು ಪ್ರತಿಪಾದಿಸಿದರು.

ಈ ವರ್ಷದ ಮಾರ್ಚ್‌ನಲ್ಲಿ, ವಾಂಗ್‌ಚುಕ್ 21 ದಿನಗಳ ಉಪವಾಸವನ್ನು ಕೈಗೊಂಡಿದ್ದರು. ಕೇವಲ ಉಪ್ಪು ಮತ್ತು ನೀರು ಮಾತ್ರ ಸೇವಿಸಿ ಬದುಕುಳಿದಿದ್ದರು. ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಪರಿಸರ ದುರ್ಬಲ ಪ್ರದೇಶವನ್ನು “ದುರಾಸೆಯ” ಕೈಗಾರಿಕೆಗಳಿಂದ ರಕ್ಷಿಸಲು ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಅದನ್ನು ಸೇರಿಸಲು ಒತ್ತಾಯಿಸಿದರು.

“ಕಳೆದ ವಾರ ಕಾರ್ಗಿಲ್ ವಿಜಯ್ ದಿವಸ್‌ನ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ದ್ರಾಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಲಡಾಖ್‌ನ ಅಪೆಕ್ಸ್ ಬಾಡಿ, ಲೇಹ್ (ಎಬಿಎಲ್) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಪ್ರಧಾನಿ ನರೇಂದ್ರ ಮೋದಿಯವರಿಗೆ ಬೇಡಿಕೆಗಳ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದೆ” ಎಂದು ಅವರು ಹೇಳಿದರು.

ಚುನಾವಣಾ ಸಮಯದಲ್ಲಿ ನಾವು ಸರ್ಕಾರವನ್ನು ಹೆಚ್ಚು ಒತ್ತಾಯಿಸಲು ಬಯಸುವುದಿಲ್ಲ. ಚುನಾವಣೆಯ ನಂತರ ಅವರಿಗೆ ಸ್ವಲ್ಪ ಉಸಿರಾಡಲು ನಾವು ಬಯಸುತ್ತೇವೆ ಎಂದು ಅವರು ಹೇಳಿದರು. ಹೊಸ ಸರ್ಕಾರವು ಕೆಲವು ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾವು ಭರವಸೆ ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಜ್ಞಾಪನಾ ಪತ್ರವನ್ನು ಸಲ್ಲಿಸಿದ ನಂತರ ಅವರು ನಮ್ಮ ನಾಯಕರನ್ನು ಮಾತುಕತೆಗೆ ಆಹ್ವಾನಿಸುತ್ತಾರೆ ಎಂದು ನಾವು ಭಾವಿಸುತ್ತೇವೆ. ಅದು ಸಂಭವಿಸದಿದ್ದರೆ, ನಾವು ಮತ್ತೊಂದು ಸುತ್ತಿನ ಪ್ರತಿಭಟನೆಯನ್ನು ಪ್ರಾರಂಭಿಸುತ್ತೇವೆ” ಎಂದು ವಾಂಗ್ಚುಕ್ ಹೇಳಿದರು.

ಸರ್ಕಾರ ತನ್ನ ಭರವಸೆ ಹಿಂತೆಗೆದುಕೊಂಡಿತು

ಪರಿಸರ ದುರ್ಬಲ ಪ್ರದೇಶದ “ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಬಯಸುವ ಕೈಗಾರಿಕೋದ್ಯಮಿಗಳ” ಒತ್ತಡದ ಮೇರೆಗೆ ಲಡಾಖ್‌ಗೆ ಬುಡಕಟ್ಟು ಪ್ರದೇಶದ ಸ್ಥಾನಮಾನ ಮತ್ತು ಸಂಪೂರ್ಣ ರಾಜ್ಯತ್ವವನ್ನು ನೀಡುವ ಭರವಸೆಯನ್ನು ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಲಡಾಖ್ ಸ್ವಾಯತ್ತ ಹಿಲ್ ಡೆವಲಪ್‌ಮೆಂಟ್ ಕೌನ್ಸಿಲ್ (ಎಲ್‌ಎಹೆಚ್‌ಡಿಸಿ) ಒಪ್ಪಿಗೆಯಿಲ್ಲದೆ ಸೌರ ವಿದ್ಯುತ್ ಯೋಜನೆಗಳಿಗೆ ಲಡಾಖ್‌ನಲ್ಲಿ ಭೂಮಿಯನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಹೆಸರಾಂತ ಎಂಜಿನಿಯರ್ ಆರೋಪಿಸಿದ್ದಾರೆ.

“ಎಲ್‌ಎಎಚ್‌ಡಿಸಿ ಯ ಅಧಿಕಾರವನ್ನು ದುರ್ಬಲಗೊಳಿಸಲಾಗುತ್ತಿದೆ ಮತ್ತು ಮೇಲಿನಿಂದ ಅನುಮತಿಗಳನ್ನು ನೀಡಲಾಗುತ್ತಿದೆ. ಅದಕ್ಕಾಗಿಯೇ ಲಡಾಖ್ ಜನರು ಭಯಭೀತರಾಗಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ಲೋಕಸಭೆಯಲ್ಲಿ ಇಂದು ಕೇಂದ್ರ ಬಜೆಟ್ ಕುರಿತು ಮಾತನಾಡಲಿರುವ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...