Homeಮುಖಪುಟಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ...

ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರವು ತನ್ನ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ ನೀಡುವ ಮಾಸಿಕ ಪಾವತಿಯನ್ನು 8 ಲಕ್ಷ ಮಹಿಳೆಯರಿಗೆ 1,500 ರೂ.ಗಳಿಂದ 500 ರೂ.ಗಳಿಗೆ ಕಡಿತಗೊಳಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅನುದಾನ ಕಡಿತಗೊಂಡ ಮಹಿಳೆಯರುವ ನಮೋ ಶೇತ್ಕರಿ ಮಹಾಸನ್ಮಾನ್ ನಿಧಿ ಯೋಜನೆಯಡಿಯಲ್ಲಿ ತಿಂಗಳಿಗೆ 1,000 ರೂ.ಗಳನ್ನು ಪಡೆಯುತ್ತಿರುವವರಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಲಡ್ಕಿ ಬಹಿನ್ ಯೋಜನೆಯ ನಿಯಮಗಳ ಅಡಿಯಲ್ಲಿ, ಸರ್ಕಾರ ನೀಡುವ ಒಟ್ಟು ಮಾಸಿಕ ಪ್ರಯೋಜನದಲ್ಲಿ 1,500 ರೂ.ಗಳನ್ನು ಮೀರದಿದ್ದರೆ ಮಾತ್ರ ಫಲಾನುಭವಿಗಳು ಇತರ ಸರ್ಕಾರಿ ಸಹಾಯವನ್ನು ಪಡೆಯಬಹುದಾಗಿದೆ. ಯೋಜನೆಯು ಅರ್ಹತಾ ಮಾನದಂಡಗಳನ್ನು ಪೂರೈಸುವವರಿಗೆ ಸೀಮಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ರಾಜ್ಯವು ನಡೆಸುತ್ತಿರುವ ಪರಿಶೀಲನೆಯ ಭಾಗವಾಗಿ ಈ ಕಡಿತವನ್ನು ಮಾಡಲಾಗಿದೆ.

“ಸದ್ಯದ ಪರಿಶೀಲನೆ ನಡೆಯುತ್ತಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ಪತ್ರಿಕೆ ಉಲ್ಲೇಖಿಸಿದೆ. “ಮೊದಲು ಜಿಲ್ಲೆಗಳಿಂದ ರಾಜ್ಯ ಪ್ರಧಾನ ಕಚೇರಿಗೆ ಕಳುಹಿಸಲಾದ ಅರ್ಜಿಗಳನ್ನು ಸ್ಕ್ಯಾನ್ ಮಾಡುತ್ತೇವೆ. ನಂತರ ಅರ್ಹ ಪ್ರಕರಣಗಳನ್ನು ಮರುಪರಿಶೀಲಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

ಪರಿಶೀಲನೆಯ ನಂತರ ಫಲಾನುಭವಿಗಳ ಸಂಖ್ಯೆ 10 ರಿಂದ 15 ಲಕ್ಷದಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಹಿಂದೆ ಎಂದು ಹೇಳಿದ್ದರು. “ನಾವು ಮಾನದಂಡಗಳನ್ನು ಅಥವಾ ಹಣವನ್ನು ಬದಲಾಯಿಸುತ್ತಿಲ್ಲ. ಅರ್ಹರಿಗೆ ಮಾತ್ರ ಸ್ಟೈಫಂಡ್ ಸಿಗಬೇಕು ಎಂದು ಖಚಿತಪಡಿಸಿಕೊಳ್ಳುತ್ತಿದ್ದೇವೆ” ಎಂದು ಅವರು ಹೇಳಿದ್ದರು.

ಅಕ್ಟೋಬರ್ ವೇಳೆಗೆ ರಾಜ್ಯವು ಈ ಯೋಜನೆಗೆ ಸುಮಾರು 2.63 ಕೋಟಿ ಅರ್ಜಿಗಳನ್ನು ಸ್ವೀಕರಿಸಿತ್ತು. ಪರಿಶೀಲನೆಯ ನಂತರ, ಫೆಬ್ರವರಿ ವೇಳೆಗೆ ಈ ಅಂಕಿ ಅಂಶವು 2.52 ಕೋಟಿಗಳಲ್ಲಿ 11 ಲಕ್ಷ ಇಳಿದಿದೆ, ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ 2.46 ಕೋಟಿ ಫಲಾನುಭವಿಗಳಿಗೆ ಹಣ ಪಾವತಿ ಮಾಡಲಾಗಿದೆ.

ಅರ್ಹತೆ ಪಡೆಯಲು, ಅರ್ಜಿದಾರರು 18 ರಿಂದ 65 ವರ್ಷ ವಯಸ್ಸಿನವರಾಗಿರಬೇಕು, ರಾಜ್ಯದಲ್ಲಿ ನೆಲೆಸಿರಬೇಕು ಮತ್ತು ವಾರ್ಷಿಕವಾಗಿ 2.5 ಲಕ್ಷ ರೂ.ಗಿಂತ ಕಡಿಮೆ ಕುಟುಂಬದ ಆದಾಯವನ್ನು ಹೊಂದಿರಬೇಕು. ಸರ್ಕಾರಿ ಉದ್ಯೋಗಿ ಅಥವಾ ನಾಲ್ಕು ಚಕ್ರಗಳ ವಾಹನವನ್ನು ಹೊಂದಿರುವ ಕುಟುಂಬಗಳು ಈ ಯೋಜನೆಗೆ ಅರ್ಹರಲ್ಲ.

ಸರ್ಕಾರದ ಈ ನಡೆಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿದ್ದು, 8 ಲಕ್ಷ ಮಹಿಳೆಯರಿಗೆ ಹಣ ಪಾವತಿಯನ್ನು ಕಡಿಮೆ ಮಾಡುವ ಸರ್ಕಾರದ ನಿರ್ಧಾರವು ನಾಗರಿಕರಿಗೆ ಮಾಡಿದ ದ್ರೋಹ ಎಂದು ಹೇಳಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್, “ಸರ್ಕಾರ ರಚಿಸಿದ ಐದು ತಿಂಗಳೊಳಗೆ, ಮಹಾಯುತಿ ರಾಜ್ಯದ ಜನರಿಗೆ ಎರಡು ಬಾರಿ ದ್ರೋಹ ಮಾಡಿದೆ” ಎಂದು ಹೇಳಿದ್ದಾರೆ.

“ಇತ್ತೀಚೆಗಷ್ಟೆ, ರಾಜ್ಯ ಸರ್ಕಾರವು ತನ್ನ ಕೃಷಿ ಸಾಲ ಮನ್ನಾ ಭರವಸೆಯನ್ನು ರದ್ದುಗೊಳಿಸಿತ್ತು ಮತ್ತು ಈಗ 8 ಲಕ್ಷ ಫಲಾನುಭವಿಗಳಿಗೆ ಲಡ್ಕಿ ಬಹಿನ್ ಹಣವನ್ನು ಕಡಿಮೆ ಮಾಡುವ ಮೂಲಕ ದ್ರೋಹ ಮಾಡುತ್ತಿದೆ. ಮುಂಬರುವ ತಿಂಗಳುಗಳಲ್ಲಿ ಈ ಸರ್ಕಾರದಿಂದ ಇಂತಹ ಹೆಚ್ಚಿನ ದ್ರೋಹಗಳಿಗೆ ನಾಗರಿಕರು ಸಿದ್ಧರಾಗಿರಬೇಕು” ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ವಿಜಯ್ ವಡೆಟ್ಟಿವಾರ್ ಈ ಯೋಜನೆಯನ್ನು ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಾತ್ರ ಪರಿಚಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ ಭಾಗ; ಸಿಎಂ ಸಿದ್ದರಾಮಯ್ಯ

ಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ ಭಾಗ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...