Homeಮುಖಪುಟಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ...

ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರವು ತನ್ನ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ ನೀಡುವ ಮಾಸಿಕ ಪಾವತಿಯನ್ನು 8 ಲಕ್ಷ ಮಹಿಳೆಯರಿಗೆ 1,500 ರೂ.ಗಳಿಂದ 500 ರೂ.ಗಳಿಗೆ ಕಡಿತಗೊಳಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅನುದಾನ ಕಡಿತಗೊಂಡ ಮಹಿಳೆಯರುವ ನಮೋ ಶೇತ್ಕರಿ ಮಹಾಸನ್ಮಾನ್ ನಿಧಿ ಯೋಜನೆಯಡಿಯಲ್ಲಿ ತಿಂಗಳಿಗೆ 1,000 ರೂ.ಗಳನ್ನು ಪಡೆಯುತ್ತಿರುವವರಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಲಡ್ಕಿ ಬಹಿನ್ ಯೋಜನೆಯ ನಿಯಮಗಳ ಅಡಿಯಲ್ಲಿ, ಸರ್ಕಾರ ನೀಡುವ ಒಟ್ಟು ಮಾಸಿಕ ಪ್ರಯೋಜನದಲ್ಲಿ 1,500 ರೂ.ಗಳನ್ನು ಮೀರದಿದ್ದರೆ ಮಾತ್ರ ಫಲಾನುಭವಿಗಳು ಇತರ ಸರ್ಕಾರಿ ಸಹಾಯವನ್ನು ಪಡೆಯಬಹುದಾಗಿದೆ. ಯೋಜನೆಯು ಅರ್ಹತಾ ಮಾನದಂಡಗಳನ್ನು ಪೂರೈಸುವವರಿಗೆ ಸೀಮಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ರಾಜ್ಯವು ನಡೆಸುತ್ತಿರುವ ಪರಿಶೀಲನೆಯ ಭಾಗವಾಗಿ ಈ ಕಡಿತವನ್ನು ಮಾಡಲಾಗಿದೆ.

“ಸದ್ಯದ ಪರಿಶೀಲನೆ ನಡೆಯುತ್ತಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ಪತ್ರಿಕೆ ಉಲ್ಲೇಖಿಸಿದೆ. “ಮೊದಲು ಜಿಲ್ಲೆಗಳಿಂದ ರಾಜ್ಯ ಪ್ರಧಾನ ಕಚೇರಿಗೆ ಕಳುಹಿಸಲಾದ ಅರ್ಜಿಗಳನ್ನು ಸ್ಕ್ಯಾನ್ ಮಾಡುತ್ತೇವೆ. ನಂತರ ಅರ್ಹ ಪ್ರಕರಣಗಳನ್ನು ಮರುಪರಿಶೀಲಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

ಪರಿಶೀಲನೆಯ ನಂತರ ಫಲಾನುಭವಿಗಳ ಸಂಖ್ಯೆ 10 ರಿಂದ 15 ಲಕ್ಷದಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಹಿಂದೆ ಎಂದು ಹೇಳಿದ್ದರು. “ನಾವು ಮಾನದಂಡಗಳನ್ನು ಅಥವಾ ಹಣವನ್ನು ಬದಲಾಯಿಸುತ್ತಿಲ್ಲ. ಅರ್ಹರಿಗೆ ಮಾತ್ರ ಸ್ಟೈಫಂಡ್ ಸಿಗಬೇಕು ಎಂದು ಖಚಿತಪಡಿಸಿಕೊಳ್ಳುತ್ತಿದ್ದೇವೆ” ಎಂದು ಅವರು ಹೇಳಿದ್ದರು.

ಅಕ್ಟೋಬರ್ ವೇಳೆಗೆ ರಾಜ್ಯವು ಈ ಯೋಜನೆಗೆ ಸುಮಾರು 2.63 ಕೋಟಿ ಅರ್ಜಿಗಳನ್ನು ಸ್ವೀಕರಿಸಿತ್ತು. ಪರಿಶೀಲನೆಯ ನಂತರ, ಫೆಬ್ರವರಿ ವೇಳೆಗೆ ಈ ಅಂಕಿ ಅಂಶವು 2.52 ಕೋಟಿಗಳಲ್ಲಿ 11 ಲಕ್ಷ ಇಳಿದಿದೆ, ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ 2.46 ಕೋಟಿ ಫಲಾನುಭವಿಗಳಿಗೆ ಹಣ ಪಾವತಿ ಮಾಡಲಾಗಿದೆ.

ಅರ್ಹತೆ ಪಡೆಯಲು, ಅರ್ಜಿದಾರರು 18 ರಿಂದ 65 ವರ್ಷ ವಯಸ್ಸಿನವರಾಗಿರಬೇಕು, ರಾಜ್ಯದಲ್ಲಿ ನೆಲೆಸಿರಬೇಕು ಮತ್ತು ವಾರ್ಷಿಕವಾಗಿ 2.5 ಲಕ್ಷ ರೂ.ಗಿಂತ ಕಡಿಮೆ ಕುಟುಂಬದ ಆದಾಯವನ್ನು ಹೊಂದಿರಬೇಕು. ಸರ್ಕಾರಿ ಉದ್ಯೋಗಿ ಅಥವಾ ನಾಲ್ಕು ಚಕ್ರಗಳ ವಾಹನವನ್ನು ಹೊಂದಿರುವ ಕುಟುಂಬಗಳು ಈ ಯೋಜನೆಗೆ ಅರ್ಹರಲ್ಲ.

ಸರ್ಕಾರದ ಈ ನಡೆಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿದ್ದು, 8 ಲಕ್ಷ ಮಹಿಳೆಯರಿಗೆ ಹಣ ಪಾವತಿಯನ್ನು ಕಡಿಮೆ ಮಾಡುವ ಸರ್ಕಾರದ ನಿರ್ಧಾರವು ನಾಗರಿಕರಿಗೆ ಮಾಡಿದ ದ್ರೋಹ ಎಂದು ಹೇಳಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್, “ಸರ್ಕಾರ ರಚಿಸಿದ ಐದು ತಿಂಗಳೊಳಗೆ, ಮಹಾಯುತಿ ರಾಜ್ಯದ ಜನರಿಗೆ ಎರಡು ಬಾರಿ ದ್ರೋಹ ಮಾಡಿದೆ” ಎಂದು ಹೇಳಿದ್ದಾರೆ.

“ಇತ್ತೀಚೆಗಷ್ಟೆ, ರಾಜ್ಯ ಸರ್ಕಾರವು ತನ್ನ ಕೃಷಿ ಸಾಲ ಮನ್ನಾ ಭರವಸೆಯನ್ನು ರದ್ದುಗೊಳಿಸಿತ್ತು ಮತ್ತು ಈಗ 8 ಲಕ್ಷ ಫಲಾನುಭವಿಗಳಿಗೆ ಲಡ್ಕಿ ಬಹಿನ್ ಹಣವನ್ನು ಕಡಿಮೆ ಮಾಡುವ ಮೂಲಕ ದ್ರೋಹ ಮಾಡುತ್ತಿದೆ. ಮುಂಬರುವ ತಿಂಗಳುಗಳಲ್ಲಿ ಈ ಸರ್ಕಾರದಿಂದ ಇಂತಹ ಹೆಚ್ಚಿನ ದ್ರೋಹಗಳಿಗೆ ನಾಗರಿಕರು ಸಿದ್ಧರಾಗಿರಬೇಕು” ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ವಿಜಯ್ ವಡೆಟ್ಟಿವಾರ್ ಈ ಯೋಜನೆಯನ್ನು ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಾತ್ರ ಪರಿಚಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ ಭಾಗ; ಸಿಎಂ ಸಿದ್ದರಾಮಯ್ಯ

ಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ ಭಾಗ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...