Homeಮುಖಪುಟಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ...

ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರವು ತನ್ನ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ ನೀಡುವ ಮಾಸಿಕ ಪಾವತಿಯನ್ನು 8 ಲಕ್ಷ ಮಹಿಳೆಯರಿಗೆ 1,500 ರೂ.ಗಳಿಂದ 500 ರೂ.ಗಳಿಗೆ ಕಡಿತಗೊಳಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅನುದಾನ ಕಡಿತಗೊಂಡ ಮಹಿಳೆಯರುವ ನಮೋ ಶೇತ್ಕರಿ ಮಹಾಸನ್ಮಾನ್ ನಿಧಿ ಯೋಜನೆಯಡಿಯಲ್ಲಿ ತಿಂಗಳಿಗೆ 1,000 ರೂ.ಗಳನ್ನು ಪಡೆಯುತ್ತಿರುವವರಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಲಡ್ಕಿ ಬಹಿನ್ ಯೋಜನೆಯ ನಿಯಮಗಳ ಅಡಿಯಲ್ಲಿ, ಸರ್ಕಾರ ನೀಡುವ ಒಟ್ಟು ಮಾಸಿಕ ಪ್ರಯೋಜನದಲ್ಲಿ 1,500 ರೂ.ಗಳನ್ನು ಮೀರದಿದ್ದರೆ ಮಾತ್ರ ಫಲಾನುಭವಿಗಳು ಇತರ ಸರ್ಕಾರಿ ಸಹಾಯವನ್ನು ಪಡೆಯಬಹುದಾಗಿದೆ. ಯೋಜನೆಯು ಅರ್ಹತಾ ಮಾನದಂಡಗಳನ್ನು ಪೂರೈಸುವವರಿಗೆ ಸೀಮಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ರಾಜ್ಯವು ನಡೆಸುತ್ತಿರುವ ಪರಿಶೀಲನೆಯ ಭಾಗವಾಗಿ ಈ ಕಡಿತವನ್ನು ಮಾಡಲಾಗಿದೆ.

“ಸದ್ಯದ ಪರಿಶೀಲನೆ ನಡೆಯುತ್ತಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ಪತ್ರಿಕೆ ಉಲ್ಲೇಖಿಸಿದೆ. “ಮೊದಲು ಜಿಲ್ಲೆಗಳಿಂದ ರಾಜ್ಯ ಪ್ರಧಾನ ಕಚೇರಿಗೆ ಕಳುಹಿಸಲಾದ ಅರ್ಜಿಗಳನ್ನು ಸ್ಕ್ಯಾನ್ ಮಾಡುತ್ತೇವೆ. ನಂತರ ಅರ್ಹ ಪ್ರಕರಣಗಳನ್ನು ಮರುಪರಿಶೀಲಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

ಪರಿಶೀಲನೆಯ ನಂತರ ಫಲಾನುಭವಿಗಳ ಸಂಖ್ಯೆ 10 ರಿಂದ 15 ಲಕ್ಷದಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಹಿಂದೆ ಎಂದು ಹೇಳಿದ್ದರು. “ನಾವು ಮಾನದಂಡಗಳನ್ನು ಅಥವಾ ಹಣವನ್ನು ಬದಲಾಯಿಸುತ್ತಿಲ್ಲ. ಅರ್ಹರಿಗೆ ಮಾತ್ರ ಸ್ಟೈಫಂಡ್ ಸಿಗಬೇಕು ಎಂದು ಖಚಿತಪಡಿಸಿಕೊಳ್ಳುತ್ತಿದ್ದೇವೆ” ಎಂದು ಅವರು ಹೇಳಿದ್ದರು.

ಅಕ್ಟೋಬರ್ ವೇಳೆಗೆ ರಾಜ್ಯವು ಈ ಯೋಜನೆಗೆ ಸುಮಾರು 2.63 ಕೋಟಿ ಅರ್ಜಿಗಳನ್ನು ಸ್ವೀಕರಿಸಿತ್ತು. ಪರಿಶೀಲನೆಯ ನಂತರ, ಫೆಬ್ರವರಿ ವೇಳೆಗೆ ಈ ಅಂಕಿ ಅಂಶವು 2.52 ಕೋಟಿಗಳಲ್ಲಿ 11 ಲಕ್ಷ ಇಳಿದಿದೆ, ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ 2.46 ಕೋಟಿ ಫಲಾನುಭವಿಗಳಿಗೆ ಹಣ ಪಾವತಿ ಮಾಡಲಾಗಿದೆ.

ಅರ್ಹತೆ ಪಡೆಯಲು, ಅರ್ಜಿದಾರರು 18 ರಿಂದ 65 ವರ್ಷ ವಯಸ್ಸಿನವರಾಗಿರಬೇಕು, ರಾಜ್ಯದಲ್ಲಿ ನೆಲೆಸಿರಬೇಕು ಮತ್ತು ವಾರ್ಷಿಕವಾಗಿ 2.5 ಲಕ್ಷ ರೂ.ಗಿಂತ ಕಡಿಮೆ ಕುಟುಂಬದ ಆದಾಯವನ್ನು ಹೊಂದಿರಬೇಕು. ಸರ್ಕಾರಿ ಉದ್ಯೋಗಿ ಅಥವಾ ನಾಲ್ಕು ಚಕ್ರಗಳ ವಾಹನವನ್ನು ಹೊಂದಿರುವ ಕುಟುಂಬಗಳು ಈ ಯೋಜನೆಗೆ ಅರ್ಹರಲ್ಲ.

ಸರ್ಕಾರದ ಈ ನಡೆಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿದ್ದು, 8 ಲಕ್ಷ ಮಹಿಳೆಯರಿಗೆ ಹಣ ಪಾವತಿಯನ್ನು ಕಡಿಮೆ ಮಾಡುವ ಸರ್ಕಾರದ ನಿರ್ಧಾರವು ನಾಗರಿಕರಿಗೆ ಮಾಡಿದ ದ್ರೋಹ ಎಂದು ಹೇಳಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್, “ಸರ್ಕಾರ ರಚಿಸಿದ ಐದು ತಿಂಗಳೊಳಗೆ, ಮಹಾಯುತಿ ರಾಜ್ಯದ ಜನರಿಗೆ ಎರಡು ಬಾರಿ ದ್ರೋಹ ಮಾಡಿದೆ” ಎಂದು ಹೇಳಿದ್ದಾರೆ.

“ಇತ್ತೀಚೆಗಷ್ಟೆ, ರಾಜ್ಯ ಸರ್ಕಾರವು ತನ್ನ ಕೃಷಿ ಸಾಲ ಮನ್ನಾ ಭರವಸೆಯನ್ನು ರದ್ದುಗೊಳಿಸಿತ್ತು ಮತ್ತು ಈಗ 8 ಲಕ್ಷ ಫಲಾನುಭವಿಗಳಿಗೆ ಲಡ್ಕಿ ಬಹಿನ್ ಹಣವನ್ನು ಕಡಿಮೆ ಮಾಡುವ ಮೂಲಕ ದ್ರೋಹ ಮಾಡುತ್ತಿದೆ. ಮುಂಬರುವ ತಿಂಗಳುಗಳಲ್ಲಿ ಈ ಸರ್ಕಾರದಿಂದ ಇಂತಹ ಹೆಚ್ಚಿನ ದ್ರೋಹಗಳಿಗೆ ನಾಗರಿಕರು ಸಿದ್ಧರಾಗಿರಬೇಕು” ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ವಿಜಯ್ ವಡೆಟ್ಟಿವಾರ್ ಈ ಯೋಜನೆಯನ್ನು ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಾತ್ರ ಪರಿಚಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ ಭಾಗ; ಸಿಎಂ ಸಿದ್ದರಾಮಯ್ಯ

ಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ ಭಾಗ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...