Homeಕರ್ನಾಟಕಬೆಂಗಳೂರು ಮಹಾನಗರ ಪಾಲಿಕೆಯಿಂದ ಕೆರೆ ಒತ್ತುವರಿ ತೆರವು: ಮನೆಗಳು ನೆಲಸಮ

ಬೆಂಗಳೂರು ಮಹಾನಗರ ಪಾಲಿಕೆಯಿಂದ ಕೆರೆ ಒತ್ತುವರಿ ತೆರವು: ಮನೆಗಳು ನೆಲಸಮ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ನಗರದಲ್ಲಿನ ಕೆರೆ ಒತ್ತುವರಿಯ ತೆರವಿಗೆ ಮುಂದಾಗಿದ್ದು, ಇಂದು ತೆರವು ಕಾರ್ಯಾಚರಣೆಯನ್ನು ಆರಂಭಿಸಿದೆ. ಪೂರ್ವ ಮತ್ತು ದಕ್ಷಿಣ ಬೆಂಗಳೂರಿನ ಜುನ್ನಸಂದ್ರ ಕೆರೆ ಒತ್ತುವರಿ ಮಾಡಿ ಕಟ್ಟಲಾಗಿದ್ದ ಮನೆಗಳನ್ನು ಬಿಬಿಎಂಪಿ ಅಧಿಕಾರಿಗಳು ಇಂದು ನೆಲಸಮಗೊಳಿಸಿದ್ದಾರೆ.

ದಕ್ಷಿಣ ಬೆಂಗಳೂರಿನ ಜುನ್ನಸಂದ್ರ ಕೆರೆಯ ಒತ್ತುವರಿ ಈಗಷ್ಟೆ ಪ್ರಾರಂಭವಾಗಿದ್ದು ಅರಂಭಿಕ ಹಂತದಲ್ಲಿಯೇ ಬಿಬಿಎಂಪಿ ಕ್ರಮಕ್ಕೆ ಮುಂದಾಗಿದೆ. ಪೊಲೀಸರು ಮತ್ತು ಸಿಬ್ಬಂದಿಗಳ ನೆರವಿನಿಂದ ಅಕ್ರಮವಾಗಿ ನಿರ್ಮಿಸಲಾಗಿದ್ದ 12 ಮನೆಗಳನ್ನು ಸುಲಭವಾಗಿ ತೆರವುಗೊಳಿಸಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಬಿಬಿಎಂಪಿ ಜುನ್ನಸಂದ್ರ ಕೆರೆ ಒತ್ತುವರಿ ಮಾಡಿ ಮನೆಗಳನ್ನು ನಿರ್ಮಿಸಿಕೊಂಡಿದ್ದವರ ವಿರುದ್ಧ ಪೋಲಿಸ್ ಕಂಪ್ಲೇಟ್‌ ದಾಖಲಿಸಿತ್ತು. ಇಡೀ ಕೆರೆಯ ಪ್ರದೇಶವನ್ನು ಕೆಲವರು ತಮ್ಮದೆಂದು ಹೇಳಿಕೊಂಡು ಮನೆ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಿದ್ದರು. ನಿರ್ಮಾಣ ಕಾರ್ಯಕ್ಕೆ ಶೆಡ್‌ಗಳನ್ನು ಹಾಕಲಾಗಿತ್ತು ಎಂದು ಬಿಬಿಎಂಪಿಯ ಸಹಾಯಕ ಇಂಜಿನೀಯರ್ ಕೆ.ವಿ.ಪ್ರಕಾಶ್ ಮಾಹಿತಿ ನೀಡಿದ್ದಾರೆ.

ಸ್ಥಳೀಯರು ಕೆರೆ ಒತ್ತುವರಿ ಸಂಬಂಧ ಬಿಬಿಎಂಪಿಗೆ ದುರು ನೀಡಿದ್ದರು. ಸ್ಥಳೀಯರ ಮಾಹಿತಿ ಆಧರಿಸಿ ತನಿಖೆಯನ್ನು ನಡೆಸಿ ಒತ್ತುವರಿಯನ್ನು ತೆರವುಗೊಳಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ವಾರಣಾಸಿ ಕೆರೆಯ 1 ಎಕರೆ 6 ಗುಂಟೆಗಳಷ್ಟು ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. 8 ಎಕರೆ 24 ಗುಂಟೆ ವಿಸ್ತೀರ್ಣದ ಕೆರೆಯ 5 ಭಾಗಗಳಲ್ಲಿ ಒತ್ತುವರಿ ನಡೆದಿರುವುದು ಬೆಳಕಿಗೆ ಬಂದಿತ್ತು. 12 ಮನೆಗಳನ್ನು ಕೆರೆಯ ಜಾಗದಲ್ಲಿ ಅಕ್ರಮವಾಗಿ ಕಟ್ಟಲಾಗಿದೆ. ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡು ನ್ಯಾಯಾಲಾಯದ ಆದೇಶದ ಮೇರೆಗೆ ಕ್ರಮ ಜರುಗಿಸಲಾಗಿದೆ ಬಿಬಿಎಂಪಿ ವಿಶೇಷ ಆಯುಕ್ತ ಬಿ ರೆಡ್ಡಿ ಶಂಕರ್‌ ಬಾಬು ತಿಳಿಸಿದ್ದಾರೆ.

ವಾರಣಾಸಿ ಕೆರೆಯ ಅಭಿವೃದ್ಧಿಗೆ ಬಿಬಿಎಂಪಿ 3 ಕೋಟಿ ಮೊತ್ತದ ಯೋಜನೆಯನ್ನು ರೂಪಿಸಿದ್ದು ಅಂತರ್ಜಲ ಹೆಚ್ಚಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ಬಿಬಿಎಂಪಿಯ ವಿಳಂಬದ ಕ್ರಮ

ಬಿಬಿಎಂಪಿ ಕ್ರಮಕ್ಕೆ ಹಲವು ಪರಿಸರ ಸಂಘಟನೆಗಳು ಮತ್ತು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿಯ ವಿಳಂಬ ಧೋರಣೆಯಿಂದ ಇನ್ನು ಸಾಕಷ್ಟು ಕೆರೆಗಳು ಭೂಗಳ್ಳರ ಪಾಲಾಗುತ್ತಿದೆ. ಒತ್ತುವರಿ ಕಂಡುಬಂದ ತಕ್ಷಣ ಬಿಬಿಎಂಪಿ ಕ್ರಮಕ್ಕೆ ಮುಂದಾಗಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಒಂದೋ ಎರಡೋ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿದರೆ ಸಾಲುವುದಿಲ್ಲ. 100ಕ್ಕೂ ಹೆಚ್ಚು ಕೆರೆಗಳು ಒತ್ತುವರಿಯಾಗಿವೆ. ಬಿಬಿಎಂಪಿ ಆ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಲು ಮುಂದಾಗಬೇಕೆಂದು ಫ್ರೆಂಡ್ಸ್‌ ಅಫ್‌ ಲೇಕ್ಸ್‌ (ಕೆರೆಯ ಗೆಳೆಯರು) ಸಂಘಟನೆಯ ಸಂಸ್ಥಾಪಕ ವಿ ರಾಮಪ್ರಸಾದ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ಕೆರೆ ಒತ್ತುವರಿಗಳನ್ನು ತೆರವುಗೊಳಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್‌ ಮಾರ್ಚ್‌ 2020ರಲ್ಲಿ ಬಿಬಿಎಂಪಿಗೆ ಆದೇಶಿಸಿತ್ತು.

ಕಾನೂನು ಪ್ರಕ್ರಿಯೆಗಳನ್ನು ಪೂರೈಸಲು ಸಾಕಷ್ಟು ಸಮಯ ಹಿಡಿಯುತ್ತದೆ. ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ. ಕೆಲವು ಒತ್ತುವರಿದಾರರು ತೆರವಿಗೆ ತಡೆಕೋರಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೊರೊನಾ ಮತ್ತು ಲಾಕ್‌ಡೌನ್ ನಿರ್ಭಂದಗಳು ತೆರವು ಕಾರ್ಯಕ್ಕೆ ಸಾಕಷ್ಟು ಅಡಚಣೆಯನ್ನುಂಟುಮಾಡಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಬಿ. ರೆಡ್ಡಿ ಶಂಕರ್ ಬಾಬು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...