Homeಕರ್ನಾಟಕಬೆಂಗಳೂರು ಮಹಾನಗರ ಪಾಲಿಕೆಯಿಂದ ಕೆರೆ ಒತ್ತುವರಿ ತೆರವು: ಮನೆಗಳು ನೆಲಸಮ

ಬೆಂಗಳೂರು ಮಹಾನಗರ ಪಾಲಿಕೆಯಿಂದ ಕೆರೆ ಒತ್ತುವರಿ ತೆರವು: ಮನೆಗಳು ನೆಲಸಮ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ನಗರದಲ್ಲಿನ ಕೆರೆ ಒತ್ತುವರಿಯ ತೆರವಿಗೆ ಮುಂದಾಗಿದ್ದು, ಇಂದು ತೆರವು ಕಾರ್ಯಾಚರಣೆಯನ್ನು ಆರಂಭಿಸಿದೆ. ಪೂರ್ವ ಮತ್ತು ದಕ್ಷಿಣ ಬೆಂಗಳೂರಿನ ಜುನ್ನಸಂದ್ರ ಕೆರೆ ಒತ್ತುವರಿ ಮಾಡಿ ಕಟ್ಟಲಾಗಿದ್ದ ಮನೆಗಳನ್ನು ಬಿಬಿಎಂಪಿ ಅಧಿಕಾರಿಗಳು ಇಂದು ನೆಲಸಮಗೊಳಿಸಿದ್ದಾರೆ.

ದಕ್ಷಿಣ ಬೆಂಗಳೂರಿನ ಜುನ್ನಸಂದ್ರ ಕೆರೆಯ ಒತ್ತುವರಿ ಈಗಷ್ಟೆ ಪ್ರಾರಂಭವಾಗಿದ್ದು ಅರಂಭಿಕ ಹಂತದಲ್ಲಿಯೇ ಬಿಬಿಎಂಪಿ ಕ್ರಮಕ್ಕೆ ಮುಂದಾಗಿದೆ. ಪೊಲೀಸರು ಮತ್ತು ಸಿಬ್ಬಂದಿಗಳ ನೆರವಿನಿಂದ ಅಕ್ರಮವಾಗಿ ನಿರ್ಮಿಸಲಾಗಿದ್ದ 12 ಮನೆಗಳನ್ನು ಸುಲಭವಾಗಿ ತೆರವುಗೊಳಿಸಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಬಿಬಿಎಂಪಿ ಜುನ್ನಸಂದ್ರ ಕೆರೆ ಒತ್ತುವರಿ ಮಾಡಿ ಮನೆಗಳನ್ನು ನಿರ್ಮಿಸಿಕೊಂಡಿದ್ದವರ ವಿರುದ್ಧ ಪೋಲಿಸ್ ಕಂಪ್ಲೇಟ್‌ ದಾಖಲಿಸಿತ್ತು. ಇಡೀ ಕೆರೆಯ ಪ್ರದೇಶವನ್ನು ಕೆಲವರು ತಮ್ಮದೆಂದು ಹೇಳಿಕೊಂಡು ಮನೆ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಿದ್ದರು. ನಿರ್ಮಾಣ ಕಾರ್ಯಕ್ಕೆ ಶೆಡ್‌ಗಳನ್ನು ಹಾಕಲಾಗಿತ್ತು ಎಂದು ಬಿಬಿಎಂಪಿಯ ಸಹಾಯಕ ಇಂಜಿನೀಯರ್ ಕೆ.ವಿ.ಪ್ರಕಾಶ್ ಮಾಹಿತಿ ನೀಡಿದ್ದಾರೆ.

ಸ್ಥಳೀಯರು ಕೆರೆ ಒತ್ತುವರಿ ಸಂಬಂಧ ಬಿಬಿಎಂಪಿಗೆ ದುರು ನೀಡಿದ್ದರು. ಸ್ಥಳೀಯರ ಮಾಹಿತಿ ಆಧರಿಸಿ ತನಿಖೆಯನ್ನು ನಡೆಸಿ ಒತ್ತುವರಿಯನ್ನು ತೆರವುಗೊಳಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ವಾರಣಾಸಿ ಕೆರೆಯ 1 ಎಕರೆ 6 ಗುಂಟೆಗಳಷ್ಟು ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. 8 ಎಕರೆ 24 ಗುಂಟೆ ವಿಸ್ತೀರ್ಣದ ಕೆರೆಯ 5 ಭಾಗಗಳಲ್ಲಿ ಒತ್ತುವರಿ ನಡೆದಿರುವುದು ಬೆಳಕಿಗೆ ಬಂದಿತ್ತು. 12 ಮನೆಗಳನ್ನು ಕೆರೆಯ ಜಾಗದಲ್ಲಿ ಅಕ್ರಮವಾಗಿ ಕಟ್ಟಲಾಗಿದೆ. ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡು ನ್ಯಾಯಾಲಾಯದ ಆದೇಶದ ಮೇರೆಗೆ ಕ್ರಮ ಜರುಗಿಸಲಾಗಿದೆ ಬಿಬಿಎಂಪಿ ವಿಶೇಷ ಆಯುಕ್ತ ಬಿ ರೆಡ್ಡಿ ಶಂಕರ್‌ ಬಾಬು ತಿಳಿಸಿದ್ದಾರೆ.

ವಾರಣಾಸಿ ಕೆರೆಯ ಅಭಿವೃದ್ಧಿಗೆ ಬಿಬಿಎಂಪಿ 3 ಕೋಟಿ ಮೊತ್ತದ ಯೋಜನೆಯನ್ನು ರೂಪಿಸಿದ್ದು ಅಂತರ್ಜಲ ಹೆಚ್ಚಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ಬಿಬಿಎಂಪಿಯ ವಿಳಂಬದ ಕ್ರಮ

ಬಿಬಿಎಂಪಿ ಕ್ರಮಕ್ಕೆ ಹಲವು ಪರಿಸರ ಸಂಘಟನೆಗಳು ಮತ್ತು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿಯ ವಿಳಂಬ ಧೋರಣೆಯಿಂದ ಇನ್ನು ಸಾಕಷ್ಟು ಕೆರೆಗಳು ಭೂಗಳ್ಳರ ಪಾಲಾಗುತ್ತಿದೆ. ಒತ್ತುವರಿ ಕಂಡುಬಂದ ತಕ್ಷಣ ಬಿಬಿಎಂಪಿ ಕ್ರಮಕ್ಕೆ ಮುಂದಾಗಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಒಂದೋ ಎರಡೋ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿದರೆ ಸಾಲುವುದಿಲ್ಲ. 100ಕ್ಕೂ ಹೆಚ್ಚು ಕೆರೆಗಳು ಒತ್ತುವರಿಯಾಗಿವೆ. ಬಿಬಿಎಂಪಿ ಆ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಲು ಮುಂದಾಗಬೇಕೆಂದು ಫ್ರೆಂಡ್ಸ್‌ ಅಫ್‌ ಲೇಕ್ಸ್‌ (ಕೆರೆಯ ಗೆಳೆಯರು) ಸಂಘಟನೆಯ ಸಂಸ್ಥಾಪಕ ವಿ ರಾಮಪ್ರಸಾದ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ಕೆರೆ ಒತ್ತುವರಿಗಳನ್ನು ತೆರವುಗೊಳಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್‌ ಮಾರ್ಚ್‌ 2020ರಲ್ಲಿ ಬಿಬಿಎಂಪಿಗೆ ಆದೇಶಿಸಿತ್ತು.

ಕಾನೂನು ಪ್ರಕ್ರಿಯೆಗಳನ್ನು ಪೂರೈಸಲು ಸಾಕಷ್ಟು ಸಮಯ ಹಿಡಿಯುತ್ತದೆ. ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ. ಕೆಲವು ಒತ್ತುವರಿದಾರರು ತೆರವಿಗೆ ತಡೆಕೋರಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೊರೊನಾ ಮತ್ತು ಲಾಕ್‌ಡೌನ್ ನಿರ್ಭಂದಗಳು ತೆರವು ಕಾರ್ಯಕ್ಕೆ ಸಾಕಷ್ಟು ಅಡಚಣೆಯನ್ನುಂಟುಮಾಡಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಬಿ. ರೆಡ್ಡಿ ಶಂಕರ್ ಬಾಬು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....