Homeಚಳವಳಿರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ...

ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

- Advertisement -
- Advertisement -

ದೆಹಲಿಯ ಸಿಂಘು ಗಡಿಯಲ್ಲಿ ಕಳೆದ ವಾರ ಹತ್ಯೆಯಾದ ದಲಿತ ಯುವಕ ಲಖ್ಬೀರ್‌ ಸಿಂಗ್‌ ಅವರ ಚೀಮಾ ಕಲಾನ್ ಗ್ರಾಮಕ್ಕೆ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಿಹಾಂಗ್ ಸಿಖ್ ಸರಬ್ಜಿತ್ ಸಿಂಗ್ ಪದೇ ಪದೇ ಭೇಟಿ ನೀಡಿರುವದನ್ನು ಗ್ರಾಮದ ನಿವಾಸಿಗಳು ದೃಢಪಡಿಸಿದ್ದಾರೆ.

ಕಳೆದ ತಿಂಗಳಲ್ಲಿ ಹಲವು ಬಾರಿ ನಿಹಾಂಗ್‌ ಸಿಖ್‌ಗಳು ಚೀಮಾ ಕಲಾನ್ ಗ್ರಾಮಕ್ಕೆ ಭೇಟಿ ನೀಡಿದ್ದರು ಎಂಬ ವಿಷಯ ಹೊರಬಂದಿದೆ. ಹತ್ಯೆಯಾ‌ದ ಮೂರು ದಿನಗಳ ಮೊದಲು ಲಖ್ಬೀರ್ ಸಿಂಗ್‌, ಬೊಲೆರೊ ಕ್ಯಾಂಪರ್ ಕಾರಿನಲ್ಲಿ ಇಬ್ಬರು ನಿಹಾಂಗ್‌ಗಳೊಂದಿಗೆ ಕಾಣಿಸಿಕೊಂಡಿರುವುದಾಗಿ ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ.

ಕಳೆದ ಎರಡು ಮೂರು ತಿಂಗಳುಗಳಿಂದ ಕೊಲೆ ಆರೋಪಿ ಸರಬ್ಜಿತ್ ಸಿಂಗ್, ಹಳ್ಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೊಲೆರೊ ಕ್ಯಾಂಪರ್ ಕಾರು ಓಡಿಸುತ್ತಿದ್ದನ್ನು ದೃಡಪಡಿಸಿದ್ದಾರೆ. ಜೊತೆಗೆ ಮೃತ ಲಖ್ಬೀರ್ ಸಿಂಗ್ ಸಹೋದರಿ ರಾಜ್ ಕೌರ್ ಕೂಡ ತನ್ನ ಸಹೋದರ ಸಿಂಘು ಗಡಿಗೆ ತಾನಾಗಿಯೇ ಹೋಗಲು ಸಾಧ್ಯವಿಲ್ಲ. ಅಲ್ಲಿ ಯಾರೋ ಆಮಿಷವೊಡ್ಡಿದ್ದರು ಎಂದು ನಿರಂತರವಾಗಿ ಹೇಳಿಕೆ ನೀಡಿದ್ದಾರೆ ಎಂದು ದಿ ಕಾರವಾನ್ ವರದಿ ಮಾಡಿದೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ಬಂಧಿತ ಆರೋಪಿ ಸರಬ್ಜಿತ್ ಸಿಂಗ್‌ ಹತ್ಯೆಯ ಜವಾಬ್ದಾರಿಯನ್ನು ವಹಿಸಿಕೊಂಡು ಅಕ್ಟೋಬರ್ 15 ರ ರಾತ್ರಿ ಪೊಲೀಸರಿಗೆ ಶರಣಾಗಿದ್ದರು. ಮರುದಿನ, ಇನ್ನೊಬ್ಬ ನಿಹಾಂಗ್ ಸಿಖ್ ನರೇನ್ ಸಿಂಗ್ ಅಮೃತಸರದ ಅಮರ್ಕೋಟ್ ಗ್ರಾಮದಲ್ಲಿ ಪೊಲೀಸರಿಗೆ ಶರಣಾದ ನಂತರ ಆತನನ್ನು ಬಂಧಿಸಲಾಗಿತ್ತು.

“ದಲಿತ ಯುವಕ ಲಖ್ಬೀರ್‌ ಸಿಂಗ್ ಗ್ರಂಥವನ್ನು ಅಪವಿತ್ರಗೊಳಿಸಿದ್ದನ್ನು ನರೇನ್ ಸಿಂಗ್ ನೋಡಿಲ್ಲ. ಆತ ಕೇವಲ ಸರಬ್ಜಿತ್ ಸಿಂಗ್‌ ಮಾತಿನಂತೆ ನಡೆದುಕೊಂಡಿರುವುದಾಗಿ ತಿಳಿಸಿದ್ದಾರೆ” ಎಂದು ನರೇನ್ ಸಿಂಗ್‌ರನ್ನು ಬಂಧಿಸಿದ ಅಮೃತಸರ ಗ್ರಾಮಾಂತರ ಠಾಣೆಯ ಹಿರಿಯ ಅಧೀಕ್ಷಕ ರಾಕೇಶ್ ಕೌಶಲ್ ಹೇಳಿದ್ದಾರೆ.

ಮತ್ತೊಬ್ಬ ಚೀಮಾ ಕಲಾನ್ ಗ್ರಾಮದ ನಿವಾಸಿ ಮಾತನಾಡಿ, ಈ ಮೊದಲು ಸರಾಯಿ ಅಮಾನತ್ ಖಾನ್ ಪೊಲೀಸ್ ಠಾಣೆಯ ಬಳಿ ಸುಮಾರು ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಸರಬ್ಜಿತ್ ಅವರನ್ನು ನೋಡಿದ್ದಾಗಿ ಮಾಹಿತಿ ನೀಡಿದ್ದಾರೆ.

“ಬಂಧನದಲ್ಲಿರುವ ಈ ಬಾಬಾ ಜೀ ಸರಬ್ಜಿತ್ ಸಿಂಗ್ ಅವರನ್ನು ನಾವು ನಮ್ಮ ಹಳ್ಳಿಯಲ್ಲಿ ಮೊದಲೇ ನೋಡಿದೆವು. ನಿನ್ನೆ, ನಾನು ಈ ವ್ಯಕ್ತಿಯ ವೀಡಿಯೋವನ್ನು ನೋಡುತ್ತಿದ್ದಾಗ ಎಲ್ಲ ನೆನಪಾಯಿತು. ಹಳ್ಳಿಯಲ್ಲಿ ಈ ಮನುಷ್ಯ ಯಾರದೋ ಕಾರನ್ನು ಓಡಿಸುವುದನ್ನು ನಾನು ನೋಡಿದ್ದೆ. ಆದರೆ, ಅದು ಯಾರ ಕಾರು ಎಂದು ನನಗೆ ತಿಳಿದಿಲ್ಲ” ಎಂದಿದ್ದಾರೆ.

ಮೃತನ ಕುಟುಂಬಸ್ಥರು ಮತ್ತು ಚೀಮಾ ಕಲಾನ್ ಗ್ರಾಮಸ್ಥರು

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ಹಳ್ಳಿಯ ಬಸ್ ನಿಲ್ದಾಣದ ಬಳಿ ನಿರ್ಮಿಸಲಾಗಿದ್ದ ಲಂಗರ್ ಹಾಲ್ ಹತ್ತಿರ ಅನೇಕ ಸಂದರ್ಭಗಳಲ್ಲಿ ಅನೇಕ ಗ್ರಾಮಸ್ಥರು ಸರಬ್ಜಿತ್ ಸಿಂಗ್‌ರನ್ನು ನೋಡಿದ್ದಾರೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಹಳ್ಳಿಯ ಹೊರ ಭಾಗದಲ್ಲಿ   ಕೈ-ಪಂಪ್‌ ಬಳಿ ಸರಬ್ಜಿತ್ ಸ್ನಾನ ಮಾಡುವುದನ್ನು ಸ್ಥಳೀಯರು ಸಹ ಗಮನಿಸಿದ್ದಾರೆ. ಕೆಲವು ಗ್ರಾಮಸ್ಥರು ಸರಬ್ಜಿತ್ ತಮ್ಮ ಹಳ್ಳಿಗೆ ಬಂದ ನಂತರ ತಮ್ಮ ಕೂದಲನ್ನು ಬೆಳೆಯಲು ಆರಂಭಿಸಿದ್ದರು. ಅವರು ಗುಜರಾತಿ, ಮರಾಠಿ ಮತ್ತು ಇತರ ಕೆಲವು ಭಾಷೆಗಳನ್ನು ಮಾತನಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಅಕ್ಟೋಬರ್ 12 ರಂದು ಲಖ್ಬೀರ್ ಹತ್ತಿರದ ಧಾನ್ಯ ಮಾರುಕಟ್ಟೆಗೆ ಕೆಲಸಕ್ಕಾಗಿ ಹೋಗಿದ್ದರು. ಆದರೆ, ಮದ್ಯವ್ಯಸನಿಯಾಗಿದ್ದ ಅವರಿಗೆ ಕೆಲಸ ಮಾಡಲು ಅಲ್ಲಿನ ಗುರುಶಿಖ್ ಎಂದು ಕರೆಸಿಕೊಳ್ಳುವವರು ಬಿಡಲಿಲ್ಲ. ನಂತರ ಅವರು ಅಲ್ಲಿದಂ ವಾಪಾಸ್ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಲಖ್ಬೀರ್‌ನನ್ನು ಕರೆದುಕೊಂಡು ಹೋಗಿ ಕಾರಿನಲ್ಲಿ ಕುಳಿತಿದ್ದ ನಿಹಾಂಗ್‌ಗಳ ಬಳಿಗೆ ಬಿಟ್ಟರ ಎಂದು ಸ್ಥಳೀಯರು ಹೇಳಿದ್ದಾರೆ. ಆ ರಾತ್ರಿ ಲಖ್ಬೀರ್‌ ಸಿಂಗ್‌ ಗೋಶಾಲೆಯಲ್ಲಿ ಜಾನುವಾರುಗಳಿಗೆ ಆಹಾರವನ್ನು ನೀಡುವುದನ್ನು ನೋಡಿದ್ದೇವೆ ಎಂದಿದ್ದಾರೆ.

ಮರುದಿನ ಬೆಳಿಗ್ಗೆ, ಲಖ್ಬೀರ್ ಸಿಂಗ್ ಧಾನ್ಯ ಮಾರುಕಟ್ಟೆಯಲ್ಲಿ ಕೆಲಸ ಮಾಡುವುದನ್ನು ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುವ ಹಳ್ಳಿಯ ನಿವಾಸಿ ಅಮೃತಪಾಲ್ ಸಿಂಗ್ ನೋಡಿದ್ದಾರೆ. “ನಾನು ಅವನನ್ನು ದೂರದಿಂದ ನೋಡಿದೆ” ಎಂದು ಅಮೃತಪಾಲ್ ಹೇಳಿದ್ದಾರೆ. ಅವರೇ ಹಳ್ಳಿಯಲ್ಲಿ ಕೊನೆಯ ಬಾರಿಗೆ ಲಖ್ಬೀ‌ರ್‌ ಸಿಂಗ್‌ ಅವರನ್ನು ನೋಡಿದವರು. ಲಖ್ಬೀ‌ರ್‌ ಸಿಂಗ್‌ ಅಕ್ಟೋಬರ್ 14 ರ ರಾತ್ರಿ ಸಿಂಘು ಗಡಿಯನ್ನು ಹೇಗೆ ತಲುಪಿದರು ಎಂಬುದು ಯಾರಿಗೂ ತಿಳಿದಿಲ್ಲ.

ಒಟ್ಟಾರೆ, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರ ಪ್ರತಿಭಟನೆಯನ್ನು ಮುರಿಯಲು ಸರ್ಕಾರ ನಡೆಸುತ್ತಿರುವ ಪಿತೂರಿ ಎಂದಿರುವ ರೈತರ ಆರೋಪಕ್ಕೆ ಈ ಎಲ್ಲಾ ಘಟನೆಗಳು ಸಾಕ್ಷಿಯಾಗುತ್ತಿವೆ. ಇದರ ಜೊತೆಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದು ಕೂಡ ಬೆಳಕಿಗೆ ಬಂದಿದೆ.

ಘಟನೆ ಬಗ್ಗೆ, ಲಖ್ಬೀರ್‌ ಸಿಂಗ್‌ ಬಗ್ಗೆ ಎಲ್ಲಿಯೂ ಮಾತನಾಡದಂತೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ಮತ್ತು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಗ್ರಾಮದ ಮಾಜಿ ಸರ್ಪಂಚ್ ಆಗಿದ್ದ ಸೋನು ಚೀಮಾ ಆರೋಪಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...