Homeಚಳವಳಿರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ...

ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

- Advertisement -
- Advertisement -

ದೆಹಲಿಯ ಸಿಂಘು ಗಡಿಯಲ್ಲಿ ಕಳೆದ ವಾರ ಹತ್ಯೆಯಾದ ದಲಿತ ಯುವಕ ಲಖ್ಬೀರ್‌ ಸಿಂಗ್‌ ಅವರ ಚೀಮಾ ಕಲಾನ್ ಗ್ರಾಮಕ್ಕೆ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಿಹಾಂಗ್ ಸಿಖ್ ಸರಬ್ಜಿತ್ ಸಿಂಗ್ ಪದೇ ಪದೇ ಭೇಟಿ ನೀಡಿರುವದನ್ನು ಗ್ರಾಮದ ನಿವಾಸಿಗಳು ದೃಢಪಡಿಸಿದ್ದಾರೆ.

ಕಳೆದ ತಿಂಗಳಲ್ಲಿ ಹಲವು ಬಾರಿ ನಿಹಾಂಗ್‌ ಸಿಖ್‌ಗಳು ಚೀಮಾ ಕಲಾನ್ ಗ್ರಾಮಕ್ಕೆ ಭೇಟಿ ನೀಡಿದ್ದರು ಎಂಬ ವಿಷಯ ಹೊರಬಂದಿದೆ. ಹತ್ಯೆಯಾ‌ದ ಮೂರು ದಿನಗಳ ಮೊದಲು ಲಖ್ಬೀರ್ ಸಿಂಗ್‌, ಬೊಲೆರೊ ಕ್ಯಾಂಪರ್ ಕಾರಿನಲ್ಲಿ ಇಬ್ಬರು ನಿಹಾಂಗ್‌ಗಳೊಂದಿಗೆ ಕಾಣಿಸಿಕೊಂಡಿರುವುದಾಗಿ ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ.

ಕಳೆದ ಎರಡು ಮೂರು ತಿಂಗಳುಗಳಿಂದ ಕೊಲೆ ಆರೋಪಿ ಸರಬ್ಜಿತ್ ಸಿಂಗ್, ಹಳ್ಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೊಲೆರೊ ಕ್ಯಾಂಪರ್ ಕಾರು ಓಡಿಸುತ್ತಿದ್ದನ್ನು ದೃಡಪಡಿಸಿದ್ದಾರೆ. ಜೊತೆಗೆ ಮೃತ ಲಖ್ಬೀರ್ ಸಿಂಗ್ ಸಹೋದರಿ ರಾಜ್ ಕೌರ್ ಕೂಡ ತನ್ನ ಸಹೋದರ ಸಿಂಘು ಗಡಿಗೆ ತಾನಾಗಿಯೇ ಹೋಗಲು ಸಾಧ್ಯವಿಲ್ಲ. ಅಲ್ಲಿ ಯಾರೋ ಆಮಿಷವೊಡ್ಡಿದ್ದರು ಎಂದು ನಿರಂತರವಾಗಿ ಹೇಳಿಕೆ ನೀಡಿದ್ದಾರೆ ಎಂದು ದಿ ಕಾರವಾನ್ ವರದಿ ಮಾಡಿದೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ಬಂಧಿತ ಆರೋಪಿ ಸರಬ್ಜಿತ್ ಸಿಂಗ್‌ ಹತ್ಯೆಯ ಜವಾಬ್ದಾರಿಯನ್ನು ವಹಿಸಿಕೊಂಡು ಅಕ್ಟೋಬರ್ 15 ರ ರಾತ್ರಿ ಪೊಲೀಸರಿಗೆ ಶರಣಾಗಿದ್ದರು. ಮರುದಿನ, ಇನ್ನೊಬ್ಬ ನಿಹಾಂಗ್ ಸಿಖ್ ನರೇನ್ ಸಿಂಗ್ ಅಮೃತಸರದ ಅಮರ್ಕೋಟ್ ಗ್ರಾಮದಲ್ಲಿ ಪೊಲೀಸರಿಗೆ ಶರಣಾದ ನಂತರ ಆತನನ್ನು ಬಂಧಿಸಲಾಗಿತ್ತು.

“ದಲಿತ ಯುವಕ ಲಖ್ಬೀರ್‌ ಸಿಂಗ್ ಗ್ರಂಥವನ್ನು ಅಪವಿತ್ರಗೊಳಿಸಿದ್ದನ್ನು ನರೇನ್ ಸಿಂಗ್ ನೋಡಿಲ್ಲ. ಆತ ಕೇವಲ ಸರಬ್ಜಿತ್ ಸಿಂಗ್‌ ಮಾತಿನಂತೆ ನಡೆದುಕೊಂಡಿರುವುದಾಗಿ ತಿಳಿಸಿದ್ದಾರೆ” ಎಂದು ನರೇನ್ ಸಿಂಗ್‌ರನ್ನು ಬಂಧಿಸಿದ ಅಮೃತಸರ ಗ್ರಾಮಾಂತರ ಠಾಣೆಯ ಹಿರಿಯ ಅಧೀಕ್ಷಕ ರಾಕೇಶ್ ಕೌಶಲ್ ಹೇಳಿದ್ದಾರೆ.

ಮತ್ತೊಬ್ಬ ಚೀಮಾ ಕಲಾನ್ ಗ್ರಾಮದ ನಿವಾಸಿ ಮಾತನಾಡಿ, ಈ ಮೊದಲು ಸರಾಯಿ ಅಮಾನತ್ ಖಾನ್ ಪೊಲೀಸ್ ಠಾಣೆಯ ಬಳಿ ಸುಮಾರು ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಸರಬ್ಜಿತ್ ಅವರನ್ನು ನೋಡಿದ್ದಾಗಿ ಮಾಹಿತಿ ನೀಡಿದ್ದಾರೆ.

“ಬಂಧನದಲ್ಲಿರುವ ಈ ಬಾಬಾ ಜೀ ಸರಬ್ಜಿತ್ ಸಿಂಗ್ ಅವರನ್ನು ನಾವು ನಮ್ಮ ಹಳ್ಳಿಯಲ್ಲಿ ಮೊದಲೇ ನೋಡಿದೆವು. ನಿನ್ನೆ, ನಾನು ಈ ವ್ಯಕ್ತಿಯ ವೀಡಿಯೋವನ್ನು ನೋಡುತ್ತಿದ್ದಾಗ ಎಲ್ಲ ನೆನಪಾಯಿತು. ಹಳ್ಳಿಯಲ್ಲಿ ಈ ಮನುಷ್ಯ ಯಾರದೋ ಕಾರನ್ನು ಓಡಿಸುವುದನ್ನು ನಾನು ನೋಡಿದ್ದೆ. ಆದರೆ, ಅದು ಯಾರ ಕಾರು ಎಂದು ನನಗೆ ತಿಳಿದಿಲ್ಲ” ಎಂದಿದ್ದಾರೆ.

ಮೃತನ ಕುಟುಂಬಸ್ಥರು ಮತ್ತು ಚೀಮಾ ಕಲಾನ್ ಗ್ರಾಮಸ್ಥರು

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ಹಳ್ಳಿಯ ಬಸ್ ನಿಲ್ದಾಣದ ಬಳಿ ನಿರ್ಮಿಸಲಾಗಿದ್ದ ಲಂಗರ್ ಹಾಲ್ ಹತ್ತಿರ ಅನೇಕ ಸಂದರ್ಭಗಳಲ್ಲಿ ಅನೇಕ ಗ್ರಾಮಸ್ಥರು ಸರಬ್ಜಿತ್ ಸಿಂಗ್‌ರನ್ನು ನೋಡಿದ್ದಾರೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಹಳ್ಳಿಯ ಹೊರ ಭಾಗದಲ್ಲಿ   ಕೈ-ಪಂಪ್‌ ಬಳಿ ಸರಬ್ಜಿತ್ ಸ್ನಾನ ಮಾಡುವುದನ್ನು ಸ್ಥಳೀಯರು ಸಹ ಗಮನಿಸಿದ್ದಾರೆ. ಕೆಲವು ಗ್ರಾಮಸ್ಥರು ಸರಬ್ಜಿತ್ ತಮ್ಮ ಹಳ್ಳಿಗೆ ಬಂದ ನಂತರ ತಮ್ಮ ಕೂದಲನ್ನು ಬೆಳೆಯಲು ಆರಂಭಿಸಿದ್ದರು. ಅವರು ಗುಜರಾತಿ, ಮರಾಠಿ ಮತ್ತು ಇತರ ಕೆಲವು ಭಾಷೆಗಳನ್ನು ಮಾತನಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಅಕ್ಟೋಬರ್ 12 ರಂದು ಲಖ್ಬೀರ್ ಹತ್ತಿರದ ಧಾನ್ಯ ಮಾರುಕಟ್ಟೆಗೆ ಕೆಲಸಕ್ಕಾಗಿ ಹೋಗಿದ್ದರು. ಆದರೆ, ಮದ್ಯವ್ಯಸನಿಯಾಗಿದ್ದ ಅವರಿಗೆ ಕೆಲಸ ಮಾಡಲು ಅಲ್ಲಿನ ಗುರುಶಿಖ್ ಎಂದು ಕರೆಸಿಕೊಳ್ಳುವವರು ಬಿಡಲಿಲ್ಲ. ನಂತರ ಅವರು ಅಲ್ಲಿದಂ ವಾಪಾಸ್ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಲಖ್ಬೀರ್‌ನನ್ನು ಕರೆದುಕೊಂಡು ಹೋಗಿ ಕಾರಿನಲ್ಲಿ ಕುಳಿತಿದ್ದ ನಿಹಾಂಗ್‌ಗಳ ಬಳಿಗೆ ಬಿಟ್ಟರ ಎಂದು ಸ್ಥಳೀಯರು ಹೇಳಿದ್ದಾರೆ. ಆ ರಾತ್ರಿ ಲಖ್ಬೀರ್‌ ಸಿಂಗ್‌ ಗೋಶಾಲೆಯಲ್ಲಿ ಜಾನುವಾರುಗಳಿಗೆ ಆಹಾರವನ್ನು ನೀಡುವುದನ್ನು ನೋಡಿದ್ದೇವೆ ಎಂದಿದ್ದಾರೆ.

ಮರುದಿನ ಬೆಳಿಗ್ಗೆ, ಲಖ್ಬೀರ್ ಸಿಂಗ್ ಧಾನ್ಯ ಮಾರುಕಟ್ಟೆಯಲ್ಲಿ ಕೆಲಸ ಮಾಡುವುದನ್ನು ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುವ ಹಳ್ಳಿಯ ನಿವಾಸಿ ಅಮೃತಪಾಲ್ ಸಿಂಗ್ ನೋಡಿದ್ದಾರೆ. “ನಾನು ಅವನನ್ನು ದೂರದಿಂದ ನೋಡಿದೆ” ಎಂದು ಅಮೃತಪಾಲ್ ಹೇಳಿದ್ದಾರೆ. ಅವರೇ ಹಳ್ಳಿಯಲ್ಲಿ ಕೊನೆಯ ಬಾರಿಗೆ ಲಖ್ಬೀ‌ರ್‌ ಸಿಂಗ್‌ ಅವರನ್ನು ನೋಡಿದವರು. ಲಖ್ಬೀ‌ರ್‌ ಸಿಂಗ್‌ ಅಕ್ಟೋಬರ್ 14 ರ ರಾತ್ರಿ ಸಿಂಘು ಗಡಿಯನ್ನು ಹೇಗೆ ತಲುಪಿದರು ಎಂಬುದು ಯಾರಿಗೂ ತಿಳಿದಿಲ್ಲ.

ಒಟ್ಟಾರೆ, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರ ಪ್ರತಿಭಟನೆಯನ್ನು ಮುರಿಯಲು ಸರ್ಕಾರ ನಡೆಸುತ್ತಿರುವ ಪಿತೂರಿ ಎಂದಿರುವ ರೈತರ ಆರೋಪಕ್ಕೆ ಈ ಎಲ್ಲಾ ಘಟನೆಗಳು ಸಾಕ್ಷಿಯಾಗುತ್ತಿವೆ. ಇದರ ಜೊತೆಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದು ಕೂಡ ಬೆಳಕಿಗೆ ಬಂದಿದೆ.

ಘಟನೆ ಬಗ್ಗೆ, ಲಖ್ಬೀರ್‌ ಸಿಂಗ್‌ ಬಗ್ಗೆ ಎಲ್ಲಿಯೂ ಮಾತನಾಡದಂತೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ಮತ್ತು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಗ್ರಾಮದ ಮಾಜಿ ಸರ್ಪಂಚ್ ಆಗಿದ್ದ ಸೋನು ಚೀಮಾ ಆರೋಪಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...