Homeಚಳವಳಿರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ...

ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

- Advertisement -
- Advertisement -

ದೆಹಲಿಯ ಸಿಂಘು ಗಡಿಯಲ್ಲಿ ಕಳೆದ ವಾರ ಹತ್ಯೆಯಾದ ದಲಿತ ಯುವಕ ಲಖ್ಬೀರ್‌ ಸಿಂಗ್‌ ಅವರ ಚೀಮಾ ಕಲಾನ್ ಗ್ರಾಮಕ್ಕೆ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಿಹಾಂಗ್ ಸಿಖ್ ಸರಬ್ಜಿತ್ ಸಿಂಗ್ ಪದೇ ಪದೇ ಭೇಟಿ ನೀಡಿರುವದನ್ನು ಗ್ರಾಮದ ನಿವಾಸಿಗಳು ದೃಢಪಡಿಸಿದ್ದಾರೆ.

ಕಳೆದ ತಿಂಗಳಲ್ಲಿ ಹಲವು ಬಾರಿ ನಿಹಾಂಗ್‌ ಸಿಖ್‌ಗಳು ಚೀಮಾ ಕಲಾನ್ ಗ್ರಾಮಕ್ಕೆ ಭೇಟಿ ನೀಡಿದ್ದರು ಎಂಬ ವಿಷಯ ಹೊರಬಂದಿದೆ. ಹತ್ಯೆಯಾ‌ದ ಮೂರು ದಿನಗಳ ಮೊದಲು ಲಖ್ಬೀರ್ ಸಿಂಗ್‌, ಬೊಲೆರೊ ಕ್ಯಾಂಪರ್ ಕಾರಿನಲ್ಲಿ ಇಬ್ಬರು ನಿಹಾಂಗ್‌ಗಳೊಂದಿಗೆ ಕಾಣಿಸಿಕೊಂಡಿರುವುದಾಗಿ ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ.

ಕಳೆದ ಎರಡು ಮೂರು ತಿಂಗಳುಗಳಿಂದ ಕೊಲೆ ಆರೋಪಿ ಸರಬ್ಜಿತ್ ಸಿಂಗ್, ಹಳ್ಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೊಲೆರೊ ಕ್ಯಾಂಪರ್ ಕಾರು ಓಡಿಸುತ್ತಿದ್ದನ್ನು ದೃಡಪಡಿಸಿದ್ದಾರೆ. ಜೊತೆಗೆ ಮೃತ ಲಖ್ಬೀರ್ ಸಿಂಗ್ ಸಹೋದರಿ ರಾಜ್ ಕೌರ್ ಕೂಡ ತನ್ನ ಸಹೋದರ ಸಿಂಘು ಗಡಿಗೆ ತಾನಾಗಿಯೇ ಹೋಗಲು ಸಾಧ್ಯವಿಲ್ಲ. ಅಲ್ಲಿ ಯಾರೋ ಆಮಿಷವೊಡ್ಡಿದ್ದರು ಎಂದು ನಿರಂತರವಾಗಿ ಹೇಳಿಕೆ ನೀಡಿದ್ದಾರೆ ಎಂದು ದಿ ಕಾರವಾನ್ ವರದಿ ಮಾಡಿದೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ಬಂಧಿತ ಆರೋಪಿ ಸರಬ್ಜಿತ್ ಸಿಂಗ್‌ ಹತ್ಯೆಯ ಜವಾಬ್ದಾರಿಯನ್ನು ವಹಿಸಿಕೊಂಡು ಅಕ್ಟೋಬರ್ 15 ರ ರಾತ್ರಿ ಪೊಲೀಸರಿಗೆ ಶರಣಾಗಿದ್ದರು. ಮರುದಿನ, ಇನ್ನೊಬ್ಬ ನಿಹಾಂಗ್ ಸಿಖ್ ನರೇನ್ ಸಿಂಗ್ ಅಮೃತಸರದ ಅಮರ್ಕೋಟ್ ಗ್ರಾಮದಲ್ಲಿ ಪೊಲೀಸರಿಗೆ ಶರಣಾದ ನಂತರ ಆತನನ್ನು ಬಂಧಿಸಲಾಗಿತ್ತು.

“ದಲಿತ ಯುವಕ ಲಖ್ಬೀರ್‌ ಸಿಂಗ್ ಗ್ರಂಥವನ್ನು ಅಪವಿತ್ರಗೊಳಿಸಿದ್ದನ್ನು ನರೇನ್ ಸಿಂಗ್ ನೋಡಿಲ್ಲ. ಆತ ಕೇವಲ ಸರಬ್ಜಿತ್ ಸಿಂಗ್‌ ಮಾತಿನಂತೆ ನಡೆದುಕೊಂಡಿರುವುದಾಗಿ ತಿಳಿಸಿದ್ದಾರೆ” ಎಂದು ನರೇನ್ ಸಿಂಗ್‌ರನ್ನು ಬಂಧಿಸಿದ ಅಮೃತಸರ ಗ್ರಾಮಾಂತರ ಠಾಣೆಯ ಹಿರಿಯ ಅಧೀಕ್ಷಕ ರಾಕೇಶ್ ಕೌಶಲ್ ಹೇಳಿದ್ದಾರೆ.

ಮತ್ತೊಬ್ಬ ಚೀಮಾ ಕಲಾನ್ ಗ್ರಾಮದ ನಿವಾಸಿ ಮಾತನಾಡಿ, ಈ ಮೊದಲು ಸರಾಯಿ ಅಮಾನತ್ ಖಾನ್ ಪೊಲೀಸ್ ಠಾಣೆಯ ಬಳಿ ಸುಮಾರು ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಸರಬ್ಜಿತ್ ಅವರನ್ನು ನೋಡಿದ್ದಾಗಿ ಮಾಹಿತಿ ನೀಡಿದ್ದಾರೆ.

“ಬಂಧನದಲ್ಲಿರುವ ಈ ಬಾಬಾ ಜೀ ಸರಬ್ಜಿತ್ ಸಿಂಗ್ ಅವರನ್ನು ನಾವು ನಮ್ಮ ಹಳ್ಳಿಯಲ್ಲಿ ಮೊದಲೇ ನೋಡಿದೆವು. ನಿನ್ನೆ, ನಾನು ಈ ವ್ಯಕ್ತಿಯ ವೀಡಿಯೋವನ್ನು ನೋಡುತ್ತಿದ್ದಾಗ ಎಲ್ಲ ನೆನಪಾಯಿತು. ಹಳ್ಳಿಯಲ್ಲಿ ಈ ಮನುಷ್ಯ ಯಾರದೋ ಕಾರನ್ನು ಓಡಿಸುವುದನ್ನು ನಾನು ನೋಡಿದ್ದೆ. ಆದರೆ, ಅದು ಯಾರ ಕಾರು ಎಂದು ನನಗೆ ತಿಳಿದಿಲ್ಲ” ಎಂದಿದ್ದಾರೆ.

ಮೃತನ ಕುಟುಂಬಸ್ಥರು ಮತ್ತು ಚೀಮಾ ಕಲಾನ್ ಗ್ರಾಮಸ್ಥರು

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ಹಳ್ಳಿಯ ಬಸ್ ನಿಲ್ದಾಣದ ಬಳಿ ನಿರ್ಮಿಸಲಾಗಿದ್ದ ಲಂಗರ್ ಹಾಲ್ ಹತ್ತಿರ ಅನೇಕ ಸಂದರ್ಭಗಳಲ್ಲಿ ಅನೇಕ ಗ್ರಾಮಸ್ಥರು ಸರಬ್ಜಿತ್ ಸಿಂಗ್‌ರನ್ನು ನೋಡಿದ್ದಾರೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಹಳ್ಳಿಯ ಹೊರ ಭಾಗದಲ್ಲಿ   ಕೈ-ಪಂಪ್‌ ಬಳಿ ಸರಬ್ಜಿತ್ ಸ್ನಾನ ಮಾಡುವುದನ್ನು ಸ್ಥಳೀಯರು ಸಹ ಗಮನಿಸಿದ್ದಾರೆ. ಕೆಲವು ಗ್ರಾಮಸ್ಥರು ಸರಬ್ಜಿತ್ ತಮ್ಮ ಹಳ್ಳಿಗೆ ಬಂದ ನಂತರ ತಮ್ಮ ಕೂದಲನ್ನು ಬೆಳೆಯಲು ಆರಂಭಿಸಿದ್ದರು. ಅವರು ಗುಜರಾತಿ, ಮರಾಠಿ ಮತ್ತು ಇತರ ಕೆಲವು ಭಾಷೆಗಳನ್ನು ಮಾತನಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಅಕ್ಟೋಬರ್ 12 ರಂದು ಲಖ್ಬೀರ್ ಹತ್ತಿರದ ಧಾನ್ಯ ಮಾರುಕಟ್ಟೆಗೆ ಕೆಲಸಕ್ಕಾಗಿ ಹೋಗಿದ್ದರು. ಆದರೆ, ಮದ್ಯವ್ಯಸನಿಯಾಗಿದ್ದ ಅವರಿಗೆ ಕೆಲಸ ಮಾಡಲು ಅಲ್ಲಿನ ಗುರುಶಿಖ್ ಎಂದು ಕರೆಸಿಕೊಳ್ಳುವವರು ಬಿಡಲಿಲ್ಲ. ನಂತರ ಅವರು ಅಲ್ಲಿದಂ ವಾಪಾಸ್ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಲಖ್ಬೀರ್‌ನನ್ನು ಕರೆದುಕೊಂಡು ಹೋಗಿ ಕಾರಿನಲ್ಲಿ ಕುಳಿತಿದ್ದ ನಿಹಾಂಗ್‌ಗಳ ಬಳಿಗೆ ಬಿಟ್ಟರ ಎಂದು ಸ್ಥಳೀಯರು ಹೇಳಿದ್ದಾರೆ. ಆ ರಾತ್ರಿ ಲಖ್ಬೀರ್‌ ಸಿಂಗ್‌ ಗೋಶಾಲೆಯಲ್ಲಿ ಜಾನುವಾರುಗಳಿಗೆ ಆಹಾರವನ್ನು ನೀಡುವುದನ್ನು ನೋಡಿದ್ದೇವೆ ಎಂದಿದ್ದಾರೆ.

ಮರುದಿನ ಬೆಳಿಗ್ಗೆ, ಲಖ್ಬೀರ್ ಸಿಂಗ್ ಧಾನ್ಯ ಮಾರುಕಟ್ಟೆಯಲ್ಲಿ ಕೆಲಸ ಮಾಡುವುದನ್ನು ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುವ ಹಳ್ಳಿಯ ನಿವಾಸಿ ಅಮೃತಪಾಲ್ ಸಿಂಗ್ ನೋಡಿದ್ದಾರೆ. “ನಾನು ಅವನನ್ನು ದೂರದಿಂದ ನೋಡಿದೆ” ಎಂದು ಅಮೃತಪಾಲ್ ಹೇಳಿದ್ದಾರೆ. ಅವರೇ ಹಳ್ಳಿಯಲ್ಲಿ ಕೊನೆಯ ಬಾರಿಗೆ ಲಖ್ಬೀ‌ರ್‌ ಸಿಂಗ್‌ ಅವರನ್ನು ನೋಡಿದವರು. ಲಖ್ಬೀ‌ರ್‌ ಸಿಂಗ್‌ ಅಕ್ಟೋಬರ್ 14 ರ ರಾತ್ರಿ ಸಿಂಘು ಗಡಿಯನ್ನು ಹೇಗೆ ತಲುಪಿದರು ಎಂಬುದು ಯಾರಿಗೂ ತಿಳಿದಿಲ್ಲ.

ಒಟ್ಟಾರೆ, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರ ಪ್ರತಿಭಟನೆಯನ್ನು ಮುರಿಯಲು ಸರ್ಕಾರ ನಡೆಸುತ್ತಿರುವ ಪಿತೂರಿ ಎಂದಿರುವ ರೈತರ ಆರೋಪಕ್ಕೆ ಈ ಎಲ್ಲಾ ಘಟನೆಗಳು ಸಾಕ್ಷಿಯಾಗುತ್ತಿವೆ. ಇದರ ಜೊತೆಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದು ಕೂಡ ಬೆಳಕಿಗೆ ಬಂದಿದೆ.

ಘಟನೆ ಬಗ್ಗೆ, ಲಖ್ಬೀರ್‌ ಸಿಂಗ್‌ ಬಗ್ಗೆ ಎಲ್ಲಿಯೂ ಮಾತನಾಡದಂತೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ಮತ್ತು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಗ್ರಾಮದ ಮಾಜಿ ಸರ್ಪಂಚ್ ಆಗಿದ್ದ ಸೋನು ಚೀಮಾ ಆರೋಪಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...