Homeಚಳವಳಿರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ...

ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

- Advertisement -
- Advertisement -

ದೆಹಲಿಯ ಸಿಂಘು ಗಡಿಯಲ್ಲಿ ಕಳೆದ ವಾರ ಹತ್ಯೆಯಾದ ದಲಿತ ಯುವಕ ಲಖ್ಬೀರ್‌ ಸಿಂಗ್‌ ಅವರ ಚೀಮಾ ಕಲಾನ್ ಗ್ರಾಮಕ್ಕೆ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಿಹಾಂಗ್ ಸಿಖ್ ಸರಬ್ಜಿತ್ ಸಿಂಗ್ ಪದೇ ಪದೇ ಭೇಟಿ ನೀಡಿರುವದನ್ನು ಗ್ರಾಮದ ನಿವಾಸಿಗಳು ದೃಢಪಡಿಸಿದ್ದಾರೆ.

ಕಳೆದ ತಿಂಗಳಲ್ಲಿ ಹಲವು ಬಾರಿ ನಿಹಾಂಗ್‌ ಸಿಖ್‌ಗಳು ಚೀಮಾ ಕಲಾನ್ ಗ್ರಾಮಕ್ಕೆ ಭೇಟಿ ನೀಡಿದ್ದರು ಎಂಬ ವಿಷಯ ಹೊರಬಂದಿದೆ. ಹತ್ಯೆಯಾ‌ದ ಮೂರು ದಿನಗಳ ಮೊದಲು ಲಖ್ಬೀರ್ ಸಿಂಗ್‌, ಬೊಲೆರೊ ಕ್ಯಾಂಪರ್ ಕಾರಿನಲ್ಲಿ ಇಬ್ಬರು ನಿಹಾಂಗ್‌ಗಳೊಂದಿಗೆ ಕಾಣಿಸಿಕೊಂಡಿರುವುದಾಗಿ ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ.

ಕಳೆದ ಎರಡು ಮೂರು ತಿಂಗಳುಗಳಿಂದ ಕೊಲೆ ಆರೋಪಿ ಸರಬ್ಜಿತ್ ಸಿಂಗ್, ಹಳ್ಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೊಲೆರೊ ಕ್ಯಾಂಪರ್ ಕಾರು ಓಡಿಸುತ್ತಿದ್ದನ್ನು ದೃಡಪಡಿಸಿದ್ದಾರೆ. ಜೊತೆಗೆ ಮೃತ ಲಖ್ಬೀರ್ ಸಿಂಗ್ ಸಹೋದರಿ ರಾಜ್ ಕೌರ್ ಕೂಡ ತನ್ನ ಸಹೋದರ ಸಿಂಘು ಗಡಿಗೆ ತಾನಾಗಿಯೇ ಹೋಗಲು ಸಾಧ್ಯವಿಲ್ಲ. ಅಲ್ಲಿ ಯಾರೋ ಆಮಿಷವೊಡ್ಡಿದ್ದರು ಎಂದು ನಿರಂತರವಾಗಿ ಹೇಳಿಕೆ ನೀಡಿದ್ದಾರೆ ಎಂದು ದಿ ಕಾರವಾನ್ ವರದಿ ಮಾಡಿದೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ಬಂಧಿತ ಆರೋಪಿ ಸರಬ್ಜಿತ್ ಸಿಂಗ್‌ ಹತ್ಯೆಯ ಜವಾಬ್ದಾರಿಯನ್ನು ವಹಿಸಿಕೊಂಡು ಅಕ್ಟೋಬರ್ 15 ರ ರಾತ್ರಿ ಪೊಲೀಸರಿಗೆ ಶರಣಾಗಿದ್ದರು. ಮರುದಿನ, ಇನ್ನೊಬ್ಬ ನಿಹಾಂಗ್ ಸಿಖ್ ನರೇನ್ ಸಿಂಗ್ ಅಮೃತಸರದ ಅಮರ್ಕೋಟ್ ಗ್ರಾಮದಲ್ಲಿ ಪೊಲೀಸರಿಗೆ ಶರಣಾದ ನಂತರ ಆತನನ್ನು ಬಂಧಿಸಲಾಗಿತ್ತು.

“ದಲಿತ ಯುವಕ ಲಖ್ಬೀರ್‌ ಸಿಂಗ್ ಗ್ರಂಥವನ್ನು ಅಪವಿತ್ರಗೊಳಿಸಿದ್ದನ್ನು ನರೇನ್ ಸಿಂಗ್ ನೋಡಿಲ್ಲ. ಆತ ಕೇವಲ ಸರಬ್ಜಿತ್ ಸಿಂಗ್‌ ಮಾತಿನಂತೆ ನಡೆದುಕೊಂಡಿರುವುದಾಗಿ ತಿಳಿಸಿದ್ದಾರೆ” ಎಂದು ನರೇನ್ ಸಿಂಗ್‌ರನ್ನು ಬಂಧಿಸಿದ ಅಮೃತಸರ ಗ್ರಾಮಾಂತರ ಠಾಣೆಯ ಹಿರಿಯ ಅಧೀಕ್ಷಕ ರಾಕೇಶ್ ಕೌಶಲ್ ಹೇಳಿದ್ದಾರೆ.

ಮತ್ತೊಬ್ಬ ಚೀಮಾ ಕಲಾನ್ ಗ್ರಾಮದ ನಿವಾಸಿ ಮಾತನಾಡಿ, ಈ ಮೊದಲು ಸರಾಯಿ ಅಮಾನತ್ ಖಾನ್ ಪೊಲೀಸ್ ಠಾಣೆಯ ಬಳಿ ಸುಮಾರು ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಸರಬ್ಜಿತ್ ಅವರನ್ನು ನೋಡಿದ್ದಾಗಿ ಮಾಹಿತಿ ನೀಡಿದ್ದಾರೆ.

“ಬಂಧನದಲ್ಲಿರುವ ಈ ಬಾಬಾ ಜೀ ಸರಬ್ಜಿತ್ ಸಿಂಗ್ ಅವರನ್ನು ನಾವು ನಮ್ಮ ಹಳ್ಳಿಯಲ್ಲಿ ಮೊದಲೇ ನೋಡಿದೆವು. ನಿನ್ನೆ, ನಾನು ಈ ವ್ಯಕ್ತಿಯ ವೀಡಿಯೋವನ್ನು ನೋಡುತ್ತಿದ್ದಾಗ ಎಲ್ಲ ನೆನಪಾಯಿತು. ಹಳ್ಳಿಯಲ್ಲಿ ಈ ಮನುಷ್ಯ ಯಾರದೋ ಕಾರನ್ನು ಓಡಿಸುವುದನ್ನು ನಾನು ನೋಡಿದ್ದೆ. ಆದರೆ, ಅದು ಯಾರ ಕಾರು ಎಂದು ನನಗೆ ತಿಳಿದಿಲ್ಲ” ಎಂದಿದ್ದಾರೆ.

ಮೃತನ ಕುಟುಂಬಸ್ಥರು ಮತ್ತು ಚೀಮಾ ಕಲಾನ್ ಗ್ರಾಮಸ್ಥರು

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ಹಳ್ಳಿಯ ಬಸ್ ನಿಲ್ದಾಣದ ಬಳಿ ನಿರ್ಮಿಸಲಾಗಿದ್ದ ಲಂಗರ್ ಹಾಲ್ ಹತ್ತಿರ ಅನೇಕ ಸಂದರ್ಭಗಳಲ್ಲಿ ಅನೇಕ ಗ್ರಾಮಸ್ಥರು ಸರಬ್ಜಿತ್ ಸಿಂಗ್‌ರನ್ನು ನೋಡಿದ್ದಾರೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಹಳ್ಳಿಯ ಹೊರ ಭಾಗದಲ್ಲಿ   ಕೈ-ಪಂಪ್‌ ಬಳಿ ಸರಬ್ಜಿತ್ ಸ್ನಾನ ಮಾಡುವುದನ್ನು ಸ್ಥಳೀಯರು ಸಹ ಗಮನಿಸಿದ್ದಾರೆ. ಕೆಲವು ಗ್ರಾಮಸ್ಥರು ಸರಬ್ಜಿತ್ ತಮ್ಮ ಹಳ್ಳಿಗೆ ಬಂದ ನಂತರ ತಮ್ಮ ಕೂದಲನ್ನು ಬೆಳೆಯಲು ಆರಂಭಿಸಿದ್ದರು. ಅವರು ಗುಜರಾತಿ, ಮರಾಠಿ ಮತ್ತು ಇತರ ಕೆಲವು ಭಾಷೆಗಳನ್ನು ಮಾತನಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಅಕ್ಟೋಬರ್ 12 ರಂದು ಲಖ್ಬೀರ್ ಹತ್ತಿರದ ಧಾನ್ಯ ಮಾರುಕಟ್ಟೆಗೆ ಕೆಲಸಕ್ಕಾಗಿ ಹೋಗಿದ್ದರು. ಆದರೆ, ಮದ್ಯವ್ಯಸನಿಯಾಗಿದ್ದ ಅವರಿಗೆ ಕೆಲಸ ಮಾಡಲು ಅಲ್ಲಿನ ಗುರುಶಿಖ್ ಎಂದು ಕರೆಸಿಕೊಳ್ಳುವವರು ಬಿಡಲಿಲ್ಲ. ನಂತರ ಅವರು ಅಲ್ಲಿದಂ ವಾಪಾಸ್ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಲಖ್ಬೀರ್‌ನನ್ನು ಕರೆದುಕೊಂಡು ಹೋಗಿ ಕಾರಿನಲ್ಲಿ ಕುಳಿತಿದ್ದ ನಿಹಾಂಗ್‌ಗಳ ಬಳಿಗೆ ಬಿಟ್ಟರ ಎಂದು ಸ್ಥಳೀಯರು ಹೇಳಿದ್ದಾರೆ. ಆ ರಾತ್ರಿ ಲಖ್ಬೀರ್‌ ಸಿಂಗ್‌ ಗೋಶಾಲೆಯಲ್ಲಿ ಜಾನುವಾರುಗಳಿಗೆ ಆಹಾರವನ್ನು ನೀಡುವುದನ್ನು ನೋಡಿದ್ದೇವೆ ಎಂದಿದ್ದಾರೆ.

ಮರುದಿನ ಬೆಳಿಗ್ಗೆ, ಲಖ್ಬೀರ್ ಸಿಂಗ್ ಧಾನ್ಯ ಮಾರುಕಟ್ಟೆಯಲ್ಲಿ ಕೆಲಸ ಮಾಡುವುದನ್ನು ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುವ ಹಳ್ಳಿಯ ನಿವಾಸಿ ಅಮೃತಪಾಲ್ ಸಿಂಗ್ ನೋಡಿದ್ದಾರೆ. “ನಾನು ಅವನನ್ನು ದೂರದಿಂದ ನೋಡಿದೆ” ಎಂದು ಅಮೃತಪಾಲ್ ಹೇಳಿದ್ದಾರೆ. ಅವರೇ ಹಳ್ಳಿಯಲ್ಲಿ ಕೊನೆಯ ಬಾರಿಗೆ ಲಖ್ಬೀ‌ರ್‌ ಸಿಂಗ್‌ ಅವರನ್ನು ನೋಡಿದವರು. ಲಖ್ಬೀ‌ರ್‌ ಸಿಂಗ್‌ ಅಕ್ಟೋಬರ್ 14 ರ ರಾತ್ರಿ ಸಿಂಘು ಗಡಿಯನ್ನು ಹೇಗೆ ತಲುಪಿದರು ಎಂಬುದು ಯಾರಿಗೂ ತಿಳಿದಿಲ್ಲ.

ಒಟ್ಟಾರೆ, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರ ಪ್ರತಿಭಟನೆಯನ್ನು ಮುರಿಯಲು ಸರ್ಕಾರ ನಡೆಸುತ್ತಿರುವ ಪಿತೂರಿ ಎಂದಿರುವ ರೈತರ ಆರೋಪಕ್ಕೆ ಈ ಎಲ್ಲಾ ಘಟನೆಗಳು ಸಾಕ್ಷಿಯಾಗುತ್ತಿವೆ. ಇದರ ಜೊತೆಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದು ಕೂಡ ಬೆಳಕಿಗೆ ಬಂದಿದೆ.

ಘಟನೆ ಬಗ್ಗೆ, ಲಖ್ಬೀರ್‌ ಸಿಂಗ್‌ ಬಗ್ಗೆ ಎಲ್ಲಿಯೂ ಮಾತನಾಡದಂತೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ಮತ್ತು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಗ್ರಾಮದ ಮಾಜಿ ಸರ್ಪಂಚ್ ಆಗಿದ್ದ ಸೋನು ಚೀಮಾ ಆರೋಪಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...