Homeಚಳವಳಿರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ...

ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

- Advertisement -
- Advertisement -

ದೆಹಲಿಯ ಸಿಂಘು ಗಡಿಯಲ್ಲಿ ಕಳೆದ ವಾರ ಹತ್ಯೆಯಾದ ದಲಿತ ಯುವಕ ಲಖ್ಬೀರ್‌ ಸಿಂಗ್‌ ಅವರ ಚೀಮಾ ಕಲಾನ್ ಗ್ರಾಮಕ್ಕೆ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಿಹಾಂಗ್ ಸಿಖ್ ಸರಬ್ಜಿತ್ ಸಿಂಗ್ ಪದೇ ಪದೇ ಭೇಟಿ ನೀಡಿರುವದನ್ನು ಗ್ರಾಮದ ನಿವಾಸಿಗಳು ದೃಢಪಡಿಸಿದ್ದಾರೆ.

ಕಳೆದ ತಿಂಗಳಲ್ಲಿ ಹಲವು ಬಾರಿ ನಿಹಾಂಗ್‌ ಸಿಖ್‌ಗಳು ಚೀಮಾ ಕಲಾನ್ ಗ್ರಾಮಕ್ಕೆ ಭೇಟಿ ನೀಡಿದ್ದರು ಎಂಬ ವಿಷಯ ಹೊರಬಂದಿದೆ. ಹತ್ಯೆಯಾ‌ದ ಮೂರು ದಿನಗಳ ಮೊದಲು ಲಖ್ಬೀರ್ ಸಿಂಗ್‌, ಬೊಲೆರೊ ಕ್ಯಾಂಪರ್ ಕಾರಿನಲ್ಲಿ ಇಬ್ಬರು ನಿಹಾಂಗ್‌ಗಳೊಂದಿಗೆ ಕಾಣಿಸಿಕೊಂಡಿರುವುದಾಗಿ ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ.

ಕಳೆದ ಎರಡು ಮೂರು ತಿಂಗಳುಗಳಿಂದ ಕೊಲೆ ಆರೋಪಿ ಸರಬ್ಜಿತ್ ಸಿಂಗ್, ಹಳ್ಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೊಲೆರೊ ಕ್ಯಾಂಪರ್ ಕಾರು ಓಡಿಸುತ್ತಿದ್ದನ್ನು ದೃಡಪಡಿಸಿದ್ದಾರೆ. ಜೊತೆಗೆ ಮೃತ ಲಖ್ಬೀರ್ ಸಿಂಗ್ ಸಹೋದರಿ ರಾಜ್ ಕೌರ್ ಕೂಡ ತನ್ನ ಸಹೋದರ ಸಿಂಘು ಗಡಿಗೆ ತಾನಾಗಿಯೇ ಹೋಗಲು ಸಾಧ್ಯವಿಲ್ಲ. ಅಲ್ಲಿ ಯಾರೋ ಆಮಿಷವೊಡ್ಡಿದ್ದರು ಎಂದು ನಿರಂತರವಾಗಿ ಹೇಳಿಕೆ ನೀಡಿದ್ದಾರೆ ಎಂದು ದಿ ಕಾರವಾನ್ ವರದಿ ಮಾಡಿದೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ಬಂಧಿತ ಆರೋಪಿ ಸರಬ್ಜಿತ್ ಸಿಂಗ್‌ ಹತ್ಯೆಯ ಜವಾಬ್ದಾರಿಯನ್ನು ವಹಿಸಿಕೊಂಡು ಅಕ್ಟೋಬರ್ 15 ರ ರಾತ್ರಿ ಪೊಲೀಸರಿಗೆ ಶರಣಾಗಿದ್ದರು. ಮರುದಿನ, ಇನ್ನೊಬ್ಬ ನಿಹಾಂಗ್ ಸಿಖ್ ನರೇನ್ ಸಿಂಗ್ ಅಮೃತಸರದ ಅಮರ್ಕೋಟ್ ಗ್ರಾಮದಲ್ಲಿ ಪೊಲೀಸರಿಗೆ ಶರಣಾದ ನಂತರ ಆತನನ್ನು ಬಂಧಿಸಲಾಗಿತ್ತು.

“ದಲಿತ ಯುವಕ ಲಖ್ಬೀರ್‌ ಸಿಂಗ್ ಗ್ರಂಥವನ್ನು ಅಪವಿತ್ರಗೊಳಿಸಿದ್ದನ್ನು ನರೇನ್ ಸಿಂಗ್ ನೋಡಿಲ್ಲ. ಆತ ಕೇವಲ ಸರಬ್ಜಿತ್ ಸಿಂಗ್‌ ಮಾತಿನಂತೆ ನಡೆದುಕೊಂಡಿರುವುದಾಗಿ ತಿಳಿಸಿದ್ದಾರೆ” ಎಂದು ನರೇನ್ ಸಿಂಗ್‌ರನ್ನು ಬಂಧಿಸಿದ ಅಮೃತಸರ ಗ್ರಾಮಾಂತರ ಠಾಣೆಯ ಹಿರಿಯ ಅಧೀಕ್ಷಕ ರಾಕೇಶ್ ಕೌಶಲ್ ಹೇಳಿದ್ದಾರೆ.

ಮತ್ತೊಬ್ಬ ಚೀಮಾ ಕಲಾನ್ ಗ್ರಾಮದ ನಿವಾಸಿ ಮಾತನಾಡಿ, ಈ ಮೊದಲು ಸರಾಯಿ ಅಮಾನತ್ ಖಾನ್ ಪೊಲೀಸ್ ಠಾಣೆಯ ಬಳಿ ಸುಮಾರು ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಸರಬ್ಜಿತ್ ಅವರನ್ನು ನೋಡಿದ್ದಾಗಿ ಮಾಹಿತಿ ನೀಡಿದ್ದಾರೆ.

“ಬಂಧನದಲ್ಲಿರುವ ಈ ಬಾಬಾ ಜೀ ಸರಬ್ಜಿತ್ ಸಿಂಗ್ ಅವರನ್ನು ನಾವು ನಮ್ಮ ಹಳ್ಳಿಯಲ್ಲಿ ಮೊದಲೇ ನೋಡಿದೆವು. ನಿನ್ನೆ, ನಾನು ಈ ವ್ಯಕ್ತಿಯ ವೀಡಿಯೋವನ್ನು ನೋಡುತ್ತಿದ್ದಾಗ ಎಲ್ಲ ನೆನಪಾಯಿತು. ಹಳ್ಳಿಯಲ್ಲಿ ಈ ಮನುಷ್ಯ ಯಾರದೋ ಕಾರನ್ನು ಓಡಿಸುವುದನ್ನು ನಾನು ನೋಡಿದ್ದೆ. ಆದರೆ, ಅದು ಯಾರ ಕಾರು ಎಂದು ನನಗೆ ತಿಳಿದಿಲ್ಲ” ಎಂದಿದ್ದಾರೆ.

ಮೃತನ ಕುಟುಂಬಸ್ಥರು ಮತ್ತು ಚೀಮಾ ಕಲಾನ್ ಗ್ರಾಮಸ್ಥರು

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ಹಳ್ಳಿಯ ಬಸ್ ನಿಲ್ದಾಣದ ಬಳಿ ನಿರ್ಮಿಸಲಾಗಿದ್ದ ಲಂಗರ್ ಹಾಲ್ ಹತ್ತಿರ ಅನೇಕ ಸಂದರ್ಭಗಳಲ್ಲಿ ಅನೇಕ ಗ್ರಾಮಸ್ಥರು ಸರಬ್ಜಿತ್ ಸಿಂಗ್‌ರನ್ನು ನೋಡಿದ್ದಾರೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಹಳ್ಳಿಯ ಹೊರ ಭಾಗದಲ್ಲಿ   ಕೈ-ಪಂಪ್‌ ಬಳಿ ಸರಬ್ಜಿತ್ ಸ್ನಾನ ಮಾಡುವುದನ್ನು ಸ್ಥಳೀಯರು ಸಹ ಗಮನಿಸಿದ್ದಾರೆ. ಕೆಲವು ಗ್ರಾಮಸ್ಥರು ಸರಬ್ಜಿತ್ ತಮ್ಮ ಹಳ್ಳಿಗೆ ಬಂದ ನಂತರ ತಮ್ಮ ಕೂದಲನ್ನು ಬೆಳೆಯಲು ಆರಂಭಿಸಿದ್ದರು. ಅವರು ಗುಜರಾತಿ, ಮರಾಠಿ ಮತ್ತು ಇತರ ಕೆಲವು ಭಾಷೆಗಳನ್ನು ಮಾತನಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಅಕ್ಟೋಬರ್ 12 ರಂದು ಲಖ್ಬೀರ್ ಹತ್ತಿರದ ಧಾನ್ಯ ಮಾರುಕಟ್ಟೆಗೆ ಕೆಲಸಕ್ಕಾಗಿ ಹೋಗಿದ್ದರು. ಆದರೆ, ಮದ್ಯವ್ಯಸನಿಯಾಗಿದ್ದ ಅವರಿಗೆ ಕೆಲಸ ಮಾಡಲು ಅಲ್ಲಿನ ಗುರುಶಿಖ್ ಎಂದು ಕರೆಸಿಕೊಳ್ಳುವವರು ಬಿಡಲಿಲ್ಲ. ನಂತರ ಅವರು ಅಲ್ಲಿದಂ ವಾಪಾಸ್ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಲಖ್ಬೀರ್‌ನನ್ನು ಕರೆದುಕೊಂಡು ಹೋಗಿ ಕಾರಿನಲ್ಲಿ ಕುಳಿತಿದ್ದ ನಿಹಾಂಗ್‌ಗಳ ಬಳಿಗೆ ಬಿಟ್ಟರ ಎಂದು ಸ್ಥಳೀಯರು ಹೇಳಿದ್ದಾರೆ. ಆ ರಾತ್ರಿ ಲಖ್ಬೀರ್‌ ಸಿಂಗ್‌ ಗೋಶಾಲೆಯಲ್ಲಿ ಜಾನುವಾರುಗಳಿಗೆ ಆಹಾರವನ್ನು ನೀಡುವುದನ್ನು ನೋಡಿದ್ದೇವೆ ಎಂದಿದ್ದಾರೆ.

ಮರುದಿನ ಬೆಳಿಗ್ಗೆ, ಲಖ್ಬೀರ್ ಸಿಂಗ್ ಧಾನ್ಯ ಮಾರುಕಟ್ಟೆಯಲ್ಲಿ ಕೆಲಸ ಮಾಡುವುದನ್ನು ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುವ ಹಳ್ಳಿಯ ನಿವಾಸಿ ಅಮೃತಪಾಲ್ ಸಿಂಗ್ ನೋಡಿದ್ದಾರೆ. “ನಾನು ಅವನನ್ನು ದೂರದಿಂದ ನೋಡಿದೆ” ಎಂದು ಅಮೃತಪಾಲ್ ಹೇಳಿದ್ದಾರೆ. ಅವರೇ ಹಳ್ಳಿಯಲ್ಲಿ ಕೊನೆಯ ಬಾರಿಗೆ ಲಖ್ಬೀ‌ರ್‌ ಸಿಂಗ್‌ ಅವರನ್ನು ನೋಡಿದವರು. ಲಖ್ಬೀ‌ರ್‌ ಸಿಂಗ್‌ ಅಕ್ಟೋಬರ್ 14 ರ ರಾತ್ರಿ ಸಿಂಘು ಗಡಿಯನ್ನು ಹೇಗೆ ತಲುಪಿದರು ಎಂಬುದು ಯಾರಿಗೂ ತಿಳಿದಿಲ್ಲ.

ಒಟ್ಟಾರೆ, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರ ಪ್ರತಿಭಟನೆಯನ್ನು ಮುರಿಯಲು ಸರ್ಕಾರ ನಡೆಸುತ್ತಿರುವ ಪಿತೂರಿ ಎಂದಿರುವ ರೈತರ ಆರೋಪಕ್ಕೆ ಈ ಎಲ್ಲಾ ಘಟನೆಗಳು ಸಾಕ್ಷಿಯಾಗುತ್ತಿವೆ. ಇದರ ಜೊತೆಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದು ಕೂಡ ಬೆಳಕಿಗೆ ಬಂದಿದೆ.

ಘಟನೆ ಬಗ್ಗೆ, ಲಖ್ಬೀರ್‌ ಸಿಂಗ್‌ ಬಗ್ಗೆ ಎಲ್ಲಿಯೂ ಮಾತನಾಡದಂತೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ಮತ್ತು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಗ್ರಾಮದ ಮಾಜಿ ಸರ್ಪಂಚ್ ಆಗಿದ್ದ ಸೋನು ಚೀಮಾ ಆರೋಪಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...