Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ:‌ ಸರ್ಕಾರದ ಮನವಿ ಮೇರೆಗೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಲಖಿಂಪುರ್‌ ಖೇರಿ ಹತ್ಯಾಕಾಂಡ:‌ ಸರ್ಕಾರದ ಮನವಿ ಮೇರೆಗೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

- Advertisement -
- Advertisement -

ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 15 ಕ್ಕೆ ಮುಂದೂಡಲಾಗಿದೆ. ಉತ್ತರ ಪ್ರದೇಶ ಸರ್ಕಾರದ ಮನವಿಯ ಮೇರೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಮುಂದಿನ ವಾರಕ್ಕೆ ಪ್ರಕರಣವನ್ನು ಮುಂದೂಡಿದೆ.

ಉತ್ತರ ಪ್ರದೇಶ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ನ್ಯಾಯಾಲಯದಿಂದ ಕಾಲಾವಕಾಶ ಕೋರಿ, ಸೋಮವಾರದವರೆಗೆ ನಮಗೆ ಸಮಯ ಕೊಡಿ, ನಾವು ಪ್ರಕರಣದಲ್ಲಿ ಕೆಲಸ ಮಾಡುತ್ತಿದ್ದೇವೆ. ಅದನ್ನು ಬಹುತೇಕ ಪೂರ್ಣಗೊಳಿಸಿದ್ದೇವೆ ಎಂದು ಪೀಠಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪಿಐಎಲ್ ಅನ್ನು ನವೆಂಬರ್ 15 ಕ್ಕೆ ಮುಂದೂಡಲಾಗಿದೆ.

ನವೆಂಬರ್‌ 8 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ, ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿರುವ ವರದಿ ಬಗ್ಗೆ ನಾವು ನಿರೀಕ್ಷಿಸಿದಂತೆ ತನಿಖೆ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು. ಕಳೆದ ಮೂರು ಬಾರಿಯ ವಿಚಾರಣೆಯಲ್ಲಿಯೂ ಯುಪಿ ಸರ್ಕಾರದ ತನಿಖೆ, ವರದಿ ಬಗ್ಗೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸುತ್ತಿದೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಯುಪಿ ಸರ್ಕಾರದ ಬಗ್ಗೆ ಅಸಮಾಧಾನ, ಸ್ವತಂತ್ರ ಮೇಲ್ವಿಚಾರಣೆಗೆ ಸುಪ್ರೀಂ ಒಲವು

ಪ್ರಕರಣದಲ್ಲಿ ಸ್ವತಂತ್ರ ಮೇಲ್ವಿಚಾರಣೆಗೆ ಆದೇಶಿಸುವುದಾಗಿ ತಿಳಿಸಿದ್ದ ನ್ಯಾಯಪೀಠವು, “ಎರಡು ಎಫ್‌ಐಆರ್‌ಗಳ ಸಾಕ್ಷ್ಯಗಳನ್ನು ಪ್ರತ್ಯೇಕವಾಗಿ ದಾಖಲಿಸಬೇಕು. ಹೀಗಾಗಿ ದಿನನಿತ್ಯದ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಬೇರೆ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರನ್ನು ನೇಮಿಸಲು ನಾವು ಒಲವು ತೋರುತ್ತೇವೆ. ನಿಮ್ಮ ರಾಜ್ಯ ಸರ್ಕಾರದ ನ್ಯಾಯಾಧೀಶರು ನಮಗೆ ಬೇಡ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿ ರಂಜೀತ್ ಸಿಂಗ್ ಅಥವಾ ನ್ಯಾಯಮೂರ್ತಿ ರಾಕೇಶ್ ಕುಮಾರ್ ಬಗ್ಗೆ ಯೋಚಿಸುತ್ತೇವೆ” ಎಂದು ನ. 8 ರಂದು ಸುಪ್ರೀಂಕೋರ್ಟ್ ನ್ಯಾಯಪೀಠ ತಿಳಿಸಿತ್ತು.

ಕಳೆದ ಎರಡು ವಾರಗಳ ಹಿಂದೆ (ಅ.26) ಹತ್ಯಾಕಾಂಡ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಹತ್ಯಾಕಾಂಡ ಪ್ರಕರಣದಲ್ಲಿ ಕೇವಲ 23 ಪ್ರತ್ಯಕ್ಷದರ್ಶಿ ಸಾಕ್ಷಿಗಳು ಸಾಲುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು. ಹೆಚ್ಚಿನ ಸಾಕ್ಷಿಗಳನ್ನು ಸಂಗ್ರಹಿಸಿ ಅವರಿಗೆ ರಕ್ಷಣೆ ನೀಡಿ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿತ್ತು. ಜೊತೆಗೆ  ಒಂದು ವೇಳೆ ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲು ನ್ಯಾಯಾಂಗ ಅಧಿಕಾರಿಗಳ ಕೊರತೆಯಿದ್ದಲ್ಲಿ ಹತ್ತಿರದ ಜಿಲ್ಲೆಗಳ ನ್ಯಾಯಾಧೀಶರು ಸಿಬ್ಬಂದಿಯನ್ನು ಒದಗಿಸುವಂತೆ ನಿರ್ದೇಶನ ನೀಡಿತ್ತು.
ಘಟನೆಯ ವಿವರ:
ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ರೈತರ ಗುಂಪು, ಯುಪಿಯ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದರು. ಆಗ ಏಕಾಏಕಿ ಅವರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಬಲಿಗರು ಕಾರು ಹರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಆ ನಂತರ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಹತ್ಯೆಯಾಗಿದ್ದರು. ಇದುವರೆಗೆ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.
ಹತ್ಯಾಕಾಂಡದ ಸಂದರ್ಭದಲ್ಲಿ ಆರೋಪಿ ಅಂಕಿತ್ ದಾಸ್ ಮತ್ತು ಆಶಿಶ್ ಮಿಶ್ರಾ ಅವರ ಪರವಾನಗಿ ಪಡೆದ ಬಂದೂಕುಗಳಿಂದ ಗುಂಡು ಹಾರಿಸಲಾಗಿದೆ ಎಂದು ವಿಧಿ ವಿಜ್ಞಾನ ಪ್ರಯೋಗಾಲಯವು ಮಂಗಳವಾರ (ನ.9) ದೃಢಪಡಿಸಿದೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್‌ ಗನ್‌ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...