Homeಮುಖಪುಟಲಿಖಿಂಪುರ್‌: ಪ್ರಧಾನ ಆರೋಪಿ ಆಶಿಶ್‌ ಮಿಶ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ಲಿಖಿಂಪುರ್‌: ಪ್ರಧಾನ ಆರೋಪಿ ಆಶಿಶ್‌ ಮಿಶ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ

- Advertisement -
- Advertisement -

ಲಿಖಿಂಪುರ್‌ ಖೇರಿ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾನನ್ನು ಶನಿವಾರ ಬಂಧಿಸಲಾಗಿತ್ತು. ಸುಮಾರು 12 ಗಂಟೆಗಳ ವಿಚಾರಣೆ ನಂತರ ಅವನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವೈದ್ಯಕೀಯ ತಂಡವು ಆರೋಪಿಯನ್ನು ಶನಿವಾರ ತಡರಾತ್ರಿ ಅಪರಾಧ ವಿಭಾಗದ ಕಚೇರಿಯಲ್ಲಿ ಪರೀಕ್ಷಿಸಿದ ನಂತರ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ನ್ಯಾಯಾಲಯಕ್ಕೆ ಕರೆದೊಯ್ದು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಆಶಿಶ್‌ನನ್ನು ಪೊಲೀಸ್ ರಿಮಾಂಡ್‌ ನೀಡುವ ಅರ್ಜಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟಿಗೆ ಸಲ್ಲಿಸಲಾಗಿದೆ ಎಂದು ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿ ಎಸ್ ಪಿ ಯಾದವ್ ಹೇಳಿದ್ದಾರೆ. ಇದರ ವಿಚಾರಣೆಯನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಲಿಖಿಂಪುರ್‌: 2 ನೇ FIR ನಲ್ಲಿ ರೈತರ ಮೇಲೆಯೇ ಆರೋಪ; ರೈತರ ಸಾವಿನ ಬಗ್ಗೆ ಉಲ್ಲೇಖವಿಲ್ಲ!

ಆರೋಪಿ ಆಶಿಶ್ ಮಿಶ್ರಾನನ್ನು ಲಖಿಂಪುರ್ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿ ಕೊರೊನಾ ಕ್ವಾರೈಂಟ್‌ನಲ್ಲಿ ಇರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆರಂಭದಲ್ಲಿ, ಕೈದಿಗಳನ್ನು ಮುಖ್ಯ ಬ್ಯಾರಕ್‌ನಿಂದ ದೂರವಿರಿಸಲಾಗುತ್ತದೆ. ಅವರಿಗೆ ಜೈಲಿನ ಆಹಾರವನ್ನು ನೀಡಲಾಗುತ್ತಿದೆ. ಕ್ವಾರಂಟೈನ್ ಅವಧಿ 14 ದಿನಗಳಾಗಿದ್ದು, ಅಲ್ಲಿ ಅವರ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು” ಎಂದು ಅಧಿಕಾರಿ ಹೇಳಿದ್ದಾರೆ.

ಉತ್ತರಪ್ರದೇಶದ ಲಿಖಿಂಪುರ್‌ ಖೇರಿಯಲ್ಲಿ ಪ್ರತಿಭಟನೆ ಮುಗಿಸಿ ವಾಪಾಸಾಗುತ್ತಿದ್ದ ರೈತರ ಮೇಲೆ ವಾಹನ ಹರಿಸಿ ಹತ್ಯೆ ಮಾಡಿರುವ ಆರೋಪದಲ್ಲಿ ಆಶಿಶ್ ಮಿಶ್ರಾನನ್ನು ಬಂಧಿಸಲಾಗಿದೆ. ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದರು.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...