Homeಮುಖಪುಟಲಖೀಂಪುರ ರೈತರ ಹತ್ಯಾಕಾಂಡ: ಇಬ್ಬರು ರೈತರನ್ನು ಬಂಧಿಸಿದ SIT!

ಲಖೀಂಪುರ ರೈತರ ಹತ್ಯಾಕಾಂಡ: ಇಬ್ಬರು ರೈತರನ್ನು ಬಂಧಿಸಿದ SIT!

- Advertisement -
- Advertisement -

ಲಖಿಂಪುರ ಖೇರಿ ಹತ್ಯಾಕಾಂಡದಲ್ಲಿ ತನ್ನ ಪುತ್ರನ ಕೈವಾಡದ ಕುರಿತು ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳ ಕೂಗುಗಳ ನಡುವೆ, ವಿಶೇಷ ತನಿಖಾ ತಂಡ (ಎಸ್‌ಐಟಿ) ಇಬ್ಬರು ರೈತರಾದ ಕಮಲ್‌ಜೀತ್ ಸಿಂಗ್ (29) ಮತ್ತು ಕವಾಲ್‌ಜೀತ್ ಸಿಂಗ್ ಸೋನು (35) ಅವರನ್ನು ಪ್ರಕರಣದಲ್ಲಿ ಬಂಧಿಸಿದೆ. ಅಕ್ಟೋಬರ್ 3, 2021 ರಂದು ನಡೆದ ಲಖೀಂಪುರ ಹಿಂಸಾಚಾರದ ಸಂದರ್ಭದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆಗೈದ ಆರೋಪಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.

ಎಸ್‌ಐಟಿ ಈ ಹಿಂದೆ ಬಿಡುಗಡೆ ಮಾಡಿದ ಶಂಕಿತರ ಚಿತ್ರಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ಇವರಿಬ್ಬರು ಕಳೆದ ಎರಡು ತಿಂಗಳಿನಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿಗಳು ಕೋರಿದ್ದಾರೆ.

ಇದನ್ನೂ ಓದಿ:ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ಮೂವರು ಬಿಜೆಪಿ ಕಾರ್ಯಕರ್ತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರು ರೈತರನ್ನು ಬಂಧಿಸಲಾಗಿದೆ. ವಿಚಿತ್ರಾ ಸಿಂಗ್, ಗುರ್ವಿಂದರ್ ಸಿಂಗ್, ಅವತಾರ್ ಸಿಂಗ್ ಮತ್ತು ರಂಜೀತ್ ಸಿಂಗ್ ಅವರನ್ನು ಈ ವರ್ಷದ ಆರಂಭದಲ್ಲಿ ಬಂಧಿಸಲಾಗಿತ್ತು.

ಬಿಜೆಪಿ ಕಾರ್ಯಕರ್ತ ಸುಮಿತ್ ಜೈಸ್ವಾಲ್ ಅವರ ದೂರಿನ ಆಧಾರದ ಮೇಲೆ, ‘ಅಪರಿಚಿತ ರೈತರ’ ವಿರುದ್ಧ ಆರಂಭದಲ್ಲಿ ಕೊಲೆ ಮತ್ತು ಗಲಭೆ ಆರೋಪಗಳೊಂದಿಗೆ ಎಫ್‌ಐಆರ್ ದಾಖಲಿಸಲಾಗಿತ್ತು. ಹಿಂಸಾಚಾರದ ಸಮಯದಲ್ಲಿ ನಾಲ್ವರು ರೈತರು ಮತ್ತು ಪತ್ರಕರ್ತರ ಸಾವಿನ ಪ್ರಕರಣದಲ್ಲಿ ಸುಮಿತ್ ಸ್ವತಃ ಆಶಿಶ್ ಮಿಶ್ರಾ ಜೊತೆಗೆ ಸಹ ಆರೋಪಿಯಾಗಿದ್ದಾನೆ. ಆದಾಗ್ಯೂ, ಸುಮಿತ್ ದಾಖಲಿಸಿದ ಎಫ್‌ಐಆರ್‌ನಲ್ಲಿ ಆಶಿಶ್‌ ಮಿಶ್ರಾ ಬೆಂಗಾವಲು ಪಡೆಯಿಂದ ಹೊಡೆದುರುಳಿಸಲಾಗಿರುವ ಐವರ ಸಾವಿನ ಬಗ್ಗೆ ಉಲ್ಲೇಖಿಸಲಾಗಿಲ್ಲ.

ಇದನ್ನೂ ಓದಿ:ಲಖೀಂಪುರ್ ರೈತರ ಹತ್ಯೆ ಮತ್ತು ನಂತರದ ಘಟನೆಗಳ ಸುತ್ತ..

ರೈತರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮೊದಲ ಎಫ್‌ಐಆರ್‌‌‌‌ ಅನ್ನು ಆಶಿಶ್ ಮತ್ತು ಇತರರ ವಿರುದ್ಧ ದಾಖಲಿಸಿದ್ದಾರೆ. ಘಟನೆಯನ್ನು ‘ಯೋಜಿತ’ ಎಂದು ಬಣ್ಣಿಸಿರುವ ಎಸ್‌ಐಟಿ ಆ ಪ್ರಕರಣದಲ್ಲಿ 13 ಜನರನ್ನು ಬಂಧಿಸಿದೆ.

ಸುಪ್ರೀಂ ಕೋರ್ಟ್ ನವೆಂಬರ್ 2021 ರಲ್ಲಿ ಎಸ್‌ಐಟಿಯನ್ನು ಪುನರ್‌ರಚಿಸಿತು. ಐಪಿಎಸ್ ಅಧಿಕಾರಿಗಳಾದ ಎಸ್‌ಬಿ ಶಿರಾದ್ಕರ್, ಪ್ರೀತಿಂದರ್ ಸಿಂಗ್ ಮತ್ತು ಪದ್ಮಜಾ ಚೌಹಾಣ್ ಜೊತೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ರಾಕೇಶ್ ಕುಮಾರ್ ಜೈನ್ ಅವರನ್ನು ಹಿಂಸಾಚಾರದ ತನಿಖೆಗಾಗಿ ತಂಡಕ್ಕೆ ಸೇರಿಸಲಾಯಿತು.

ಇದನ್ನೂ ಓದಿ:ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...