Homeಚಳವಳಿಲಖಿಂಪುರ್‌‌ ಖೇರಿ ರೈತರ ಹತ್ಯೆ: ಬಿಜೆಪಿ ಮುಖಂಡ ಸೇರಿ ಮತ್ತೆ ನಾಲ್ವರ ಬಂಧನ

ಲಖಿಂಪುರ್‌‌ ಖೇರಿ ರೈತರ ಹತ್ಯೆ: ಬಿಜೆಪಿ ಮುಖಂಡ ಸೇರಿ ಮತ್ತೆ ನಾಲ್ವರ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲೆ ವಾಹನ ಹತ್ತಿಸಿ ಎಂಟು ಮಂದಿಯ ಸಾವಿಗೆ ಕಾರಣರಾದ ಆರೋಪದಲ್ಲಿ ಒಬ್ಬ ಬಿಜೆಪಿ ಮುಖಂಡ ಸೇರಿದಂತೆ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.

ರೈತರ ಮೇಲೆ ಹರಿದ ಕಾರಿನಲ್ಲಿದ್ದವರನ್ನು ಸೋಮವಾರ ಬಂಧಿಸಲಾಗಿದ್ದು, ಈಗಾಗಲೇ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾನನ್ನು ಬಂಧಿಸಲಾಗಿತ್ತು.

“ಆರೋಪಿಗಳಾದ ಸುಮಿತ್‌ ಜೈಸ್ವಾಲ್‌, ಶಿಶುಪಾಲ್‌, ನಂದನ್‌ ಸಿಂಗ್ ಬಿಸ್ಟ್‌, ಸತ್ಯ ಪ್ರಕಾಶ್‌ ತ್ರಿಪಾಠಿ ಎಂಬವರನ್ನು ಲಖಿಂಪುರ್‌ ಖೇರಿ ಪೊಲೀಸರು ಹಾಗೂ ಅಪರಾಧ ಬ್ರಾಂಚ್ಆದ ಸ್ವಾತ್‌‌ ತಂಡದವರು ಬಂಧಿಸಿದ್ದಾರೆ. ಸತ್ಯ ಪ್ರಕಾಶ್ ತ್ರಿಪಾಠಿ ಅವರ ಬಳಿ ಇದ್ದ ಪರವಾನಗಿ ಇದ್ದ ಬಂದೂಕು ಹಾಗೂ ಮೂರು ಬುಲೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್‌ ಕುಮಾರ್‌ ಹೇಳಿಕೆ ನೀಡಿದ್ದಾರೆ.

ರೈತರ ಮೇಲೆ ಹರಿದ ಎಸ್‌ಯುವಿಯಲ್ಲಿ ಬಿಜೆಪಿ ಸ್ಥಳೀಯ ಮುಖಂಡ ಸುಮಿತ್‌ ಜೈಸ್ವಾಲ್‌ ಪರಾರಿಯಾಗುತ್ತಿರುವುದನ್ನು ವೈರಲ್‌ ವಿಡಿಯೋದಲ್ಲಿ ಕಾಣಬಹುದು. ಇದಕ್ಕೂ ಮುಂಚೆ, “ರೈತರು ತಮ್ಮ ಮೇಲೆ ಕಲ್ಲುಗಳನ್ನು ತೂರಾಟ ನಡೆಸಿದ್ದರಿಂದ ವಾಹನ ನಿಯಂತ್ರಣ ಕಳೆದುಕೊಂಡಿತು. ಅಪರಿಚಿತ ರೈತರು ನನ್ನ ವಾಹನ ಚಾಲಕ ಹಾಗೂ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಥಳಿಸಿದ್ದರು” ಎಂದು ಹೇಳಿ ಅಪರಿಚಿತ ರೈತರ ಮೇಲೆ ಕೊಲೆ ಆಪಾದನೆ ಹೊರಿಸಿ ಜೈಸ್ವಾಲ್‌ ಎಫ್‌ಐಆರ್‌ ದಾಖಲಿಸಿದ್ದರು.

‌ಅಕ್ಟೋಬರ್‌‌ 3ರಂದು ಮೂರು ವಾಹನಗಳು ಹರಿದು ಒಬ್ಬ ಪತ್ರಕರ್ತ ಹಾಗೂ ನಾಲ್ವರು ರೈತರು ಹತ್ಯೆಯಾಗಿದ್ದರು. ಜೊತೆಗೆ ಭುಗಿಲೆದ್ದ ಪ್ರತಿರೋಧದಲ್ಲಿ ಬಿಜೆಪಿ ಕಾರ್ಯಕರ್ತರೂ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ನನ್ನು ಅಕ್ಟೋಬರ್‌‌ 9ರಂದು ಬಂಧಿಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಕೋನಿಯ ಪೊಲೀಸ್‌ ಠಾಣೆಯಲ್ಲಿ ಅಕ್ಟೋಬರ್‌ 3ರಂದು ಪ್ರಕರಣ ದಾಖಲಾಗಿತ್ತು. ಈಗ ಬಂಧನವಾಗಿರುವ ಸುಮಿತ್‌ ಜೈಸ್ವಾಲ್‌ ನೀಡಿದ ದೂರಿನ ಅನ್ವಯವೂ ಅದೇ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್‌ ದಾಖಲಾಗಿತ್ತು.

ಆಶೀಶ್‌ ಮಿಶ್ರಾ ಅವರ ಬೆಂಗಾವಲಿನ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಆದರೆ ಕಾರು ಚಲಿಸುತ್ತಿರಲಿಲ್ಲ ಎಂದ ಜೈಸ್ವಾಲ್‌ ಹೇಳಿಕೊಂಡಿದ್ದರು.

“ನಾವು ಕಾರ್ಯಕ್ರಮದ ಸ್ಥಳದಲ್ಲಿದ್ದೆವು. ಭಯದ ವಾತಾವರಣವಿತ್ತು. ಪ್ರತಿಭಟನಾಕಾರರು ದೊಣ್ಣೆಗಳು ಮತ್ತು ಕಲ್ಲುಗಳಿಂದ ಶಸ್ತ್ರಸಜ್ಜಿತರಾಗಿದ್ದರು. ಜೊತೆಗೆ ನಮ್ಮ ಮೇಲೆ ಹಲ್ಲೆ ಮಾಡಿದರು, ನಮ್ಮನ್ನು ನಿಂದಿಸಿದರು. ಜೊತೆಗೆ ಖಾಲಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದರು” ಎಂದು ಬಿಜೆಪಿ ಮುಖಂಡ ಜೈಸ್ವಾಲ್‌ ಆರೋಪಿಸಿದ್ದರು.

ಅಜಯ್‌ ಮಿಶ್ರಾ ಬಂಧನಕ್ಕೆ ಆಗ್ರಹ

ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಆಗ್ರಹಿಸಿ ರೈತರು ಸೋಮವಾರ (ಅ.18) ದೇಶಾದ್ಯಂತ ರೈಲ್ ರೋಕೋ ಚಳವಳಿ ನಡೆಸಿದೆ.

ಕಳೆದ ವರ್ಷದಿಂದ ಒಕ್ಕೂಟ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳ ಒಕ್ಕೂಟ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಸೋಮವಾರ ಆರು ಗಂಟೆಗಳ ಕಾಲ ದೇಶಾದ್ಯಂತ ‘ರೈಲು ರೋಕೋ’ ಆಂದೋಲನಕ್ಕೆ ಕರೆ ನೀಡಿತ್ತು.

 ಇದನ್ನೂ ಓದಿರಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...