Homeಚಳವಳಿಲಖಿಂಪುರ್‌‌ ಖೇರಿ ರೈತರ ಹತ್ಯೆ: ಬಿಜೆಪಿ ಮುಖಂಡ ಸೇರಿ ಮತ್ತೆ ನಾಲ್ವರ ಬಂಧನ

ಲಖಿಂಪುರ್‌‌ ಖೇರಿ ರೈತರ ಹತ್ಯೆ: ಬಿಜೆಪಿ ಮುಖಂಡ ಸೇರಿ ಮತ್ತೆ ನಾಲ್ವರ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲೆ ವಾಹನ ಹತ್ತಿಸಿ ಎಂಟು ಮಂದಿಯ ಸಾವಿಗೆ ಕಾರಣರಾದ ಆರೋಪದಲ್ಲಿ ಒಬ್ಬ ಬಿಜೆಪಿ ಮುಖಂಡ ಸೇರಿದಂತೆ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.

ರೈತರ ಮೇಲೆ ಹರಿದ ಕಾರಿನಲ್ಲಿದ್ದವರನ್ನು ಸೋಮವಾರ ಬಂಧಿಸಲಾಗಿದ್ದು, ಈಗಾಗಲೇ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾನನ್ನು ಬಂಧಿಸಲಾಗಿತ್ತು.

“ಆರೋಪಿಗಳಾದ ಸುಮಿತ್‌ ಜೈಸ್ವಾಲ್‌, ಶಿಶುಪಾಲ್‌, ನಂದನ್‌ ಸಿಂಗ್ ಬಿಸ್ಟ್‌, ಸತ್ಯ ಪ್ರಕಾಶ್‌ ತ್ರಿಪಾಠಿ ಎಂಬವರನ್ನು ಲಖಿಂಪುರ್‌ ಖೇರಿ ಪೊಲೀಸರು ಹಾಗೂ ಅಪರಾಧ ಬ್ರಾಂಚ್ಆದ ಸ್ವಾತ್‌‌ ತಂಡದವರು ಬಂಧಿಸಿದ್ದಾರೆ. ಸತ್ಯ ಪ್ರಕಾಶ್ ತ್ರಿಪಾಠಿ ಅವರ ಬಳಿ ಇದ್ದ ಪರವಾನಗಿ ಇದ್ದ ಬಂದೂಕು ಹಾಗೂ ಮೂರು ಬುಲೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್‌ ಕುಮಾರ್‌ ಹೇಳಿಕೆ ನೀಡಿದ್ದಾರೆ.

ರೈತರ ಮೇಲೆ ಹರಿದ ಎಸ್‌ಯುವಿಯಲ್ಲಿ ಬಿಜೆಪಿ ಸ್ಥಳೀಯ ಮುಖಂಡ ಸುಮಿತ್‌ ಜೈಸ್ವಾಲ್‌ ಪರಾರಿಯಾಗುತ್ತಿರುವುದನ್ನು ವೈರಲ್‌ ವಿಡಿಯೋದಲ್ಲಿ ಕಾಣಬಹುದು. ಇದಕ್ಕೂ ಮುಂಚೆ, “ರೈತರು ತಮ್ಮ ಮೇಲೆ ಕಲ್ಲುಗಳನ್ನು ತೂರಾಟ ನಡೆಸಿದ್ದರಿಂದ ವಾಹನ ನಿಯಂತ್ರಣ ಕಳೆದುಕೊಂಡಿತು. ಅಪರಿಚಿತ ರೈತರು ನನ್ನ ವಾಹನ ಚಾಲಕ ಹಾಗೂ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಥಳಿಸಿದ್ದರು” ಎಂದು ಹೇಳಿ ಅಪರಿಚಿತ ರೈತರ ಮೇಲೆ ಕೊಲೆ ಆಪಾದನೆ ಹೊರಿಸಿ ಜೈಸ್ವಾಲ್‌ ಎಫ್‌ಐಆರ್‌ ದಾಖಲಿಸಿದ್ದರು.

‌ಅಕ್ಟೋಬರ್‌‌ 3ರಂದು ಮೂರು ವಾಹನಗಳು ಹರಿದು ಒಬ್ಬ ಪತ್ರಕರ್ತ ಹಾಗೂ ನಾಲ್ವರು ರೈತರು ಹತ್ಯೆಯಾಗಿದ್ದರು. ಜೊತೆಗೆ ಭುಗಿಲೆದ್ದ ಪ್ರತಿರೋಧದಲ್ಲಿ ಬಿಜೆಪಿ ಕಾರ್ಯಕರ್ತರೂ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ನನ್ನು ಅಕ್ಟೋಬರ್‌‌ 9ರಂದು ಬಂಧಿಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಕೋನಿಯ ಪೊಲೀಸ್‌ ಠಾಣೆಯಲ್ಲಿ ಅಕ್ಟೋಬರ್‌ 3ರಂದು ಪ್ರಕರಣ ದಾಖಲಾಗಿತ್ತು. ಈಗ ಬಂಧನವಾಗಿರುವ ಸುಮಿತ್‌ ಜೈಸ್ವಾಲ್‌ ನೀಡಿದ ದೂರಿನ ಅನ್ವಯವೂ ಅದೇ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್‌ ದಾಖಲಾಗಿತ್ತು.

ಆಶೀಶ್‌ ಮಿಶ್ರಾ ಅವರ ಬೆಂಗಾವಲಿನ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಆದರೆ ಕಾರು ಚಲಿಸುತ್ತಿರಲಿಲ್ಲ ಎಂದ ಜೈಸ್ವಾಲ್‌ ಹೇಳಿಕೊಂಡಿದ್ದರು.

“ನಾವು ಕಾರ್ಯಕ್ರಮದ ಸ್ಥಳದಲ್ಲಿದ್ದೆವು. ಭಯದ ವಾತಾವರಣವಿತ್ತು. ಪ್ರತಿಭಟನಾಕಾರರು ದೊಣ್ಣೆಗಳು ಮತ್ತು ಕಲ್ಲುಗಳಿಂದ ಶಸ್ತ್ರಸಜ್ಜಿತರಾಗಿದ್ದರು. ಜೊತೆಗೆ ನಮ್ಮ ಮೇಲೆ ಹಲ್ಲೆ ಮಾಡಿದರು, ನಮ್ಮನ್ನು ನಿಂದಿಸಿದರು. ಜೊತೆಗೆ ಖಾಲಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದರು” ಎಂದು ಬಿಜೆಪಿ ಮುಖಂಡ ಜೈಸ್ವಾಲ್‌ ಆರೋಪಿಸಿದ್ದರು.

ಅಜಯ್‌ ಮಿಶ್ರಾ ಬಂಧನಕ್ಕೆ ಆಗ್ರಹ

ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಆಗ್ರಹಿಸಿ ರೈತರು ಸೋಮವಾರ (ಅ.18) ದೇಶಾದ್ಯಂತ ರೈಲ್ ರೋಕೋ ಚಳವಳಿ ನಡೆಸಿದೆ.

ಕಳೆದ ವರ್ಷದಿಂದ ಒಕ್ಕೂಟ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳ ಒಕ್ಕೂಟ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಸೋಮವಾರ ಆರು ಗಂಟೆಗಳ ಕಾಲ ದೇಶಾದ್ಯಂತ ‘ರೈಲು ರೋಕೋ’ ಆಂದೋಲನಕ್ಕೆ ಕರೆ ನೀಡಿತ್ತು.

 ಇದನ್ನೂ ಓದಿರಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...