Homeಚಳವಳಿಲಖಿಂಪುರ್‌‌ ಖೇರಿ ರೈತರ ಹತ್ಯೆ: ಬಿಜೆಪಿ ಮುಖಂಡ ಸೇರಿ ಮತ್ತೆ ನಾಲ್ವರ ಬಂಧನ

ಲಖಿಂಪುರ್‌‌ ಖೇರಿ ರೈತರ ಹತ್ಯೆ: ಬಿಜೆಪಿ ಮುಖಂಡ ಸೇರಿ ಮತ್ತೆ ನಾಲ್ವರ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲೆ ವಾಹನ ಹತ್ತಿಸಿ ಎಂಟು ಮಂದಿಯ ಸಾವಿಗೆ ಕಾರಣರಾದ ಆರೋಪದಲ್ಲಿ ಒಬ್ಬ ಬಿಜೆಪಿ ಮುಖಂಡ ಸೇರಿದಂತೆ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.

ರೈತರ ಮೇಲೆ ಹರಿದ ಕಾರಿನಲ್ಲಿದ್ದವರನ್ನು ಸೋಮವಾರ ಬಂಧಿಸಲಾಗಿದ್ದು, ಈಗಾಗಲೇ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾನನ್ನು ಬಂಧಿಸಲಾಗಿತ್ತು.

“ಆರೋಪಿಗಳಾದ ಸುಮಿತ್‌ ಜೈಸ್ವಾಲ್‌, ಶಿಶುಪಾಲ್‌, ನಂದನ್‌ ಸಿಂಗ್ ಬಿಸ್ಟ್‌, ಸತ್ಯ ಪ್ರಕಾಶ್‌ ತ್ರಿಪಾಠಿ ಎಂಬವರನ್ನು ಲಖಿಂಪುರ್‌ ಖೇರಿ ಪೊಲೀಸರು ಹಾಗೂ ಅಪರಾಧ ಬ್ರಾಂಚ್ಆದ ಸ್ವಾತ್‌‌ ತಂಡದವರು ಬಂಧಿಸಿದ್ದಾರೆ. ಸತ್ಯ ಪ್ರಕಾಶ್ ತ್ರಿಪಾಠಿ ಅವರ ಬಳಿ ಇದ್ದ ಪರವಾನಗಿ ಇದ್ದ ಬಂದೂಕು ಹಾಗೂ ಮೂರು ಬುಲೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್‌ ಕುಮಾರ್‌ ಹೇಳಿಕೆ ನೀಡಿದ್ದಾರೆ.

ರೈತರ ಮೇಲೆ ಹರಿದ ಎಸ್‌ಯುವಿಯಲ್ಲಿ ಬಿಜೆಪಿ ಸ್ಥಳೀಯ ಮುಖಂಡ ಸುಮಿತ್‌ ಜೈಸ್ವಾಲ್‌ ಪರಾರಿಯಾಗುತ್ತಿರುವುದನ್ನು ವೈರಲ್‌ ವಿಡಿಯೋದಲ್ಲಿ ಕಾಣಬಹುದು. ಇದಕ್ಕೂ ಮುಂಚೆ, “ರೈತರು ತಮ್ಮ ಮೇಲೆ ಕಲ್ಲುಗಳನ್ನು ತೂರಾಟ ನಡೆಸಿದ್ದರಿಂದ ವಾಹನ ನಿಯಂತ್ರಣ ಕಳೆದುಕೊಂಡಿತು. ಅಪರಿಚಿತ ರೈತರು ನನ್ನ ವಾಹನ ಚಾಲಕ ಹಾಗೂ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಥಳಿಸಿದ್ದರು” ಎಂದು ಹೇಳಿ ಅಪರಿಚಿತ ರೈತರ ಮೇಲೆ ಕೊಲೆ ಆಪಾದನೆ ಹೊರಿಸಿ ಜೈಸ್ವಾಲ್‌ ಎಫ್‌ಐಆರ್‌ ದಾಖಲಿಸಿದ್ದರು.

‌ಅಕ್ಟೋಬರ್‌‌ 3ರಂದು ಮೂರು ವಾಹನಗಳು ಹರಿದು ಒಬ್ಬ ಪತ್ರಕರ್ತ ಹಾಗೂ ನಾಲ್ವರು ರೈತರು ಹತ್ಯೆಯಾಗಿದ್ದರು. ಜೊತೆಗೆ ಭುಗಿಲೆದ್ದ ಪ್ರತಿರೋಧದಲ್ಲಿ ಬಿಜೆಪಿ ಕಾರ್ಯಕರ್ತರೂ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ನನ್ನು ಅಕ್ಟೋಬರ್‌‌ 9ರಂದು ಬಂಧಿಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಕೋನಿಯ ಪೊಲೀಸ್‌ ಠಾಣೆಯಲ್ಲಿ ಅಕ್ಟೋಬರ್‌ 3ರಂದು ಪ್ರಕರಣ ದಾಖಲಾಗಿತ್ತು. ಈಗ ಬಂಧನವಾಗಿರುವ ಸುಮಿತ್‌ ಜೈಸ್ವಾಲ್‌ ನೀಡಿದ ದೂರಿನ ಅನ್ವಯವೂ ಅದೇ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್‌ ದಾಖಲಾಗಿತ್ತು.

ಆಶೀಶ್‌ ಮಿಶ್ರಾ ಅವರ ಬೆಂಗಾವಲಿನ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಆದರೆ ಕಾರು ಚಲಿಸುತ್ತಿರಲಿಲ್ಲ ಎಂದ ಜೈಸ್ವಾಲ್‌ ಹೇಳಿಕೊಂಡಿದ್ದರು.

“ನಾವು ಕಾರ್ಯಕ್ರಮದ ಸ್ಥಳದಲ್ಲಿದ್ದೆವು. ಭಯದ ವಾತಾವರಣವಿತ್ತು. ಪ್ರತಿಭಟನಾಕಾರರು ದೊಣ್ಣೆಗಳು ಮತ್ತು ಕಲ್ಲುಗಳಿಂದ ಶಸ್ತ್ರಸಜ್ಜಿತರಾಗಿದ್ದರು. ಜೊತೆಗೆ ನಮ್ಮ ಮೇಲೆ ಹಲ್ಲೆ ಮಾಡಿದರು, ನಮ್ಮನ್ನು ನಿಂದಿಸಿದರು. ಜೊತೆಗೆ ಖಾಲಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದರು” ಎಂದು ಬಿಜೆಪಿ ಮುಖಂಡ ಜೈಸ್ವಾಲ್‌ ಆರೋಪಿಸಿದ್ದರು.

ಅಜಯ್‌ ಮಿಶ್ರಾ ಬಂಧನಕ್ಕೆ ಆಗ್ರಹ

ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಆಗ್ರಹಿಸಿ ರೈತರು ಸೋಮವಾರ (ಅ.18) ದೇಶಾದ್ಯಂತ ರೈಲ್ ರೋಕೋ ಚಳವಳಿ ನಡೆಸಿದೆ.

ಕಳೆದ ವರ್ಷದಿಂದ ಒಕ್ಕೂಟ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳ ಒಕ್ಕೂಟ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಸೋಮವಾರ ಆರು ಗಂಟೆಗಳ ಕಾಲ ದೇಶಾದ್ಯಂತ ‘ರೈಲು ರೋಕೋ’ ಆಂದೋಲನಕ್ಕೆ ಕರೆ ನೀಡಿತ್ತು.

 ಇದನ್ನೂ ಓದಿರಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...