Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ

ಇದು ಕೊನೆಯಿಲ್ಲದ ಕಥೆಯಾಗಬಾರದು ಎಂದು ಎಚ್ಚರಿಕೆ ನೀಡಿದ ನ್ಯಾಯಾಲಯವು ಎಲ್ಲಾ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲು ಮತ್ತು ರಕ್ಷಿಸಲು ಯುಪಿ ಸರ್ಕಾರಕ್ಕೆ ಆದೇಶ ನೀಡಿದೆ.

- Advertisement -
- Advertisement -

ಲಖಿಂಪುರ್ ಖೇರಿ ರೈತರ ಹತ್ಯಾಕಾಂಡ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ. ಅಕ್ಟೋಬರ್ 03 ರಂದು ಶಾಂತಿಯುತ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವನ ಮಗ ಕಾರು ಹರಿಸಿ ನಾಲ್ವರು ರೈತರ ಕೊಲೆಗೆ ಕಾರಣವಾದ ಆರೋಪದ ಪ್ರಕರಣದಲ್ಲಿ ಕೇವಲ 23 ಪ್ರತ್ಯಕ್ಷದರ್ಶಿ ಸಾಕ್ಷಿಗಳು ಸಾಲುವುದಿಲ್ಲ ಎಂದು ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿದೆ.

ಹೆಚ್ಚಿನ ಸಾಕ್ಷಿಗಳನ್ನು ಸಂಗ್ರಹಿಸಿ ಅವರಿಗೆ ರಕ್ಷಣೆ ನೀಡಿ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿರುವ ಸುಪ್ರೀಂ, ಒಂದು ವೇಳೆ ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲು ನ್ಯಾಯಾಂಗ ಅಧಿಕಾರಿಗಳ ಕೊರತೆಯಿದ್ದಲ್ಲಿ ಹತ್ತಿರದ ಜಿಲ್ಲೆಗಳ ನ್ಯಾಯಾಧೀಶರು ಸಿಬ್ಬಂದಿಯನ್ನು ಒದಗಿಸುವಂತೆ ನಿರ್ದೇಶನ ನೀಡಿದೆ.

ಇದು ಕೊನೆಯಿಲ್ಲದ ಕಥೆಯಾಗಬಾರದು ಎಂದು ಎಚ್ಚರಿಕೆ ನೀಡಿದ ನ್ಯಾಯಾಲಯವು ಎಲ್ಲಾ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲು ಮತ್ತು ರಕ್ಷಿಸಲು ಯುಪಿ ಸರ್ಕಾರಕ್ಕೆ ಆದೇಶ ನೀಡಿದೆ.

ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ, ಒಕ್ಕೂಟ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ಮಾಡುತ್ತಿದ್ದ ರೈತರ ಗುಂಪು, ಯುಪಿಯ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದರು. ಆಗ ಏಕಾಏಕಿ ಅವರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಬಲಿಗರು ಕಾರು ಹರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಆನಂತರ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಹತ್ಯೆಯಾಗಿದ್ದರು.

ಅಕ್ಟೋಬರ್ 11 ರಂದು ಆಶಿಶ್ ಮಿಶ್ರಾ ಬಂಧನವಾಗಿದೆ. ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ನಿಭಾಯಿಸುತ್ತಿರುವ ರೀತಿಗೆ ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿತ್ತು. ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತರ ಕುಟುಂಬ ಸದಸ್ಯರು ಸಲ್ಲಿಸಿರುವ ಅರ್ಜಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್ ಪ್ರತ್ಯೇಕ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ.

ಅಕ್ಟೋಬರ್ 20ರ ಕಳೆದ ವಿಚಾರಣೆ ಸಮಯದಲ್ಲಿಯೂ ಕೂಡ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. “ಈ ಪ್ರಕರಣವನ್ನು ನೀವು ನಿಮಗೆ ಬೇಕಾದ ಹಾಗೆ ಎಳೆಯುತ್ತಿದ್ದೀರಿ ಅಲ್ಲವೇ? ವಿಚಾರಣೆಯ ವರದಿಯನ್ನು ಪಡೆಯುವುದಕ್ಕಾಗಿ ನಾವು ನಿನ್ನೆ ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆವು. ಕೊನೆಯ ಘಳಿಗೆಯಲ್ಲಿ ಸಲ್ಲಿಸಿದರೆ ಅದನ್ನು ನಾವು ಓದುವುದಾದರೂ ಹೇಗೆ? ಕನಿಷ್ಠ ಒಂದು ದಿನ ಮೊದಲು ವರದಿ ಸಲ್ಲಿಸಿ” ಎಂದು ಗರಂ ಆಗಿತ್ತು.

“ನೀವು 44 ಸಾಕ್ಷಿಗಳ ಪೈಕಿ ಕೇವಲ 4 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ್ದೀರಿ, ಯಾಕೆ ಉಳಿದವರದ್ದು ದಾಖಲಿಸಿಲ್ಲ? ಎಷ್ಟು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಮತ್ತು ಎಷ್ಟು ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ? ಪೊಲೀಸರು ಅವರನ್ನು ಪ್ರಶ್ನಿಸದ ಹೊರತು ನಾವು ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಿಲ್ಲ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತ್ತು.


ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡದ ವರದಿ ವಿಳಂಬ: ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...