Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ

ಇದು ಕೊನೆಯಿಲ್ಲದ ಕಥೆಯಾಗಬಾರದು ಎಂದು ಎಚ್ಚರಿಕೆ ನೀಡಿದ ನ್ಯಾಯಾಲಯವು ಎಲ್ಲಾ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲು ಮತ್ತು ರಕ್ಷಿಸಲು ಯುಪಿ ಸರ್ಕಾರಕ್ಕೆ ಆದೇಶ ನೀಡಿದೆ.

- Advertisement -
- Advertisement -

ಲಖಿಂಪುರ್ ಖೇರಿ ರೈತರ ಹತ್ಯಾಕಾಂಡ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ. ಅಕ್ಟೋಬರ್ 03 ರಂದು ಶಾಂತಿಯುತ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವನ ಮಗ ಕಾರು ಹರಿಸಿ ನಾಲ್ವರು ರೈತರ ಕೊಲೆಗೆ ಕಾರಣವಾದ ಆರೋಪದ ಪ್ರಕರಣದಲ್ಲಿ ಕೇವಲ 23 ಪ್ರತ್ಯಕ್ಷದರ್ಶಿ ಸಾಕ್ಷಿಗಳು ಸಾಲುವುದಿಲ್ಲ ಎಂದು ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿದೆ.

ಹೆಚ್ಚಿನ ಸಾಕ್ಷಿಗಳನ್ನು ಸಂಗ್ರಹಿಸಿ ಅವರಿಗೆ ರಕ್ಷಣೆ ನೀಡಿ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿರುವ ಸುಪ್ರೀಂ, ಒಂದು ವೇಳೆ ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲು ನ್ಯಾಯಾಂಗ ಅಧಿಕಾರಿಗಳ ಕೊರತೆಯಿದ್ದಲ್ಲಿ ಹತ್ತಿರದ ಜಿಲ್ಲೆಗಳ ನ್ಯಾಯಾಧೀಶರು ಸಿಬ್ಬಂದಿಯನ್ನು ಒದಗಿಸುವಂತೆ ನಿರ್ದೇಶನ ನೀಡಿದೆ.

ಇದು ಕೊನೆಯಿಲ್ಲದ ಕಥೆಯಾಗಬಾರದು ಎಂದು ಎಚ್ಚರಿಕೆ ನೀಡಿದ ನ್ಯಾಯಾಲಯವು ಎಲ್ಲಾ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲು ಮತ್ತು ರಕ್ಷಿಸಲು ಯುಪಿ ಸರ್ಕಾರಕ್ಕೆ ಆದೇಶ ನೀಡಿದೆ.

ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ, ಒಕ್ಕೂಟ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ಮಾಡುತ್ತಿದ್ದ ರೈತರ ಗುಂಪು, ಯುಪಿಯ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದರು. ಆಗ ಏಕಾಏಕಿ ಅವರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಬಲಿಗರು ಕಾರು ಹರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಆನಂತರ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಹತ್ಯೆಯಾಗಿದ್ದರು.

ಅಕ್ಟೋಬರ್ 11 ರಂದು ಆಶಿಶ್ ಮಿಶ್ರಾ ಬಂಧನವಾಗಿದೆ. ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ನಿಭಾಯಿಸುತ್ತಿರುವ ರೀತಿಗೆ ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿತ್ತು. ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತರ ಕುಟುಂಬ ಸದಸ್ಯರು ಸಲ್ಲಿಸಿರುವ ಅರ್ಜಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್ ಪ್ರತ್ಯೇಕ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ.

ಅಕ್ಟೋಬರ್ 20ರ ಕಳೆದ ವಿಚಾರಣೆ ಸಮಯದಲ್ಲಿಯೂ ಕೂಡ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. “ಈ ಪ್ರಕರಣವನ್ನು ನೀವು ನಿಮಗೆ ಬೇಕಾದ ಹಾಗೆ ಎಳೆಯುತ್ತಿದ್ದೀರಿ ಅಲ್ಲವೇ? ವಿಚಾರಣೆಯ ವರದಿಯನ್ನು ಪಡೆಯುವುದಕ್ಕಾಗಿ ನಾವು ನಿನ್ನೆ ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆವು. ಕೊನೆಯ ಘಳಿಗೆಯಲ್ಲಿ ಸಲ್ಲಿಸಿದರೆ ಅದನ್ನು ನಾವು ಓದುವುದಾದರೂ ಹೇಗೆ? ಕನಿಷ್ಠ ಒಂದು ದಿನ ಮೊದಲು ವರದಿ ಸಲ್ಲಿಸಿ” ಎಂದು ಗರಂ ಆಗಿತ್ತು.

“ನೀವು 44 ಸಾಕ್ಷಿಗಳ ಪೈಕಿ ಕೇವಲ 4 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ್ದೀರಿ, ಯಾಕೆ ಉಳಿದವರದ್ದು ದಾಖಲಿಸಿಲ್ಲ? ಎಷ್ಟು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಮತ್ತು ಎಷ್ಟು ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ? ಪೊಲೀಸರು ಅವರನ್ನು ಪ್ರಶ್ನಿಸದ ಹೊರತು ನಾವು ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಿಲ್ಲ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತ್ತು.


ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡದ ವರದಿ ವಿಳಂಬ: ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...