Homeಮುಖಪುಟಲಖಿಂಪುರ್‌ ಖೇರಿ: ಕೊನೆಗೂ ಸಂತ್ರಸ್ತ ಕುಟುಂಬವನ್ನು ಭೇಟಿಯಾದ ರಾಹುಲ್, ಪ್ರಿಯಾಂಕ ಗಾಂಧಿ

ಲಖಿಂಪುರ್‌ ಖೇರಿ: ಕೊನೆಗೂ ಸಂತ್ರಸ್ತ ಕುಟುಂಬವನ್ನು ಭೇಟಿಯಾದ ರಾಹುಲ್, ಪ್ರಿಯಾಂಕ ಗಾಂಧಿ

- Advertisement -
- Advertisement -

ಲಖಿಂಪುರ್‌ ಖೇರಿ ಹತ್ಯಾಕಾಂಡದಲ್ಲಿ ಮೃತಪಟ್ಟ ರೈತರ ಕುಟುಂಬವನ್ನು ಬುಧವಾರ ರಾತ್ರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಸೇರಿದಂತೆ ಕಾಂಗ್ರೆಸ್ ನಿಯೋಗ ಕೊನೆಗೂ ಭೇಟಿ ಮಾಡಿದೆ. ಘಟನೆಯಲ್ಲಿ ಮೃತಪಟ್ಟ ರೈತ 19 ವರ್ಷದ ಲವ್‌ಪ್ರೀತ್‌ ಸಿ೦ಗ್‌ ಅವರ ಕುಟುಂಬವನ್ನು ಭೇಟಿಯಾಗಿ ಸಾ೦ತ್ವನ ಹೇಳಿದ್ದಾರೆ.

ನಿಯೋಗದಲ್ಲಿ ರಾಹುಲ್‌ ಗಾ೦ಧಿ ಮತ್ತು ಪ್ರಿಯಾಂಕಾ ಗಾಂಧಿ ಅವರೊಂದಿಗೆ ಚತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್‌ ಬಾಘೆಲ್‌, ಪ೦ಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಚೆನ್ನಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಇದ್ದರು.

ಸಂತ್ರಸ್ತರ ಭೇಟಿಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಕ್ ಗಾಂಧಿ, “ದೇಶದಲ್ಲಿ ಈಗ ಪ್ರಜಾಪ್ರಭುತ್ವ ಇಲ್ಲ, ನಿರಂಕುಶಾಧಿಪತ್ಯವಿದೆ. ರೈತರ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿದೆ. ಲಖಿಂಪುರ್‌‌ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರ ಕುಟುಂಬವನ್ನು ಭೇಟಿ ಮಾಡಲು ರಾಜಕಾರಣಿಗಳಿಗೆ ಅವಕಾಶ ನಿರಾಕರಿಸಲಾಗಿತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಚೀನಾ+ಪಾಕಿಸ್ತಾನ+ಮಿ.56″= ಭಾರತದ ಪ್ರದೇಶಗಳ ಮೇಲೆ ಚೀನಾ ಅತಿಕ್ರಮಣ: ರಾಹುಲ್‌ ಗಾಂಧಿ

‘‘ಪ್ರಿಯಾಂಕ ಆಗಲಿ, ನಾನಾಗಲಿ ಅಥವಾ ನಮ್ಮ ಕುಟುಂಬದ ಯಾರೇ ಆಗಲಿ, ಕೆಟ್ಟದಾಗಿ ನಡೆಸಿಕೊಂಡರು ಎಂಬ ಕಾರಣಕ್ಕೆ ಹಿಂಜರಿದಿಲ್ಲ. ನಮ್ಮ ಮೇಲೆ ಹಲ್ಲೆ ಮಾಡಿ, ನಮ್ಮನ್ನು ವಶಕ್ಕೆ ಪಡೆಯಿರಿ ಅಥವಾ ನಮ್ಮನ್ನು ಹೂತು ಹಾಕಿ, ಈ ಯಾವುದರ ಬಗ್ಗೆಯು ಚಿಂತೆ ಇಲ್ಲ. ಉತ್ತರ ಪ್ರದೇಶದಲ್ಲಿ ಹೊಸ ರೀತಿಯ ರಾಜಕೀಯ ನಡೆಯುತ್ತಿದೆ. ಅಪರಾಧಿಗಳು ತಮಗೆ ಬೇಕಾದುದನ್ನು ಮಾಡಿ ಮುಕ್ತವಾಗಿ ತಿರುಗಾಡಬಹುದು. ಆದರೆ, ಸಂತ್ರಸ್ತರಿಗೆ ನ್ಯಾಯ ಕೊಡಿ ಎಂದು ಕೇಳಿದವರನ್ನು ಬಂಧಿಸಲಾಗಿದೆ” ಎಂದು ರಾಹುಲ್ ಗಾಂಧಿ ಕಿಡಿ ಕಾಡಿದರು.

ಸೋಮವಾರವೇ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ತೆರಳಿದ್ದ ಪ್ರಿಯಾಂಕ ಗಾಂಧಿಯನ್ನು ಯುಪಿ ಪೊಲೀಸರು ಬಂಧಿಸಿದ್ದರು. ಬುಧವಾರ ಬೆಳಿಗ್ಗೆ ರಾಹುಲ್‌ ಗಾ೦ಧಿಗೆ ಕೂಡಾ ಲಖಿ೦ಪುರ್‌ ಖೇರಿಗೆ ತೆರಳಲು ಯುಪಿ ಸರ್ಕಾರ ಅವಕಾಶ ನೀಡಿರಲಿಲ್ಲ. ಆನಂತರ ಒತ್ತಡ ಹೆಚ್ಚಾದಾಗ ರಾಹುಲ್‌ ಗಾ೦ಧಿ, ಪ್ರಿಯಾ೦ಕಾ ಗಾ೦ಧಿ ಹಾಗೂ ಇತರ ಮೂವರಿಗೆ ಭೇಟಿ ನೀಡಲು ಅವಕಾಶ ನೀಡಿತು.

ಅದಾಗ್ಯೂ ರಾಹುಲ್ ಗಾಂಧಿ ಅವರನ್ನು ಲಕ್ನೋ ವಿಮಾನ ನಿಲ್ದಾಣಲ್ಲಿ ತಡೆಯಲಾಗಿತ್ತು. ಭದ್ರತಾ ಸಿಬ್ಬಂದಿಗಳು ಅವರನ್ನು ಪೊಲೀಸ್‌ ಕಾರಿನಲ್ಲಿ ತೆರಳಲು ಕೇಳಿಕೊಂಡಿದ್ದು, ಇದಕ್ಕೆ ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ನಂತರ ರಾಹುಲ್ ಗಾಂಧಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ, ಧರಣಿ ಕೂತರು. ಕೊನೆಗೆ ಅವರದೆ ಸ್ವಂತ ಕಾರಿನಲ್ಲಿ ತೆರಳಲು ಅನುಮತಿ ನೀಡಲಾಗಿತ್ತು.

ಲಕ್ನೋ ವಿಮಾನ ನಿಲ್ದಾಣದಿಂದ ರಾಹುಲ್ ಗಾಂಧಿ ಮೊದಲಿಗೆ ಸೋಮವಾರದಿಂದ ಬಂಧನದಲ್ಲಿದ್ದ ತನ್ನ ಸಹೋದರಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಿ, ಅಲ್ಲಿಂದ ಅವರಿಬ್ಬರೂ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...