Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಆರೋಪಿಯು ಬಿಜೆಪಿ ಆಡಳಿತದ ಕೇಂದ್ರ ಸಚಿವರ ಮಗನಾದ ಕಾರಣ ಉತ್ತರ ಪ್ರದೇಶ ಸರ್ಕಾರ ಆರೋಪಿಯ ಪರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರೈತರು ಮತ್ತು ವಿಪಕ್ಷಗಳು ಆರೋಪಿಸಿವೆ. 

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ 8 ಜನರ ಸಾವಿಗೆ ಕಾರಣನಾದ ಆರೋಪ ಎದುರಿಸುತ್ತಿರುವು ಕೇಂದ್ರ ಸಚಿವ ಅಜಯ್ ಮಿಶ್ರಾರವರ ಪುತ್ರ ಆಶಿಶ್ ಮಿಶ್ರಾಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಸಂತ್ರಸ್ತ ರೈತ ಕುಟುಂಬಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಈ ಪ್ರಕರಣದ ವಿಚಾರಣೆ ವೇಳೆ ‘ಪ್ರಕರಣ ಘೋರ ಅಪರಾಧವಾದರೂ ಆರೋಪಿ ಆಶಿಶ್ ಮಿಶ್ರಾ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲ ಮತ್ತು ಸಾಕ್ಷಿ ನಾಶ ಮಾಡುವುದಿಲ್ಲ’ ಎಂದು ಯುಪಿ ಸರ್ಕಾರ ಹೇಳಿದೆ.

“ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡಲಾಗಿದೆ. ಅವನ್ನು ತಿರುಚಲು ಸಾಧ್ಯವಿಲ್ಲ. ಅದೇ ರೀತಿ ಆರೋಪಿಯು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲ. ಅಲ್ಲದೆ ಆರೋಪಿ ಮೊದಲ ಬಾರಿಗೆ ತಪ್ಪೆಸೆಗಿದ್ದಾರೆ. ಅವರದು ಪುನಾರಾವರ್ತಿತ ಅಪರಾಧವೆಸಗಿದ್ದರೆ ಮಾತ್ರ ಜಾಮೀನು ನೀಡಬಾರದು” ಎಂದು ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಮಹೇಶ್ ಜೇಠ್ಮಲಾನಿ ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶದ ವಿಶೇ‍ಷ ತನಿಖಾ ತಂಡವು ಆರೋಪಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಶಿಪಾರಸ್ಸು ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಉತ್ತರಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.

ಆರೋಪಿಯು ಬಿಜೆಪಿ ಆಡಳಿತದ ಕೇಂದ್ರ ಸಚಿವರ ಮಗನಾದ ಕಾರಣ ಉತ್ತರ ಪ್ರದೇಶ ಸರ್ಕಾರ ಆರೋಪಿಯ ಪರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರೈತರು ಮತ್ತು ವಿಪಕ್ಷಗಳು ಆರೋಪಿಸಿವೆ.

“ನೀವು ಜಾಮೀನು ನೀಡಿರುವುದರ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ನಾವು ಒತ್ತಾಯಿಸುವುದಿಲ್ಲ. ಆದರೆ ಈ ವಿಷಯದಲ್ಲಿ ನಿಮ್ಮ ನಿಲುವೇನು” ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಉತ್ತರ ಪ್ರದೇಶ ಸರ್ಕಾರವು, “ನಾವು ಅಲಹಾಬಾದ್ ಹೈಕೋರ್ಟ್‌ನಲ್ಲಿಯೂ ಸಹ ಇದು ಘೋರ ಅಪರಾಧ, ಈ ಅಪರಾಧವನ್ನು ಖಂಡಿಸಲು ಯಾವುದೇ ಪದಗಳಿಲ್ಲ ಎಂದು ವಾದಿಸಿದ್ದೆವು” ಎಂದು ತಿಳಿಸಿದೆ.

“ಅಪರಾಧವು ಗಂಭೀರವಾಗಿದೆ. ಅಪರಾಧವು ಉದ್ದೇಶಪೂರ್ವಕವಾಗಿ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ವಿಚಾರಣೆಯ ಹಂತದಲ್ಲಿ ಮಾತ್ರ ಪರಿಶೀಲಿಸಬಹುದು. ಅಪರಾಧದ ಉದ್ದೇಶವು ಸೂಕ್ಷ್ಮವಾದ ವಿಷಯವಾಗಿರುವುದರಿಂದ ವಿಚಾರಣೆಯ ಹಂತದಲ್ಲಿ ಮಾತ್ರ ಚರ್ಚಿಸಬಹುದು. ಆರೋಪಿಗೆ ಜಾಮೀನು ನೀಡುವುದನ್ನು ಅಲಹಾಬಾದ್ ಹೈಕೋರ್ಟಿನ ಮುಂದೆ ನಾನು ಕಟುವಾಗಿ ವಿರೋಧಿಸಿದೆ. ನಮ್ಮ ವಾದಗಳ ಹೊರತಾಗಿಯೂ ಹೈಕೋರ್ಟ್ ಜಾಮೀನು ನೀಡಿದೆ. ವಾಹನ ನಜ್ಜುಗುಜ್ಜಾಗಿ ಜನರು ಸಾವನ್ನಪ್ಪಿದ್ದಾರೆ ಹೊರತು ಬುಲೆಟ್ ಗಾಯದಿಂದಲ್ಲ” ಎಂದು ಯುಪಿ ಸರ್ಕಾರದ ವಕೀಲರು ಹೇಳಿದ್ದಾರೆ.

ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು ಮಾಡುವ ಸಮಯದಲ್ಲಿ ಹೈಕೋರ್ಟ್, ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ಸೇರಿದಂತೆ ಪೊಲೀಸರು ಪಟ್ಟಿ ಮಾಡಿರುವ ಕೆಲವು ಆರೋಪಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿತ್ತು. “ಪ್ರಕರಣದ ಸತ್ಯಗಳು ಮತ್ತು ಸಂದರ್ಭಗಳನ್ನು ಸಂಪೂರ್ಣವಾಗಿ ಪರಿಗಣಿಸಿ ಎಫ್ಐಆರ್ ಪ್ರಕಾರ, ಆರೋಪಿ ಆಶಿಶ್ ಮಿಶ್ರಾ ಗುಂಡು ಹಾರಿಸಿ ಪ್ರತಿಭಟನಾಕಾರರನ್ನು ಕೊಂದ ಉಲ್ಲೇಖವಿದೆ. ಆದರೆ ತನಿಖೆಯ ಸಮಯದಲ್ಲಿ, ಅಂತಹ ಯಾವುದೇ ಬಂದೂಕು ಗಾಯಗಳಾದ ಸಾಕ್ಷ್ಯವಿಲ್ಲ. ಸತ್ತವರ ದೇಹದ ಮೇಲೆ ಅಥವಾ ಗಾಯಗೊಂಡ ವ್ಯಕ್ತಿಗಳ ದೇಹದ ಗುಂಡಿನ ದಾಳಿ ಕಂಡುಬಂದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.

ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟ ಸಚಿವ ಸ್ಥಾನದಿಂದ ಕೈಬಿಡಲು ರೈತರು, ರೈತ ಸಂಘಟನೆಗಳು ಒತ್ತಾಯಿಸಿದ್ದವು. ಆದರೆ, ಒತ್ತಾಯಗಳ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿ ಮುಂದುವರಿದಿದ್ದಾರೆ.

ಸದ್ಯ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕೆಂಬ ಅರ್ಜಿಯ ವಿಚಾರಣೆ ಮುಗಿಸಿರುವ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.


ಇದನ್ನೂ ಓದಿ; ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...