Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಆರೋಪಿಯು ಬಿಜೆಪಿ ಆಡಳಿತದ ಕೇಂದ್ರ ಸಚಿವರ ಮಗನಾದ ಕಾರಣ ಉತ್ತರ ಪ್ರದೇಶ ಸರ್ಕಾರ ಆರೋಪಿಯ ಪರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರೈತರು ಮತ್ತು ವಿಪಕ್ಷಗಳು ಆರೋಪಿಸಿವೆ. 

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ 8 ಜನರ ಸಾವಿಗೆ ಕಾರಣನಾದ ಆರೋಪ ಎದುರಿಸುತ್ತಿರುವು ಕೇಂದ್ರ ಸಚಿವ ಅಜಯ್ ಮಿಶ್ರಾರವರ ಪುತ್ರ ಆಶಿಶ್ ಮಿಶ್ರಾಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಸಂತ್ರಸ್ತ ರೈತ ಕುಟುಂಬಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಈ ಪ್ರಕರಣದ ವಿಚಾರಣೆ ವೇಳೆ ‘ಪ್ರಕರಣ ಘೋರ ಅಪರಾಧವಾದರೂ ಆರೋಪಿ ಆಶಿಶ್ ಮಿಶ್ರಾ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲ ಮತ್ತು ಸಾಕ್ಷಿ ನಾಶ ಮಾಡುವುದಿಲ್ಲ’ ಎಂದು ಯುಪಿ ಸರ್ಕಾರ ಹೇಳಿದೆ.

“ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡಲಾಗಿದೆ. ಅವನ್ನು ತಿರುಚಲು ಸಾಧ್ಯವಿಲ್ಲ. ಅದೇ ರೀತಿ ಆರೋಪಿಯು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲ. ಅಲ್ಲದೆ ಆರೋಪಿ ಮೊದಲ ಬಾರಿಗೆ ತಪ್ಪೆಸೆಗಿದ್ದಾರೆ. ಅವರದು ಪುನಾರಾವರ್ತಿತ ಅಪರಾಧವೆಸಗಿದ್ದರೆ ಮಾತ್ರ ಜಾಮೀನು ನೀಡಬಾರದು” ಎಂದು ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಮಹೇಶ್ ಜೇಠ್ಮಲಾನಿ ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶದ ವಿಶೇ‍ಷ ತನಿಖಾ ತಂಡವು ಆರೋಪಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಶಿಪಾರಸ್ಸು ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಉತ್ತರಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.

ಆರೋಪಿಯು ಬಿಜೆಪಿ ಆಡಳಿತದ ಕೇಂದ್ರ ಸಚಿವರ ಮಗನಾದ ಕಾರಣ ಉತ್ತರ ಪ್ರದೇಶ ಸರ್ಕಾರ ಆರೋಪಿಯ ಪರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರೈತರು ಮತ್ತು ವಿಪಕ್ಷಗಳು ಆರೋಪಿಸಿವೆ.

“ನೀವು ಜಾಮೀನು ನೀಡಿರುವುದರ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ನಾವು ಒತ್ತಾಯಿಸುವುದಿಲ್ಲ. ಆದರೆ ಈ ವಿಷಯದಲ್ಲಿ ನಿಮ್ಮ ನಿಲುವೇನು” ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಉತ್ತರ ಪ್ರದೇಶ ಸರ್ಕಾರವು, “ನಾವು ಅಲಹಾಬಾದ್ ಹೈಕೋರ್ಟ್‌ನಲ್ಲಿಯೂ ಸಹ ಇದು ಘೋರ ಅಪರಾಧ, ಈ ಅಪರಾಧವನ್ನು ಖಂಡಿಸಲು ಯಾವುದೇ ಪದಗಳಿಲ್ಲ ಎಂದು ವಾದಿಸಿದ್ದೆವು” ಎಂದು ತಿಳಿಸಿದೆ.

“ಅಪರಾಧವು ಗಂಭೀರವಾಗಿದೆ. ಅಪರಾಧವು ಉದ್ದೇಶಪೂರ್ವಕವಾಗಿ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ವಿಚಾರಣೆಯ ಹಂತದಲ್ಲಿ ಮಾತ್ರ ಪರಿಶೀಲಿಸಬಹುದು. ಅಪರಾಧದ ಉದ್ದೇಶವು ಸೂಕ್ಷ್ಮವಾದ ವಿಷಯವಾಗಿರುವುದರಿಂದ ವಿಚಾರಣೆಯ ಹಂತದಲ್ಲಿ ಮಾತ್ರ ಚರ್ಚಿಸಬಹುದು. ಆರೋಪಿಗೆ ಜಾಮೀನು ನೀಡುವುದನ್ನು ಅಲಹಾಬಾದ್ ಹೈಕೋರ್ಟಿನ ಮುಂದೆ ನಾನು ಕಟುವಾಗಿ ವಿರೋಧಿಸಿದೆ. ನಮ್ಮ ವಾದಗಳ ಹೊರತಾಗಿಯೂ ಹೈಕೋರ್ಟ್ ಜಾಮೀನು ನೀಡಿದೆ. ವಾಹನ ನಜ್ಜುಗುಜ್ಜಾಗಿ ಜನರು ಸಾವನ್ನಪ್ಪಿದ್ದಾರೆ ಹೊರತು ಬುಲೆಟ್ ಗಾಯದಿಂದಲ್ಲ” ಎಂದು ಯುಪಿ ಸರ್ಕಾರದ ವಕೀಲರು ಹೇಳಿದ್ದಾರೆ.

ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು ಮಾಡುವ ಸಮಯದಲ್ಲಿ ಹೈಕೋರ್ಟ್, ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ಸೇರಿದಂತೆ ಪೊಲೀಸರು ಪಟ್ಟಿ ಮಾಡಿರುವ ಕೆಲವು ಆರೋಪಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿತ್ತು. “ಪ್ರಕರಣದ ಸತ್ಯಗಳು ಮತ್ತು ಸಂದರ್ಭಗಳನ್ನು ಸಂಪೂರ್ಣವಾಗಿ ಪರಿಗಣಿಸಿ ಎಫ್ಐಆರ್ ಪ್ರಕಾರ, ಆರೋಪಿ ಆಶಿಶ್ ಮಿಶ್ರಾ ಗುಂಡು ಹಾರಿಸಿ ಪ್ರತಿಭಟನಾಕಾರರನ್ನು ಕೊಂದ ಉಲ್ಲೇಖವಿದೆ. ಆದರೆ ತನಿಖೆಯ ಸಮಯದಲ್ಲಿ, ಅಂತಹ ಯಾವುದೇ ಬಂದೂಕು ಗಾಯಗಳಾದ ಸಾಕ್ಷ್ಯವಿಲ್ಲ. ಸತ್ತವರ ದೇಹದ ಮೇಲೆ ಅಥವಾ ಗಾಯಗೊಂಡ ವ್ಯಕ್ತಿಗಳ ದೇಹದ ಗುಂಡಿನ ದಾಳಿ ಕಂಡುಬಂದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.

ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟ ಸಚಿವ ಸ್ಥಾನದಿಂದ ಕೈಬಿಡಲು ರೈತರು, ರೈತ ಸಂಘಟನೆಗಳು ಒತ್ತಾಯಿಸಿದ್ದವು. ಆದರೆ, ಒತ್ತಾಯಗಳ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿ ಮುಂದುವರಿದಿದ್ದಾರೆ.

ಸದ್ಯ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕೆಂಬ ಅರ್ಜಿಯ ವಿಚಾರಣೆ ಮುಗಿಸಿರುವ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.


ಇದನ್ನೂ ಓದಿ; ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...