Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಆರೋಪಿಯು ಬಿಜೆಪಿ ಆಡಳಿತದ ಕೇಂದ್ರ ಸಚಿವರ ಮಗನಾದ ಕಾರಣ ಉತ್ತರ ಪ್ರದೇಶ ಸರ್ಕಾರ ಆರೋಪಿಯ ಪರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರೈತರು ಮತ್ತು ವಿಪಕ್ಷಗಳು ಆರೋಪಿಸಿವೆ. 

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ 8 ಜನರ ಸಾವಿಗೆ ಕಾರಣನಾದ ಆರೋಪ ಎದುರಿಸುತ್ತಿರುವು ಕೇಂದ್ರ ಸಚಿವ ಅಜಯ್ ಮಿಶ್ರಾರವರ ಪುತ್ರ ಆಶಿಶ್ ಮಿಶ್ರಾಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಸಂತ್ರಸ್ತ ರೈತ ಕುಟುಂಬಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಈ ಪ್ರಕರಣದ ವಿಚಾರಣೆ ವೇಳೆ ‘ಪ್ರಕರಣ ಘೋರ ಅಪರಾಧವಾದರೂ ಆರೋಪಿ ಆಶಿಶ್ ಮಿಶ್ರಾ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲ ಮತ್ತು ಸಾಕ್ಷಿ ನಾಶ ಮಾಡುವುದಿಲ್ಲ’ ಎಂದು ಯುಪಿ ಸರ್ಕಾರ ಹೇಳಿದೆ.

“ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡಲಾಗಿದೆ. ಅವನ್ನು ತಿರುಚಲು ಸಾಧ್ಯವಿಲ್ಲ. ಅದೇ ರೀತಿ ಆರೋಪಿಯು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲ. ಅಲ್ಲದೆ ಆರೋಪಿ ಮೊದಲ ಬಾರಿಗೆ ತಪ್ಪೆಸೆಗಿದ್ದಾರೆ. ಅವರದು ಪುನಾರಾವರ್ತಿತ ಅಪರಾಧವೆಸಗಿದ್ದರೆ ಮಾತ್ರ ಜಾಮೀನು ನೀಡಬಾರದು” ಎಂದು ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಮಹೇಶ್ ಜೇಠ್ಮಲಾನಿ ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶದ ವಿಶೇ‍ಷ ತನಿಖಾ ತಂಡವು ಆರೋಪಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಶಿಪಾರಸ್ಸು ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಉತ್ತರಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.

ಆರೋಪಿಯು ಬಿಜೆಪಿ ಆಡಳಿತದ ಕೇಂದ್ರ ಸಚಿವರ ಮಗನಾದ ಕಾರಣ ಉತ್ತರ ಪ್ರದೇಶ ಸರ್ಕಾರ ಆರೋಪಿಯ ಪರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರೈತರು ಮತ್ತು ವಿಪಕ್ಷಗಳು ಆರೋಪಿಸಿವೆ.

“ನೀವು ಜಾಮೀನು ನೀಡಿರುವುದರ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ನಾವು ಒತ್ತಾಯಿಸುವುದಿಲ್ಲ. ಆದರೆ ಈ ವಿಷಯದಲ್ಲಿ ನಿಮ್ಮ ನಿಲುವೇನು” ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಉತ್ತರ ಪ್ರದೇಶ ಸರ್ಕಾರವು, “ನಾವು ಅಲಹಾಬಾದ್ ಹೈಕೋರ್ಟ್‌ನಲ್ಲಿಯೂ ಸಹ ಇದು ಘೋರ ಅಪರಾಧ, ಈ ಅಪರಾಧವನ್ನು ಖಂಡಿಸಲು ಯಾವುದೇ ಪದಗಳಿಲ್ಲ ಎಂದು ವಾದಿಸಿದ್ದೆವು” ಎಂದು ತಿಳಿಸಿದೆ.

“ಅಪರಾಧವು ಗಂಭೀರವಾಗಿದೆ. ಅಪರಾಧವು ಉದ್ದೇಶಪೂರ್ವಕವಾಗಿ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ವಿಚಾರಣೆಯ ಹಂತದಲ್ಲಿ ಮಾತ್ರ ಪರಿಶೀಲಿಸಬಹುದು. ಅಪರಾಧದ ಉದ್ದೇಶವು ಸೂಕ್ಷ್ಮವಾದ ವಿಷಯವಾಗಿರುವುದರಿಂದ ವಿಚಾರಣೆಯ ಹಂತದಲ್ಲಿ ಮಾತ್ರ ಚರ್ಚಿಸಬಹುದು. ಆರೋಪಿಗೆ ಜಾಮೀನು ನೀಡುವುದನ್ನು ಅಲಹಾಬಾದ್ ಹೈಕೋರ್ಟಿನ ಮುಂದೆ ನಾನು ಕಟುವಾಗಿ ವಿರೋಧಿಸಿದೆ. ನಮ್ಮ ವಾದಗಳ ಹೊರತಾಗಿಯೂ ಹೈಕೋರ್ಟ್ ಜಾಮೀನು ನೀಡಿದೆ. ವಾಹನ ನಜ್ಜುಗುಜ್ಜಾಗಿ ಜನರು ಸಾವನ್ನಪ್ಪಿದ್ದಾರೆ ಹೊರತು ಬುಲೆಟ್ ಗಾಯದಿಂದಲ್ಲ” ಎಂದು ಯುಪಿ ಸರ್ಕಾರದ ವಕೀಲರು ಹೇಳಿದ್ದಾರೆ.

ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು ಮಾಡುವ ಸಮಯದಲ್ಲಿ ಹೈಕೋರ್ಟ್, ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ಸೇರಿದಂತೆ ಪೊಲೀಸರು ಪಟ್ಟಿ ಮಾಡಿರುವ ಕೆಲವು ಆರೋಪಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿತ್ತು. “ಪ್ರಕರಣದ ಸತ್ಯಗಳು ಮತ್ತು ಸಂದರ್ಭಗಳನ್ನು ಸಂಪೂರ್ಣವಾಗಿ ಪರಿಗಣಿಸಿ ಎಫ್ಐಆರ್ ಪ್ರಕಾರ, ಆರೋಪಿ ಆಶಿಶ್ ಮಿಶ್ರಾ ಗುಂಡು ಹಾರಿಸಿ ಪ್ರತಿಭಟನಾಕಾರರನ್ನು ಕೊಂದ ಉಲ್ಲೇಖವಿದೆ. ಆದರೆ ತನಿಖೆಯ ಸಮಯದಲ್ಲಿ, ಅಂತಹ ಯಾವುದೇ ಬಂದೂಕು ಗಾಯಗಳಾದ ಸಾಕ್ಷ್ಯವಿಲ್ಲ. ಸತ್ತವರ ದೇಹದ ಮೇಲೆ ಅಥವಾ ಗಾಯಗೊಂಡ ವ್ಯಕ್ತಿಗಳ ದೇಹದ ಗುಂಡಿನ ದಾಳಿ ಕಂಡುಬಂದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.

ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟ ಸಚಿವ ಸ್ಥಾನದಿಂದ ಕೈಬಿಡಲು ರೈತರು, ರೈತ ಸಂಘಟನೆಗಳು ಒತ್ತಾಯಿಸಿದ್ದವು. ಆದರೆ, ಒತ್ತಾಯಗಳ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿ ಮುಂದುವರಿದಿದ್ದಾರೆ.

ಸದ್ಯ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕೆಂಬ ಅರ್ಜಿಯ ವಿಚಾರಣೆ ಮುಗಿಸಿರುವ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.


ಇದನ್ನೂ ಓದಿ; ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...