Homeಚಳವಳಿಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

ಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿಯಾಗಿರುವ ಒಕ್ಕೂಟ ಸರ್ಕಾರದ ಸಚಿವರ ಪುತ್ರ ಆಶಿಶ್ ಮಿಶ್ರಾರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಉತ್ತರ ಪ್ರದೇಶದ ನ್ಯಾಯಾಲಯ ಆದೇಶಿಸಿದೆ.

ರೈತರ ಮೇಲೆ ಕಾರು ಹರಿಸಿ ರೈತರ ಹತ್ಯೆಗೆ ಕಾರಣರಾಗಿ, ಬಳಿಕ ನಡೆದ ಹಿಂಸಾಚಾರವೂ ಸೇರಿ ಒಟ್ಟು 8 ಜನರ ಸಾವಿಗೆ ಕಾರಣರಾಗಿರುವ ಆರೋಪದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಘಟನೆ ನಡೆದು 5 ದಿನಗಳ ಬಳಿಕ ಲಖಿಂಪುರ್ ಖೇರಿಯಲ್ಲಿ 12 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ , “ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ” ಎಂದು ಹೇಳಿ ಬಂಧಿಸಿದ್ದರು. ಬಳಿಕ   14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ಇದನ್ನೂ ಓದಿ: ಲಿಖಿಂಪುರ್‌: 2 ನೇ FIR ನಲ್ಲಿ ರೈತರ ಮೇಲೆಯೇ ಆರೋಪ; ರೈತರ ಸಾವಿನ ಬಗ್ಗೆ ಉಲ್ಲೇಖವಿಲ್ಲ!

“ಕಳೆದ ಭಾನುವಾರ ನಡೆದ ಘಟನೆಯ ವೇಳೆ ಸಚಿವರ ಮಗ ಸ್ಥಳದಲ್ಲಿ ಇದ್ದ ಕುರಿತು ಹಲವು ಅಂಶಗಳನ್ನು ವಿವರಿಸಲು ಸಾಧ್ಯವಾಗಿಲ್ಲ. ಆತ ಅಂದು ಮಧ್ಯಾಹ್ನ 2ರಿಂದ 4 ಗಂಟೆಗಳ ನಡುವೆ ಘಟನಾ ಸ್ಥಳದಲ್ಲಿ ಇದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆತನ ಫೋನ್ ಸಿಗ್ನಲ್‌ ಕೂಡ ಘಟನಾ ಸ್ಥಳದ ಹತ್ತಿರಕ್ಕೆ ತೋರಿಸಿದೆ. ರೈತರನ್ನು ಮೇಲೆ ಹತ್ತಿದ ಎಸ್‌ಯುವಿ ಚಾಲನೆ ಕುರಿತು ಆತ ಹೇಳುತ್ತಿರುವ ವಿವರಣೆಗಳು ಹೊಂದಿಕೆಯಾಗುತ್ತಿಲ್ಲ” ಎಂದು ಉತ್ತರ ಪ್ರದೇಶ ಪೊಲೀಸ್‌ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿತ್ತು.

ಅಕ್ಟೋಬರ್‌ 03 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಕಾರು ಹರಿಸಿ 4 ರೈತರನ್ನು ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಶಿಶ್ ಮಿಶ್ರಾರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಲಿಖಿಂಪುರ್‌: ಪ್ರಧಾನ ಆರೋಪಿ ಆಶಿಶ್‌ ಮಿಶ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...