Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಆರೋಪಿ ಆಶೀಶ್ ಮಿಶ್ರಾ ಸೇರಿ ಮೂವರಿಗೆ ಜಾಮೀನು ನಿರಾಕರಣೆ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಆರೋಪಿ ಆಶೀಶ್ ಮಿಶ್ರಾ ಸೇರಿ ಮೂವರಿಗೆ ಜಾಮೀನು ನಿರಾಕರಣೆ

ಇನ್ನು ಮುಂದೆ ಪ್ರಕರಣದ ಎಸ್‌ಐಟಿ ತನಿಖೆಯ ಮೇಲ್ವಿಚಾರಣೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಗಲಿಗೆ.

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಸೇರಿ ಮೂವರ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವು ನವೆಂಬರ್ 15 (ಸೋಮವಾರ) ರಂದು ತಿರಸ್ಕರಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾರ ಸಹ-ಆರೋಪಿಗಳಾದ ಲವ್ ಕುಶ್ ರಾಣಾ ಮತ್ತು ಆಶಿಶ್ ಪಾಂಡೆಗೂ ಜಾಮೀನು ನಿರಾಕರಿಸಲಾಗಿದೆ. ಈ ಹಿಂದೆಯೂ ಕೆಳ ನ್ಯಾಯಾಲಯ ಮೂವರಿಗೆ ಜಾಮೀನು ನಿರಾಕರಿಸಿತ್ತು.

ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡಿರುವ ವರದಿಯನ್ನು ಪ್ರಾಸಿಕ್ಯೂಷನ್ ಸಲ್ಲಿಸಿದ ನಂತರ ನ್ಯಾಯಾಲಯ ಈ ತೀರ್ಪು ನೀಡಿದೆ. ಜಿಲ್ಲಾ ಸರ್ಕಾರಿ ವಕೀಲ ಅರವಿಂದ್ ತ್ರಿಪಾಠಿ, “ಪ್ರಕರಣವು ಗಂಭೀರ ಸ್ವರೂಪದ್ದಾಗಿದೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ ಎಂಬುದನ್ನು ನ್ಯಾಯಾಲಯವು ಗಮನಿಸಿದೆ” ಎಂದು ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಎಸ್‌ಐಟಿ ತನಿಖೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಾಧೀಶರನ್ನು ನೇಮಿಸುವ ಸುಪ್ರೀಂ ಕೋರ್ಟ್‌ನ ಸಲಹೆಗೆ ಉತ್ತರ ಪ್ರದೇಶ ಸರ್ಕಾರ ಸೋಮವಾರ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್‌ ಗನ್‌ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ನಿವೃತ್ತ ನ್ಯಾಯಾಧೀಶರ ಹೆಸರನ್ನು ಪ್ರಕಟಿಸಲು ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಜೊತೆಗೆ ರಾಜ್ಯ ಸರ್ಕಾರವು ಸ್ಥಾಪಿಸಿರುವ ವಿಶೇಷ ತನಿಖಾ ತಂಡಕ್ಕೆ ಸೇರಿಸಲು ಯುಪಿ ಕೇಡರ್‌ನ ಆದರೆ ರಾಜ್ಯದ ಸ್ಥಳೀಯರಲ್ಲದ ಐಪಿಎಸ್ ಅಧಿಕಾರಿಗಳ ಹೆಸರನ್ನು ಸಹ ಕೋರಿದೆ.

“ಮೇಲ್ವಿಚಾರಣೆಗೆ ನೇಮಕಗೊಳ್ಳುವ ನ್ಯಾಯಾಧೀಶರ ಹೆಸರನ್ನು ಘೋಷಿಸಲು ಪೀಠಕ್ಕೆ ಒಂದು ದಿನದ ಸಮಯ ಬೇಕಾಗುತ್ತದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿ ರಂಜೀತ್ ಸಿಂಗ್ ಅಥವಾ ನ್ಯಾಯಮೂರ್ತಿ ರಾಕೇಶ್ ಕುಮಾರ್ ಬಗ್ಗೆ ಯೋಚಿಸುತ್ತೇವೆ. ನಾವು ಸಂಬಂಧಪಟ್ಟ ನ್ಯಾಯಾಧೀಶರೊಂದಿಗೂ ಮಾತನಾಡಬೇಕಾಗಿದೆ” ಎಂದು ಸಿಜೆಐ ಹೇಳಿದ್ದಾರೆ.

ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ರೈತರ ಗುಂಪು, ಯುಪಿಯ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದರು. ಆಗ ಏಕಾಏಕಿ ಅವರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಬಲಿಗರು ಕಾರು ಹರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಆ ನಂತರ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಹತ್ಯೆಯಾಗಿದ್ದರು. ಇದುವರೆಗೆ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...