Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಆರೋಪಿ ಆಶೀಶ್ ಮಿಶ್ರಾ ಸೇರಿ ಮೂವರಿಗೆ ಜಾಮೀನು ನಿರಾಕರಣೆ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಆರೋಪಿ ಆಶೀಶ್ ಮಿಶ್ರಾ ಸೇರಿ ಮೂವರಿಗೆ ಜಾಮೀನು ನಿರಾಕರಣೆ

ಇನ್ನು ಮುಂದೆ ಪ್ರಕರಣದ ಎಸ್‌ಐಟಿ ತನಿಖೆಯ ಮೇಲ್ವಿಚಾರಣೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಗಲಿಗೆ.

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಸೇರಿ ಮೂವರ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವು ನವೆಂಬರ್ 15 (ಸೋಮವಾರ) ರಂದು ತಿರಸ್ಕರಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾರ ಸಹ-ಆರೋಪಿಗಳಾದ ಲವ್ ಕುಶ್ ರಾಣಾ ಮತ್ತು ಆಶಿಶ್ ಪಾಂಡೆಗೂ ಜಾಮೀನು ನಿರಾಕರಿಸಲಾಗಿದೆ. ಈ ಹಿಂದೆಯೂ ಕೆಳ ನ್ಯಾಯಾಲಯ ಮೂವರಿಗೆ ಜಾಮೀನು ನಿರಾಕರಿಸಿತ್ತು.

ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡಿರುವ ವರದಿಯನ್ನು ಪ್ರಾಸಿಕ್ಯೂಷನ್ ಸಲ್ಲಿಸಿದ ನಂತರ ನ್ಯಾಯಾಲಯ ಈ ತೀರ್ಪು ನೀಡಿದೆ. ಜಿಲ್ಲಾ ಸರ್ಕಾರಿ ವಕೀಲ ಅರವಿಂದ್ ತ್ರಿಪಾಠಿ, “ಪ್ರಕರಣವು ಗಂಭೀರ ಸ್ವರೂಪದ್ದಾಗಿದೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ ಎಂಬುದನ್ನು ನ್ಯಾಯಾಲಯವು ಗಮನಿಸಿದೆ” ಎಂದು ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಎಸ್‌ಐಟಿ ತನಿಖೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಾಧೀಶರನ್ನು ನೇಮಿಸುವ ಸುಪ್ರೀಂ ಕೋರ್ಟ್‌ನ ಸಲಹೆಗೆ ಉತ್ತರ ಪ್ರದೇಶ ಸರ್ಕಾರ ಸೋಮವಾರ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್‌ ಗನ್‌ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ನಿವೃತ್ತ ನ್ಯಾಯಾಧೀಶರ ಹೆಸರನ್ನು ಪ್ರಕಟಿಸಲು ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಜೊತೆಗೆ ರಾಜ್ಯ ಸರ್ಕಾರವು ಸ್ಥಾಪಿಸಿರುವ ವಿಶೇಷ ತನಿಖಾ ತಂಡಕ್ಕೆ ಸೇರಿಸಲು ಯುಪಿ ಕೇಡರ್‌ನ ಆದರೆ ರಾಜ್ಯದ ಸ್ಥಳೀಯರಲ್ಲದ ಐಪಿಎಸ್ ಅಧಿಕಾರಿಗಳ ಹೆಸರನ್ನು ಸಹ ಕೋರಿದೆ.

“ಮೇಲ್ವಿಚಾರಣೆಗೆ ನೇಮಕಗೊಳ್ಳುವ ನ್ಯಾಯಾಧೀಶರ ಹೆಸರನ್ನು ಘೋಷಿಸಲು ಪೀಠಕ್ಕೆ ಒಂದು ದಿನದ ಸಮಯ ಬೇಕಾಗುತ್ತದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿ ರಂಜೀತ್ ಸಿಂಗ್ ಅಥವಾ ನ್ಯಾಯಮೂರ್ತಿ ರಾಕೇಶ್ ಕುಮಾರ್ ಬಗ್ಗೆ ಯೋಚಿಸುತ್ತೇವೆ. ನಾವು ಸಂಬಂಧಪಟ್ಟ ನ್ಯಾಯಾಧೀಶರೊಂದಿಗೂ ಮಾತನಾಡಬೇಕಾಗಿದೆ” ಎಂದು ಸಿಜೆಐ ಹೇಳಿದ್ದಾರೆ.

ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ರೈತರ ಗುಂಪು, ಯುಪಿಯ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದರು. ಆಗ ಏಕಾಏಕಿ ಅವರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಬಲಿಗರು ಕಾರು ಹರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಆ ನಂತರ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಹತ್ಯೆಯಾಗಿದ್ದರು. ಇದುವರೆಗೆ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...