ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಕೇಂದ್ರ ಸಚಿವರ ಮಗನ ವಿರುದ್ಧ ಕಠಿಣ ಕ್ರಮ ಕೈಗೊಂಡಿಲ್ಲ. ಸಚಿವರ ರಾಜೀನಾಮೆ ಪಡೆದಿಲ್ಲ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಸೋಮವಾರ ಮೌನ ವ್ರತ ಸತ್ಯಾಗ್ರಹ ನಡೆಸುತ್ತಿದೆ.
ರೈತರ ಹತ್ಯಾಕಾಂಡವನ್ನು ಖಂಡಿಸಿರುವ ಕಾಂಗ್ರೆಸ್ ದೇಶದಾದ್ಯಂತ ಹೋರಾಟ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರನ್ನು ವಜಾ ಗೊಳಿಸುವಂತೆ ಮತ್ತು ಈ ಹತ್ಯಾಕಾಂಡ ನಡೆಸಿದ ಎಲ್ಲಾ ಅಪರಾಧಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ಸೋಮವಾರ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದೆ.
ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ನ್ಯಾಯಾಂಗ ಬಂಧನದಲ್ಲಿದ್ದು, ಈವರೆಗೂ ಕೃತ್ಯ ಎಸಗಿದ ಆತನ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಜೊತೆಗೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ರಾಜೀನಾಮೆ ಪಡೆದಿಲ್ಲ. ಕೇಂದ್ರ ಸಚಿವರನ್ನು ವಜಾ ಗೊಳಿಸುವಂತೆ ಮತ್ತು ಈ ಹತ್ಯಾಕಾಂಡ ನಡೆಸಿದ ಎಲ್ಲಾ ಅಪರಾಧಿಗಳನ್ನು ತಕ್ಷಣ ಬಂಧಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.
ಇದನ್ನೂ ಓದಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್
ಉತ್ತರಪ್ರದೇಶದ ಲಖಿಂಪುರ್ ಖೇರಿಯ ಪ್ರತಿಭಟನಾ ನಿರತ ನಾಲ್ವರು ರೈತರ ಹತ್ಯೆ ಇಡೀ ದೇಶದ ಆತ್ಮಸಾಕ್ಷಿಯನ್ನು ಕದಡಿದೆ.
ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಈ ಹೇಯ ಕೃತ್ಯವನ್ನು ಖಂಡಿಸಿ ಹೋರಾಟ ನಡೆಸುತ್ತಿದೆ.
ಈ ವರೆಗೂ ಕೃತ್ಯ ಎಸಗಿದ ಕೇಂದ್ರ ಸಚಿವರ ಮಗನ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ, ಸಚಿವರ ರಾಜೀನಾಮೆ ಪಡೆದಿಲ್ಲ.
– @DKShivakumar pic.twitter.com/1YhL2cl993— Karnataka Congress (@INCKarnataka) October 10, 2021
ಅಕ್ಟೋಬರ್ 11 ರಂದು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯ ಗಾಂಧಿ ಪ್ರತಿಮೆಯ ಮುಂದೆ ಬೆಳಿಗ್ಗೆ 11 ಗಂಟೆಯಿಂದ ‘ಮೌನ ವ್ರತ’ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಈ ‘ಮೌನ ವ್ರತ’ ಸತ್ಯಾಗ್ರಹದಲ್ಲಿ ಪಕ್ಷದ ಎಲ್ಲಾ ನಾಯಕರು, ಶಾಸಕರು, ಮಾಜಿ ಸಚಿವರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ, ಕೇಂದ್ರ ಹಾಗೂ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ರೈತರ ಹತ್ಯಾಕಾಂಡ ನಡೆಸಿದವರ ರಕ್ಷಣೆಗೆ ನಿಂತಿರುವುದನ್ನು ಖಂಡಿಸಬೇಕೆಂದು ಕೋರುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
Live from Congress Bhavana https://t.co/lC1usX3dBn
— Karnataka Congress (@INCKarnataka) October 11, 2021
ಇದನ್ನೂ ಓದಿ: ಲಖಿಂಪುರ್ಖೇರಿ: ಆಶೀಶ್ ಮಿಶ್ರಾ ಅರೆಸ್ಟ್, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!