Homeಚಳವಳಿರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರ ಸಾವಿಗೆ ಪ್ರತಿರೋಧ ವ್ಯಕ್ತಪಡಿಸಲು ರೈತ ಸಂಘಟನೆಗಳು ಅಕ್ಟೋಬರ್ 18 ರಂದು ‘ರೈಲ್ ರೋಕೋ’ ಮತ್ತು ಅಕ್ಟೋಬರ್ 26 ರಂದು ಲಖನೌದಲ್ಲಿ ಮಹಾಪಂಚಾಯತ್ ನಡೆಸಲಿವೆ.

ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು. ಎಫ್‌ಐಆರ್‌ನಲ್ಲಿ ಕೊಲೆ ಆರೋಪಿ ಎಂದು ಹೆಸರಿಸಲಾಗಿರುವ ಅವರ ಮಗ ಆಶಿಶ್ ಮಿಶ್ರಾರನ್ನು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು ಒತ್ತಾಯಿಸಿದ್ದಾರೆ.

“ದೇಶದಾದ್ಯಂತದ ರೈತರು ಅಕ್ಟೋಬರ್ 12 ರಂದು ಲಖಿಂಪುರ್ ಖೇರಿಯನ್ನು ತಲುಪುತ್ತಾರೆ. ಎಲ್ಲಾ ಸಂಘ ಸಂಸ್ಥೆಗಳಿಗೂ ಸಂಸ್ಥೆಗಳು ತಮ್ಮ ನಗರಗಳಲ್ಲಿ ರಾತ್ರಿ 8 ಗಂಟೆಗೆ (ಅಕ್ಟೋಬರ್ 12 ರಂದು) ಕ್ಯಾಂಡಲ್  ಮಾರ್ಚ್ ಕೈಗೊಳ್ಳುವಂತೆ ನಾವು ವಿನಂತಿಸುತ್ತೇವೆ” ಎಂದು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಮೃತಪಟ್ಟ ರೈತರ ಚಿತಾಭಸ್ಮದೊಂದಿಗೆ ರೈತರು ಪ್ರತಿ ರಾಜ್ಯಕ್ಕೆ  ಹೋಗುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು

“ಅಕ್ಟೋಬರ್ 18 ರಂದು ನಾವು ದೇಶಾದ್ಯಂತ ‘ರೈಲ್ ರೋಕೋ’ ನಡೆಸುತ್ತೇವೆ. ಅ.26 ರಂದು ಲಕ್ನೋದಲ್ಲಿ ಬೃಹತ್ ಕಿಸಾನ್ ಮಹಾಪಂಚಾಯತ್ ನಡೆಯಲಿದೆ” ಎಂದು ಘೋಷಿಸಿದ್ದಾರೆ.

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಕಡೆಗಳಿಂದ ಒತ್ತಡ ಹೆಚ್ಚಾದ ಕಾರಣದಿಂದಾಗ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಶನಿವಾರ ಉತ್ತರ ಪ್ರದೇಶ ಪೊಲೀಸರ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಿಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಬಹಿರಂಗ ಬೆದರಿಕೆ ಹಾಕಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು, ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಹೆಲಿಪ್ಯಾಡ್ ಅನ್ನು ಆಕ್ರಮಿಸಿಕೊಂಡಿದ್ದರು. ಈ ವೇಳೆ ಪ್ರತಿಭಟನೆ ನಡೆಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ನಾಲ್ವರ ರೈತರ ಹತ್ಯೆಗೆ ಕಾರಣರಾಗಿದ್ದಾರೆ ಎಂದು ರೈತರು ಆರೋಪಿಸಿದ್ದರು.

ರೈತರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆಶಿಶ್ ಮಿಶ್ರಾ ಮತ್ತು 15 ರಿಂದ 20 ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಗಲಭೆ ಇತ್ಯಾದಿ ಪ್ರಕರಣಗಳನ್ನು ದಾಖಲಿಸಲಾಗಿದೆ.


ಇದನ್ನೂ ಓದಿ: ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....