Homeಚಳವಳಿರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರ ಸಾವಿಗೆ ಪ್ರತಿರೋಧ ವ್ಯಕ್ತಪಡಿಸಲು ರೈತ ಸಂಘಟನೆಗಳು ಅಕ್ಟೋಬರ್ 18 ರಂದು ‘ರೈಲ್ ರೋಕೋ’ ಮತ್ತು ಅಕ್ಟೋಬರ್ 26 ರಂದು ಲಖನೌದಲ್ಲಿ ಮಹಾಪಂಚಾಯತ್ ನಡೆಸಲಿವೆ.

ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು. ಎಫ್‌ಐಆರ್‌ನಲ್ಲಿ ಕೊಲೆ ಆರೋಪಿ ಎಂದು ಹೆಸರಿಸಲಾಗಿರುವ ಅವರ ಮಗ ಆಶಿಶ್ ಮಿಶ್ರಾರನ್ನು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು ಒತ್ತಾಯಿಸಿದ್ದಾರೆ.

“ದೇಶದಾದ್ಯಂತದ ರೈತರು ಅಕ್ಟೋಬರ್ 12 ರಂದು ಲಖಿಂಪುರ್ ಖೇರಿಯನ್ನು ತಲುಪುತ್ತಾರೆ. ಎಲ್ಲಾ ಸಂಘ ಸಂಸ್ಥೆಗಳಿಗೂ ಸಂಸ್ಥೆಗಳು ತಮ್ಮ ನಗರಗಳಲ್ಲಿ ರಾತ್ರಿ 8 ಗಂಟೆಗೆ (ಅಕ್ಟೋಬರ್ 12 ರಂದು) ಕ್ಯಾಂಡಲ್  ಮಾರ್ಚ್ ಕೈಗೊಳ್ಳುವಂತೆ ನಾವು ವಿನಂತಿಸುತ್ತೇವೆ” ಎಂದು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಮೃತಪಟ್ಟ ರೈತರ ಚಿತಾಭಸ್ಮದೊಂದಿಗೆ ರೈತರು ಪ್ರತಿ ರಾಜ್ಯಕ್ಕೆ  ಹೋಗುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು

“ಅಕ್ಟೋಬರ್ 18 ರಂದು ನಾವು ದೇಶಾದ್ಯಂತ ‘ರೈಲ್ ರೋಕೋ’ ನಡೆಸುತ್ತೇವೆ. ಅ.26 ರಂದು ಲಕ್ನೋದಲ್ಲಿ ಬೃಹತ್ ಕಿಸಾನ್ ಮಹಾಪಂಚಾಯತ್ ನಡೆಯಲಿದೆ” ಎಂದು ಘೋಷಿಸಿದ್ದಾರೆ.

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಕಡೆಗಳಿಂದ ಒತ್ತಡ ಹೆಚ್ಚಾದ ಕಾರಣದಿಂದಾಗ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಶನಿವಾರ ಉತ್ತರ ಪ್ರದೇಶ ಪೊಲೀಸರ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಿಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಬಹಿರಂಗ ಬೆದರಿಕೆ ಹಾಕಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು, ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಹೆಲಿಪ್ಯಾಡ್ ಅನ್ನು ಆಕ್ರಮಿಸಿಕೊಂಡಿದ್ದರು. ಈ ವೇಳೆ ಪ್ರತಿಭಟನೆ ನಡೆಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ನಾಲ್ವರ ರೈತರ ಹತ್ಯೆಗೆ ಕಾರಣರಾಗಿದ್ದಾರೆ ಎಂದು ರೈತರು ಆರೋಪಿಸಿದ್ದರು.

ರೈತರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆಶಿಶ್ ಮಿಶ್ರಾ ಮತ್ತು 15 ರಿಂದ 20 ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಗಲಭೆ ಇತ್ಯಾದಿ ಪ್ರಕರಣಗಳನ್ನು ದಾಖಲಿಸಲಾಗಿದೆ.


ಇದನ್ನೂ ಓದಿ: ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...