Homeಚಳವಳಿರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರ ಸಾವಿಗೆ ಪ್ರತಿರೋಧ ವ್ಯಕ್ತಪಡಿಸಲು ರೈತ ಸಂಘಟನೆಗಳು ಅಕ್ಟೋಬರ್ 18 ರಂದು ‘ರೈಲ್ ರೋಕೋ’ ಮತ್ತು ಅಕ್ಟೋಬರ್ 26 ರಂದು ಲಖನೌದಲ್ಲಿ ಮಹಾಪಂಚಾಯತ್ ನಡೆಸಲಿವೆ.

ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು. ಎಫ್‌ಐಆರ್‌ನಲ್ಲಿ ಕೊಲೆ ಆರೋಪಿ ಎಂದು ಹೆಸರಿಸಲಾಗಿರುವ ಅವರ ಮಗ ಆಶಿಶ್ ಮಿಶ್ರಾರನ್ನು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು ಒತ್ತಾಯಿಸಿದ್ದಾರೆ.

“ದೇಶದಾದ್ಯಂತದ ರೈತರು ಅಕ್ಟೋಬರ್ 12 ರಂದು ಲಖಿಂಪುರ್ ಖೇರಿಯನ್ನು ತಲುಪುತ್ತಾರೆ. ಎಲ್ಲಾ ಸಂಘ ಸಂಸ್ಥೆಗಳಿಗೂ ಸಂಸ್ಥೆಗಳು ತಮ್ಮ ನಗರಗಳಲ್ಲಿ ರಾತ್ರಿ 8 ಗಂಟೆಗೆ (ಅಕ್ಟೋಬರ್ 12 ರಂದು) ಕ್ಯಾಂಡಲ್  ಮಾರ್ಚ್ ಕೈಗೊಳ್ಳುವಂತೆ ನಾವು ವಿನಂತಿಸುತ್ತೇವೆ” ಎಂದು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಮೃತಪಟ್ಟ ರೈತರ ಚಿತಾಭಸ್ಮದೊಂದಿಗೆ ರೈತರು ಪ್ರತಿ ರಾಜ್ಯಕ್ಕೆ  ಹೋಗುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು

“ಅಕ್ಟೋಬರ್ 18 ರಂದು ನಾವು ದೇಶಾದ್ಯಂತ ‘ರೈಲ್ ರೋಕೋ’ ನಡೆಸುತ್ತೇವೆ. ಅ.26 ರಂದು ಲಕ್ನೋದಲ್ಲಿ ಬೃಹತ್ ಕಿಸಾನ್ ಮಹಾಪಂಚಾಯತ್ ನಡೆಯಲಿದೆ” ಎಂದು ಘೋಷಿಸಿದ್ದಾರೆ.

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಕಡೆಗಳಿಂದ ಒತ್ತಡ ಹೆಚ್ಚಾದ ಕಾರಣದಿಂದಾಗ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಶನಿವಾರ ಉತ್ತರ ಪ್ರದೇಶ ಪೊಲೀಸರ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಿಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಬಹಿರಂಗ ಬೆದರಿಕೆ ಹಾಕಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು, ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಹೆಲಿಪ್ಯಾಡ್ ಅನ್ನು ಆಕ್ರಮಿಸಿಕೊಂಡಿದ್ದರು. ಈ ವೇಳೆ ಪ್ರತಿಭಟನೆ ನಡೆಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ನಾಲ್ವರ ರೈತರ ಹತ್ಯೆಗೆ ಕಾರಣರಾಗಿದ್ದಾರೆ ಎಂದು ರೈತರು ಆರೋಪಿಸಿದ್ದರು.

ರೈತರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆಶಿಶ್ ಮಿಶ್ರಾ ಮತ್ತು 15 ರಿಂದ 20 ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಗಲಭೆ ಇತ್ಯಾದಿ ಪ್ರಕರಣಗಳನ್ನು ದಾಖಲಿಸಲಾಗಿದೆ.


ಇದನ್ನೂ ಓದಿ: ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...