Homeಚಳವಳಿರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರ ಸಾವಿಗೆ ಪ್ರತಿರೋಧ ವ್ಯಕ್ತಪಡಿಸಲು ರೈತ ಸಂಘಟನೆಗಳು ಅಕ್ಟೋಬರ್ 18 ರಂದು ‘ರೈಲ್ ರೋಕೋ’ ಮತ್ತು ಅಕ್ಟೋಬರ್ 26 ರಂದು ಲಖನೌದಲ್ಲಿ ಮಹಾಪಂಚಾಯತ್ ನಡೆಸಲಿವೆ.

ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು. ಎಫ್‌ಐಆರ್‌ನಲ್ಲಿ ಕೊಲೆ ಆರೋಪಿ ಎಂದು ಹೆಸರಿಸಲಾಗಿರುವ ಅವರ ಮಗ ಆಶಿಶ್ ಮಿಶ್ರಾರನ್ನು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು ಒತ್ತಾಯಿಸಿದ್ದಾರೆ.

“ದೇಶದಾದ್ಯಂತದ ರೈತರು ಅಕ್ಟೋಬರ್ 12 ರಂದು ಲಖಿಂಪುರ್ ಖೇರಿಯನ್ನು ತಲುಪುತ್ತಾರೆ. ಎಲ್ಲಾ ಸಂಘ ಸಂಸ್ಥೆಗಳಿಗೂ ಸಂಸ್ಥೆಗಳು ತಮ್ಮ ನಗರಗಳಲ್ಲಿ ರಾತ್ರಿ 8 ಗಂಟೆಗೆ (ಅಕ್ಟೋಬರ್ 12 ರಂದು) ಕ್ಯಾಂಡಲ್  ಮಾರ್ಚ್ ಕೈಗೊಳ್ಳುವಂತೆ ನಾವು ವಿನಂತಿಸುತ್ತೇವೆ” ಎಂದು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಮೃತಪಟ್ಟ ರೈತರ ಚಿತಾಭಸ್ಮದೊಂದಿಗೆ ರೈತರು ಪ್ರತಿ ರಾಜ್ಯಕ್ಕೆ  ಹೋಗುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು

“ಅಕ್ಟೋಬರ್ 18 ರಂದು ನಾವು ದೇಶಾದ್ಯಂತ ‘ರೈಲ್ ರೋಕೋ’ ನಡೆಸುತ್ತೇವೆ. ಅ.26 ರಂದು ಲಕ್ನೋದಲ್ಲಿ ಬೃಹತ್ ಕಿಸಾನ್ ಮಹಾಪಂಚಾಯತ್ ನಡೆಯಲಿದೆ” ಎಂದು ಘೋಷಿಸಿದ್ದಾರೆ.

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಕಡೆಗಳಿಂದ ಒತ್ತಡ ಹೆಚ್ಚಾದ ಕಾರಣದಿಂದಾಗ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಶನಿವಾರ ಉತ್ತರ ಪ್ರದೇಶ ಪೊಲೀಸರ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಿಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಬಹಿರಂಗ ಬೆದರಿಕೆ ಹಾಕಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು, ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಹೆಲಿಪ್ಯಾಡ್ ಅನ್ನು ಆಕ್ರಮಿಸಿಕೊಂಡಿದ್ದರು. ಈ ವೇಳೆ ಪ್ರತಿಭಟನೆ ನಡೆಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ನಾಲ್ವರ ರೈತರ ಹತ್ಯೆಗೆ ಕಾರಣರಾಗಿದ್ದಾರೆ ಎಂದು ರೈತರು ಆರೋಪಿಸಿದ್ದರು.

ರೈತರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆಶಿಶ್ ಮಿಶ್ರಾ ಮತ್ತು 15 ರಿಂದ 20 ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಗಲಭೆ ಇತ್ಯಾದಿ ಪ್ರಕರಣಗಳನ್ನು ದಾಖಲಿಸಲಾಗಿದೆ.


ಇದನ್ನೂ ಓದಿ: ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...