ಲಖಿಂಪುರ್ ಖೇರಿ ಹತ್ಯಾಕಾಂಡವನ್ನು ಖಂಡಿಸಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಆಗ್ರಹಿಸಿ ರೈತರು ಸೋಮವಾರ (ಅ.18) ದೇಶಾದ್ಯಂತ ರೈಲ್ ರೋಕೋ ಚಳವಳಿ ನಡೆಸುತ್ತಿದ್ದಾರೆ.
ಕಳೆದ ವರ್ಷದಿಂದ ಒಕ್ಕೂಟ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳ ಒಕ್ಕೂಟ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ), ಸೋಮವಾರ ಆರು ಗಂಟೆಗಳ ಕಾಲ ದೇಶಾದ್ಯಂತ ‘ರೈಲು ರೋಕೋ’ ಆಂದೋಲನಕ್ಕೆ ಕರೆ ನೀಡಿದೆ.
ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭವಾಗಿದ್ದು, ದೇಶಾದ್ಯಂತ ಸಂಜೆ 4 ಗಂಟೆಯವರೆಗೆ ರೈಲ್ ರೋಕೋ ನಡೆಯಲಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕ, ಉತ್ತರಾಖಂಡ, ಜಾರ್ಖಂಡ್ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದಲೇ ಚಳವಳಿ ಆರಂಭವಾಗಿದೆ.
ಇದನ್ನೂ ಓದಿ: ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ
Trains have been blocked in Vijayapura/Bijapur of Karnataka.
Farmers have been demanding suspension of MoS Ajay Mishr Teni because of his threats against farmers which resulted in death of 4 farmers & 1 journalist in Lakhimpur, UP.#आज_रेल_बंद_है pic.twitter.com/kxD94YV9zm
— Tractor2ਟਵਿੱਟਰ (@Tractor2twitr) October 18, 2021
ರೈಲ್ ರೋಕೋ ಶಾಂತಿಯುತವಾಗಿರುವಂತೆ ಮತ್ತು ರೈಲ್ವೆ ಆಸ್ತಿಗೆ ಯಾವುದೇ ರೀತಿಯ ಹಾನಿಯಾಗದಂತೆ ಚಳವಳಿ ಮಾಡಬೇಕು ಎಂದು ಎಸ್ಕೆಎಂ ಮನವಿ ಮಾಡಿದೆ. ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯ ಸಿಗುವವರೆಗೂ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು ಎಸ್ಕೆಎಂ ಎಚ್ಚರಿಕೆ ನೀಡಿತ್ತು.
Approx 160 passenger trains in all across India have been cancelled today.
There are hundreds of goods trains which have been halted too.
Farmers have demanded suspension of MoS Ajay Mishr who has been listed as conspirator in Lakhimpur massacre FIR.#आज_रेल_बंद_है pic.twitter.com/esRWJ6MEZD— Tractor2ਟਵਿੱਟਰ (@Tractor2twitr) October 18, 2021
ರೈತರ ರೈಲ್ ರೋಕೋ ಚಳವಳಿಯಿಂದ ಈಗಾಗಲೇ ಭಾರತದಾದ್ಯಂತ ಸುಮಾರು 160 ಪ್ಯಾಸೆಂಜರ್ ರೈಲುಗಳನ್ನು ಇಂದು ರದ್ದುಗೊಳಿಸಲಾಗಿದೆ. ನೂರಾರು ಗೂಡ್ಸ್ ರೈಲುಗಳು ಸಹ ಸ್ಥಗಿತಗೊಂಡಿವೆ ಎಂದು ತಿಳಿದುಬಂದಿದೆ.
ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರೂ ಹರಿಯಣ ಸರ್ಕಾರ ಪ್ರತಿಭಟನಾ ಸ್ಥಳಗಳಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ ನಿಯೋಜನೆ ಮಾಡಿರುವುದರ ವಿರುದ್ಧ ಆಕ್ಷೇಪ ಕೇಳಿ ಬಂದಿದೆ. ರೈತರ ಪ್ರತಿಭಟನೆ ಶಾಂತಿಯುತವಾಗಿರುತ್ತದೆ, ಆದರೂ ಏಕೆ ಮನೋಹರ್ ಲಾಲ್ ಖಟ್ಟರ್ ಸರ್ಕಾರ ಗೊಂದಲದ ವಾತಾವರಣವನ್ನು ಸೃಷ್ಟಿಸುತ್ತಿದೆ? ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.
“ಅಕ್ಟೋಬರ್ 3ರಂದು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಸಚಿವ ಅಜಯ್ ಮಿಶ್ರಾ ತೇನಿ ಮಗನಾಗಿದ್ದಾರೆ. ಅಜಯ್ ಮಿಶ್ರಾ ಒಕ್ಕೂಟ ಸರ್ಕಾರದಲ್ಲಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವುದರಿಂದ, ಈ ಪ್ರಕರಣದಲ್ಲಿ ನ್ಯಾಯ ಸಿಗುವುದು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು” ಎಂದು ಎಸ್ಕೆಎಂ ತನ್ನ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿತ್ತು.
Farmers have started reaching at railway stations and tracks to block the trains.
SKM had earlier intimated government if Lakhimpur conspirator MoS Ajay Mishr Teni, is not suspended, trains will be blocked.#आज_रेल_बंद_है pic.twitter.com/5lLL92Vx3q— Tractor2ਟਵਿੱਟਰ (@Tractor2twitr) October 18, 2021
’ಸಚಿವ ಅಜಯ್ ಮಿಶ್ರಾ ತೇನಿ ರೌಡಿ ಶೀಟರ್ನಂತೆ ಸಾರ್ವಜನಿಕ ಸಭೆಯಲ್ಲಿ ರೈತರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ. ತಮ್ಮ ಭಾಷಣಗಳಲ್ಲಿ ಹಿಂದೂಗಳು ಮತ್ತು ಸಿಖ್ಖರ ನಡುವೆ ದ್ವೇಷ ಬಿತ್ತಲು ಯತ್ನಿಸಿದ್ದಾರೆ. ಶಾಮತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹತ್ಯೆ ಮಾಡಲು ಅವರ ಕಾರುಗಳನ್ನು ಬಳಸಲಾಗಿದೆ. ಆರೋಪಿಯನ್ನು ರಕ್ಷಿಸಲು ಯತ್ನಿಸಿದ್ದಾರೆ. ಇವರನ್ನು ಮೊದಲೇ ಬಂಧಿಸಬೇಕಿತ್ತು” ಎಂದು ಎಸ್ಕೆಎಂ ಹೇಳಿದೆ.
ಇದನ್ನೂ ಓದಿ: ರೈತ ಹೋರಾಟ: ರಾವಣನ ಬದಲು ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ದಸರಾ ಆಚರಣೆ