Homeಚಳವಳಿಲಖಿಂಪುರ್‌ ಹತ್ಯಾಕಾಂಡ: ಅಜಯ್ ಮಿಶ್ರಾ ಬಂಧನ, ವಜಾಗೆ ಆಗ್ರಹಿಸಿ ರೈತರ ರೈಲ್ ರೋಕೋ ಚಳವಳಿ

ಲಖಿಂಪುರ್‌ ಹತ್ಯಾಕಾಂಡ: ಅಜಯ್ ಮಿಶ್ರಾ ಬಂಧನ, ವಜಾಗೆ ಆಗ್ರಹಿಸಿ ರೈತರ ರೈಲ್ ರೋಕೋ ಚಳವಳಿ

- Advertisement -
- Advertisement -

ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಆಗ್ರಹಿಸಿ ರೈತರು ಸೋಮವಾರ (ಅ.18) ದೇಶಾದ್ಯಂತ ರೈಲ್ ರೋಕೋ ಚಳವಳಿ ನಡೆಸುತ್ತಿದ್ದಾರೆ.

ಕಳೆದ ವರ್ಷದಿಂದ ಒಕ್ಕೂಟ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳ ಒಕ್ಕೂಟ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಸೋಮವಾರ ಆರು ಗಂಟೆಗಳ ಕಾಲ ದೇಶಾದ್ಯಂತ ‘ರೈಲು ರೋಕೋ’ ಆಂದೋಲನಕ್ಕೆ ಕರೆ ನೀಡಿದೆ.

ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭವಾಗಿದ್ದು, ದೇಶಾದ್ಯಂತ ಸಂಜೆ  4 ಗಂಟೆಯವರೆಗೆ ರೈಲ್ ರೋಕೋ ನಡೆಯಲಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕ, ಉತ್ತರಾಖಂಡ, ಜಾರ್ಖಂಡ್‌ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದಲೇ ಚಳವಳಿ ಆರಂಭವಾಗಿದೆ.

ಇದನ್ನೂ ಓದಿ: ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ರೈಲ್ ರೋಕೋ ಶಾಂತಿಯುತವಾಗಿರುವಂತೆ ಮತ್ತು ರೈಲ್ವೆ ಆಸ್ತಿಗೆ ಯಾವುದೇ ರೀತಿಯ ಹಾನಿಯಾಗದಂತೆ  ಚಳವಳಿ ಮಾಡಬೇಕು ಎಂದು ಎಸ್‌ಕೆಎಂ ಮನವಿ ಮಾಡಿದೆ. ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯ ಸಿಗುವವರೆಗೂ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು ಎಸ್‌ಕೆಎಂ ಎಚ್ಚರಿಕೆ ನೀಡಿತ್ತು.

ರೈತರ ರೈಲ್ ರೋಕೋ ಚಳವಳಿಯಿಂದ ಈಗಾಗಲೇ ಭಾರತದಾದ್ಯಂತ ಸುಮಾರು 160 ಪ್ಯಾಸೆಂಜರ್ ರೈಲುಗಳನ್ನು ಇಂದು ರದ್ದುಗೊಳಿಸಲಾಗಿದೆ. ನೂರಾರು ಗೂಡ್ಸ್ ರೈಲುಗಳು ಸಹ ಸ್ಥಗಿತಗೊಂಡಿವೆ ಎಂದು ತಿಳಿದುಬಂದಿದೆ.

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರೂ ಹರಿಯಣ ಸರ್ಕಾರ ಪ್ರತಿಭಟನಾ ಸ್ಥಳಗಳಲ್ಲಿ ರ್‍ಯಾಪಿಡ್ ಆಕ್ಷನ್ ಫೋರ್ಸ್ ನಿಯೋಜನೆ ಮಾಡಿರುವುದರ ವಿರುದ್ಧ ಆಕ್ಷೇಪ ಕೇಳಿ ಬಂದಿದೆ. ರೈತರ ಪ್ರತಿಭಟನೆ ಶಾಂತಿಯುತವಾಗಿರುತ್ತದೆ, ಆದರೂ ಏಕೆ ಮನೋಹರ್‌ ಲಾಲ್ ಖಟ್ಟರ್‌ ಸರ್ಕಾರ ಗೊಂದಲದ ವಾತಾವರಣವನ್ನು ಸೃಷ್ಟಿಸುತ್ತಿದೆ? ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.

“ಅಕ್ಟೋಬರ್ 3ರಂದು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಸಚಿವ ಅಜಯ್ ಮಿಶ್ರಾ ತೇನಿ ಮಗನಾಗಿದ್ದಾರೆ. ಅಜಯ್ ಮಿಶ್ರಾ ಒಕ್ಕೂಟ ಸರ್ಕಾರದಲ್ಲಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವುದರಿಂದ, ಈ ಪ್ರಕರಣದಲ್ಲಿ ನ್ಯಾಯ ಸಿಗುವುದು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು” ಎಂದು ಎಸ್‌ಕೆಎಂ ತನ್ನ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿತ್ತು.

’ಸಚಿವ ಅಜಯ್ ಮಿಶ್ರಾ ತೇನಿ ರೌಡಿ ಶೀಟರ್‌ನಂತೆ ಸಾರ್ವಜನಿಕ ಸಭೆಯಲ್ಲಿ ರೈತರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ. ತಮ್ಮ ಭಾಷಣಗಳಲ್ಲಿ ಹಿಂದೂಗಳು ಮತ್ತು ಸಿಖ್ಖರ ನಡುವೆ ದ್ವೇಷ ಬಿತ್ತಲು ಯತ್ನಿಸಿದ್ದಾರೆ. ಶಾಮತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹತ್ಯೆ ಮಾಡಲು ಅವರ ಕಾರುಗಳನ್ನು ಬಳಸಲಾಗಿದೆ. ಆರೋಪಿಯನ್ನು ರಕ್ಷಿಸಲು ಯತ್ನಿಸಿದ್ದಾರೆ. ಇವರನ್ನು ಮೊದಲೇ ಬಂಧಿಸಬೇಕಿತ್ತು” ಎಂದು ಎಸ್‌ಕೆಎಂ ಹೇಳಿದೆ.


ಇದನ್ನೂ ಓದಿ: ರೈತ ಹೋರಾಟ: ರಾವಣನ ಬದಲು ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ದಸರಾ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...