Homeಚಳವಳಿರೈತರ ಹತ್ಯಾಕಾಂಡ ವಿರೋಧಿಸಿ ಮಹಾರಾಷ್ಟ್ರ ಬಂದ್: ಅಂಗಡಿ ಮುಂಗಟ್ಟು, ಮಾರುಕಟ್ಟೆ ಸಂಪೂರ್ಣ ಬಂದ್

ರೈತರ ಹತ್ಯಾಕಾಂಡ ವಿರೋಧಿಸಿ ಮಹಾರಾಷ್ಟ್ರ ಬಂದ್: ಅಂಗಡಿ ಮುಂಗಟ್ಟು, ಮಾರುಕಟ್ಟೆ ಸಂಪೂರ್ಣ ಬಂದ್

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡ ವಿರೋಧಿಸಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಕರೆ ನೀಡಿದ್ದ ಮಹಾರಾಷ್ಟ್ರ ಬಂದ್ ಹಿನ್ನೆಲೆಯಲ್ಲಿ ಕೆಲವು ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದ ಬಳಿಕ ಮುಂಬೈನಾದ್ಯಂತ ಬಸ್ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಪುಣೆಯ ಎಪಿಎಂಸಿ ಮತ್ತು ನಾಸಿಕ್‌ನ ಈರುಳ್ಳಿ ವ್ಯಾಪಾರ ಮಾರುಕಟ್ಟೆ ಸೇರಿದಂತೆ ರಾಜ್ಯಾದ್ಯಂತ ಹಲವಾರು ಅಂಗಡಿಗಳು ಮತ್ತು ಸಂಸ್ಥೆಗಳು ಒಟ್ಟಾಗಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದವು. ಸುಮಾರು 3 ಗಂಟೆ ಬಳಿಕ ಮೊಬೈಲ್ ರಿಪೇರಿಗಾಗಿ ಕೆಲವು ಸಣ್ಣ ಅಂಗಡಿಗಳು, ಬಟ್ಟೆ ಅಂಗಡಿಗಳು ಮತ್ತು ಸಣ್ಣ ಸಣ್ಣ ಹೋಟೆಲ್‌ಗಳು  ಭಾಗಶಃ ತೆರೆಯಲ್ಪಟ್ಟಿವೆ.

ಧಾರಾವಿ, ಮಂಕುರ್ಡ್, ಶಿವಾಜಿ ನಗರ, ಚಾರ್ಕೋಪ್, ಓಶಿವರಾ, ದಿಯೊನಾರ್ ಮತ್ತು ಇನಾರ್ಬಿಟ್ ಮಾಲ್‌ ಬಳಿ ನಿನ್ನೆ ಮಧ್ಯರಾತ್ರಿಯಿಂದ ಇಂದು ಬೆಳಿಗ್ಗೆವರಗೆ ಎಂಟು ಸರ್ಕಾರಿ ಮತ್ತು ಒಂದು ಗುತ್ತಿಗೆ ಪಡೆದ ಬಸ್ ಸೇರಿ ಒಟ್ಟು 9 ಬಸ್‌ಗಳು ಧ್ವಂಸವಾಗಿವೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಲಿಖಿಂಪುರ್‌: ಪ್ರಧಾನ ಆರೋಪಿ ಆಶಿಶ್‌ ಮಿಶ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ಶಿವಸೇನಾ ಕಾರ್ಯಕರ್ತರು ಮುಂಬೈನಾದ್ಯಂತ ಮತ್ತು ಮಹಾರಾಷ್ಟ್ರದ ಅಹ್ಮದ್ ನಗರ, ಔರಂಗಾಬಾದ್, ಕೊಲ್ಹಾಪುರ, ಸೊಲ್ಲಾಪುರ ಮತ್ತು ನಾಗ್ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

Maharashtra bandh live: 8 BEST buses vandalised, local train services unaffected till now | Hindustan Times

ಎನ್‌ಸಿಪಿ ನಾಯಕ ಮತ್ತು ಸಚಿವ ನವಾಬ್ ಮಲಿಕ್ ಮುಂಬೈನಲ್ಲಿ ಪಕ್ಷದ ನಾಯಕರ ಜೊತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ಕಾರ್ಯಕರ್ತರಿಗೆ ಕಲ್ಲು ತೂರಾಟ ಮತ್ತು ಹಿಂಸಾಚಾರದಲ್ಲಿ ತೊಡಗಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

PC: indianexpress

ಇನ್ನು ಮಹಾರಾಷ್ಟ್ರ ಬಂದ್ 100% ಯಶಸ್ವಿಯಾಗಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ. ಜನರು ತಾವಾಗಿಯೇ ಬಮದು ಹೃದಯಪೂರ್ವಕವಾಗಿ ಬಂದ್‌ನಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ. ಕಲ್ಲು ತೂರಾಟ, ಹಿಂಸಾಚಾರದ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸಿರುವ ಅವರು, “ಪ್ರಪಂಚದಾದ್ಯಂತ ಪ್ರತಿಭಟನೆಯ ಸಮಯದಲ್ಲಿ ಇಂತಹ ಸಣ್ಣ ಘಟನೆಗಳು ನಡೆಯುತ್ತವೆ” ಎಂದಿದ್ದಾರೆ.

ಬಿಜೆಪಿ ನಾಯಕ, ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್, ಹೈಕೋರ್ಟ್‌ಗೆ ಬಂದ್ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ. “ಈ ಹಿಂದೆ ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್ ಇಂತಹ ಬಂದ್‌ಗಳನ್ನು ನಿಷೇಧಿಸಿ, ಶಿವಸೇನೆಗೆ ದಂಡ ವಿಧಿಸಿತ್ತು. ಈಗಲೂ ಹೈಕೋರ್ಟ್ ಬಂದ್ ಬಗ್ಗೆ ಗಮನ ಹರಿಸಬೇಕು” ಎಂದಿದ್ದಾರೆ.

ಅಕ್ಟೋಬರ್‌ 03 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಕಾರು ಹರಿಸಿ 4 ರೈತರನ್ನು ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಶಿಶ್ ಮಿಶ್ರಾರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ರಾಜಕಾರಣಿ ಎಂದರೆ ಫಾರ್ಚೂನರ್‌ ಕಾರನ್ನು ಯಾರ ಮೇಲಾದರೂ ಹರಿಸುವುದಲ್ಲ: ಯುಪಿ ಬಿಜೆಪಿ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...