Homeಮುಖಪುಟಲಖಿಂಪುರ್‌ ಕೇರಿ ರೈತರ ಹತ್ಯಾಕಾಂಡ: ಸಚಿವರನ್ನು ವಜಾಗೊಳಿಸುವಂತೆ ಸಂಸತ್ತಿನಲ್ಲಿ ವಿಪಕ್ಷಗಳ ಪ್ರತಿಭಟನೆ

ಲಖಿಂಪುರ್‌ ಕೇರಿ ರೈತರ ಹತ್ಯಾಕಾಂಡ: ಸಚಿವರನ್ನು ವಜಾಗೊಳಿಸುವಂತೆ ಸಂಸತ್ತಿನಲ್ಲಿ ವಿಪಕ್ಷಗಳ ಪ್ರತಿಭಟನೆ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಕೇರಿ ರೈತರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸತತ ಮೂರನೇ ದಿನವಾದ ಇಂದು ಕೂಡ ಸಂಸತ್ತಿನಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು.

ಪ್ರತಿಪಕ್ಷಗಳ ಸಂಸದರು ಉಭಯ ಸದನಗಳಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಸದನವನ್ನು ಮುಂದೂಡುವಂತೆ ಒತ್ತಾಯಿಸಿದರು. ಲೋಕಸಭೆಯಲ್ಲಿ ಸದನದ ಮಧ್ಯಭಾಗದಲ್ಲಿ ಜಮಾಯಿಸಿದ್ದ ಸಂಸದರು ಭಿತ್ತಿ ಫಲಕಗಳನ್ನು ಹಿಡಿದು ಸಚಿವರನ್ನು ವಜಾಗೊಳಿಸುವಂತೆ ಘೋಷಣೆಗಳನ್ನು ಕೂಗಿದ್ದಾರೆ.

ರಾಜ್ಯಸಭೆಯು ಈ ದಿನದ ಕಲಾಪ ಆರಂಭವಾದ ಬೆನ್ನಲ್ಲೇ, ಸರ್ಕಾರ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಗದ್ದಲ ಏರ್ಪಟ್ಟ ಕಾರಣ ರಾಜ್ಯಸಭೆಯನ್ನು ಸೋಮವಾರದವರೆಗೆ ಮುಂದೂಡಲಾಗಿದೆ.

ಇದನ್ನೂ ಓದಿ: ಬಾಬರಿ ಧ್ವಂಸ ಮಾಡಿದ ತಮ್ಮ ಕಾರ್ಯಕರ್ತರ ಬಗ್ಗೆ ಶಿವಸೇನೆ ಹೆಮ್ಮೆಪಟ್ಟಿದೆ: ಸಂಜಯ್ ರಾವತ್‌

ಸದನವನ್ನು ಸೋಮವಾರದವರೆಗೆ ಮುಂದೂಡಿದ ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು, “ಪಕ್ಷಗಳು ಪರಿಹಾರವನ್ನು ಕಂಡುಕೊಳ್ಳಲು ಮತ್ತು ಸದನದ ಕಲಾಪದಲ್ಲಿ ಶಾಂತಿ ಮತ್ತು ಸುಗಮ ಕಾರ್ಯನಿರ್ವಹಣೆಯನ್ನು ಕಾಪಾಡಿಕೊಳ್ಳಲು ನಿರ್ಧರಿಸಿವೆ” ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ತೇನಿ ಅವರ ಮಗ ಆಶಿಶ್ ಮಿಶ್ರಾ ತೇನಿ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಹತ್ಯಾಕಾಂಡ ನಡೆಸಿರುವ ಆರೋಪದಲ್ಲಿ ಕಳೆದ ಅಕ್ಟೋಬರ್‌ನಿಂದ ಜೈಲಿನಲ್ಲಿದ್ದಾರೆ. ಹೀಗಾಗಿ ಇವರನ್ನು ವಜಾಗೊಳಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ.

ಇತ್ತೀಚಿನ ತನಿಖಾ ವರದಿಯಲ್ಲಿ ಸಚಿವರ ಮಗ ಚಲಾಯಿಸುತ್ತಿದ್ದ SUV ರೈತರ ಮೇಲೆ ಹರಿದದ್ದು “ಯೋಜಿತ ಪಿತೂರಿ” ಎಂದು ಹೇಳಿದೆ. “ಕೊಲೆ ಮಾಡುವ ಉದ್ದೇಶದಿಂದ” ರೈತರ ಮೇಲೆ ಕಾರು ಹರಿಸಲಾಗಿದೆ. ಇದು “ನಿರ್ಲಕ್ಷ್ಯದಿಂದ ಉಂಟಾದ ಸಾವುಗಳಲ್ಲ” ಎಂದು ವರದಿ ಬಹಿರಂಗಪಡಿಸಿದೆ.


ಇದನ್ನೂ ಓದಿ: ಲಖಿಂಪುರ್‌‌ ಹತ್ಯಾಕಾಂಡ: ಜೈಲಿನಲ್ಲಿರುವ ಮಗನ ಬಗ್ಗೆ ಕೇಳಿದ ಪತ್ರಕರ್ತರನ್ನು ನಿಂದಿಸಿದ ಸಚಿವ ಅಜಯ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...