Homeಮುಖಪುಟಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಆರೋಪಿಗೆ ಜಾಮೀನು: ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಆರೋಪಿಗೆ ಜಾಮೀನು: ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆದ ಲಖಿಂಪುರ್‌ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯ ತಂದೆ ಕೇಂದ್ರ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿಯ ರಾಜೀನಾಮೆ ಪಡೆಯದ ಒಕ್ಕೂಟ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಆರೋಪಿ ಆಶಿಶ್ ಮಿಶ್ರಾ ತೇನಿಗೆ ಜಾಮೀನು ನೀಡಿರುವುದನ್ನು ವಿರೋಧಿಸಿ ಕಿಡಿ ಕಾರಿದ್ದಾರೆ.  “ಇಂದು ಆ ವ್ಯಕ್ತಿಗೆ ಜಾಮೀನು ಸಿಕ್ಕಿದೆ. ನಿಮ್ಮ ಮೇಲೆ ಹಲ್ಲೆ ಮಾಡಿದ ವ್ಯಕ್ತಿ ಶೀಘ್ರದಲ್ಲೇ ನಿಮ್ಮ ಮುಂದೆಯೇ ಬಹಿರಂಗವಾಗಿ ತಿರುಗುತ್ತಾರೆ. ಇಲ್ಲಿ, ಸರ್ಕಾರ ಯಾರನ್ನು ಉಳಿಸಿತು..? ರೈತರನ್ನು ಉಳಿಸಿತು..? ರೈತರನ್ನು ಕೊಲ್ಲುವಾಗ ಪೊಲೀಸರು ಮತ್ತು ಆಡಳಿತ ಎಲ್ಲಿತ್ತು..? ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿದಿ ಹತ್ಯೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಗುರುವಾರ (ಫೆ.10) ಜಾಮೀನು ನೀಡಿದೆ.

ಇದನ್ನೂ ಓದಿ: ರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ ಅಂಶಗಳು ಇಲ್ಲಿವೆ

ರಾಂಪುರ ಜಿಲ್ಲೆಯ ಬಿಲಾಸ್‌ಪುರ ನಗರದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿರುವ ಪ್ರಿಯಾಂಕಾ ಗಾಂಧಿ, “ಪ್ರಧಾನಿಯೊಬ್ಬರು ರಾಷ್ಟ್ರದ ಬಗ್ಗೆ ನೈತಿಕ ಜವಾಬ್ದಾರಿಯನ್ನು ಹೊಂದಿದ್ದಾರೆ. ಈ ಜವಾಬ್ದಾರಿಯನ್ನು ಪೂರೈಸುವುದು ಅವರ ಧರ್ಮವಾಗಿದೆ. ಈ ಧರ್ಮವು ಪ್ರತಿಯೊಂದು ಧರ್ಮಕ್ಕಿಂತ ಮೇಲಿದೆ. ಯಾವುದೇ ರಾಜಕಾರಣಿ, ಪ್ರಧಾನಿ ಅಥವಾ ಸರ್ಕಾರ ಈ ಜವಾಬ್ದಾರಿಯನ್ನು ಪೂರೈಸಲು ವಿಫಲವಾದರೆ ಅವುಗಳನ್ನು ನಿರ್ಲಕ್ಷಿಸಬೇಕು” ಎಂದಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಘಟನೆ ಬಳಿಕ ನಡೆದ ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತ, ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಓರ್ವ ಚಾಲಕ ಬಲಿಯಾಗಿದ್ದರು.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.

ರ್‍ಯಾಲಿಯಲ್ಲಿ ಆರೋಪಿಗೆ ಜಾಮೀನು ಸಿಕ್ಕಿರುವ ಬಗ್ಗೆ ಖಂಡಿಸಿರು ಅವರು, ಲಖಿಂಪುರ್‌ ಖೇರಿ ಘಟನೆ ನಡೆದಾಗ ಪೊಲೀಸರು ಎಲ್ಲೂ ಕಾಣಲಿಲ್ಲ. ಆದರೆ, ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಯತ್ನಿಸಿದ ಕಾಂಗ್ರೆಸ್ ಸದಸ್ಯರನ್ನು ತಡೆಯಲು ಪೊಲೀಸರು ಹಾಜರಿದ್ದರು ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯುತ್ತಿದ್ದು, ನಾಲ್ಕನೇ ಹಂತದಲ್ಲಿ ಫೆಬ್ರವರಿ 23 ರಂದು ಲಖಿಂಪುರ್ ಖೇರಿಯಲ್ಲಿ ಮತದಾನ ನಡೆಯಲಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...