Homeಮುಖಪುಟಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಆರೋಪಿಗೆ ಜಾಮೀನು: ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಆರೋಪಿಗೆ ಜಾಮೀನು: ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆದ ಲಖಿಂಪುರ್‌ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯ ತಂದೆ ಕೇಂದ್ರ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿಯ ರಾಜೀನಾಮೆ ಪಡೆಯದ ಒಕ್ಕೂಟ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಆರೋಪಿ ಆಶಿಶ್ ಮಿಶ್ರಾ ತೇನಿಗೆ ಜಾಮೀನು ನೀಡಿರುವುದನ್ನು ವಿರೋಧಿಸಿ ಕಿಡಿ ಕಾರಿದ್ದಾರೆ.  “ಇಂದು ಆ ವ್ಯಕ್ತಿಗೆ ಜಾಮೀನು ಸಿಕ್ಕಿದೆ. ನಿಮ್ಮ ಮೇಲೆ ಹಲ್ಲೆ ಮಾಡಿದ ವ್ಯಕ್ತಿ ಶೀಘ್ರದಲ್ಲೇ ನಿಮ್ಮ ಮುಂದೆಯೇ ಬಹಿರಂಗವಾಗಿ ತಿರುಗುತ್ತಾರೆ. ಇಲ್ಲಿ, ಸರ್ಕಾರ ಯಾರನ್ನು ಉಳಿಸಿತು..? ರೈತರನ್ನು ಉಳಿಸಿತು..? ರೈತರನ್ನು ಕೊಲ್ಲುವಾಗ ಪೊಲೀಸರು ಮತ್ತು ಆಡಳಿತ ಎಲ್ಲಿತ್ತು..? ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿದಿ ಹತ್ಯೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಗುರುವಾರ (ಫೆ.10) ಜಾಮೀನು ನೀಡಿದೆ.

ಇದನ್ನೂ ಓದಿ: ರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ ಅಂಶಗಳು ಇಲ್ಲಿವೆ

ರಾಂಪುರ ಜಿಲ್ಲೆಯ ಬಿಲಾಸ್‌ಪುರ ನಗರದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿರುವ ಪ್ರಿಯಾಂಕಾ ಗಾಂಧಿ, “ಪ್ರಧಾನಿಯೊಬ್ಬರು ರಾಷ್ಟ್ರದ ಬಗ್ಗೆ ನೈತಿಕ ಜವಾಬ್ದಾರಿಯನ್ನು ಹೊಂದಿದ್ದಾರೆ. ಈ ಜವಾಬ್ದಾರಿಯನ್ನು ಪೂರೈಸುವುದು ಅವರ ಧರ್ಮವಾಗಿದೆ. ಈ ಧರ್ಮವು ಪ್ರತಿಯೊಂದು ಧರ್ಮಕ್ಕಿಂತ ಮೇಲಿದೆ. ಯಾವುದೇ ರಾಜಕಾರಣಿ, ಪ್ರಧಾನಿ ಅಥವಾ ಸರ್ಕಾರ ಈ ಜವಾಬ್ದಾರಿಯನ್ನು ಪೂರೈಸಲು ವಿಫಲವಾದರೆ ಅವುಗಳನ್ನು ನಿರ್ಲಕ್ಷಿಸಬೇಕು” ಎಂದಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಘಟನೆ ಬಳಿಕ ನಡೆದ ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತ, ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಓರ್ವ ಚಾಲಕ ಬಲಿಯಾಗಿದ್ದರು.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.

ರ್‍ಯಾಲಿಯಲ್ಲಿ ಆರೋಪಿಗೆ ಜಾಮೀನು ಸಿಕ್ಕಿರುವ ಬಗ್ಗೆ ಖಂಡಿಸಿರು ಅವರು, ಲಖಿಂಪುರ್‌ ಖೇರಿ ಘಟನೆ ನಡೆದಾಗ ಪೊಲೀಸರು ಎಲ್ಲೂ ಕಾಣಲಿಲ್ಲ. ಆದರೆ, ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಯತ್ನಿಸಿದ ಕಾಂಗ್ರೆಸ್ ಸದಸ್ಯರನ್ನು ತಡೆಯಲು ಪೊಲೀಸರು ಹಾಜರಿದ್ದರು ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯುತ್ತಿದ್ದು, ನಾಲ್ಕನೇ ಹಂತದಲ್ಲಿ ಫೆಬ್ರವರಿ 23 ರಂದು ಲಖಿಂಪುರ್ ಖೇರಿಯಲ್ಲಿ ಮತದಾನ ನಡೆಯಲಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...