Homeಮುಖಪುಟಲಖಿಂಪುರ್‌ ಖೇರಿ ಹತ್ಯಾಕಾಂಡ: ಸಚಿವರ ವಜಾ, ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಎಸ್‌ಕೆಎಂ ಸಜ್ಜು

ಲಖಿಂಪುರ್‌ ಖೇರಿ ಹತ್ಯಾಕಾಂಡ: ಸಚಿವರ ವಜಾ, ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಎಸ್‌ಕೆಎಂ ಸಜ್ಜು

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ತೆನಿ ತಂದೆ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟದಿಂದ ವಜಾಗೊಳಿಸಬೇಕು ಮತ್ತ ಬಂಧಿಸಬೇಕು ಎಂದು ಆಗ್ರಹಿಸಿ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಗೆ ಕರೆ ನೀಡಿದೆ.

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಒಕ್ಕೂಟ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆದ ರೈತರ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘಟನೆಗಳ ಒಕ್ಕೂಟ.

ಕಳೆದ ವರ್ಷ ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಮಾಲೀಕತ್ವದ ಎಸ್‌ಯುವಿ ಹರಿದು ನಾಲ್ವರು ರೈತರು ಮತ್ತು ಪತ್ರಕರ್ತ ಸಾವನ್ನಪ್ಪಿದರು. ನಂತರದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಕಾರು ಚಾಲಕ ಮೃತಪಟ್ಟಿದ್ದರು. ಮೇಲೆ ಅಕ್ಟೋಬರ್ 3 ರಂದು ಕಾರು ಹರಿಸಿ ರೈತರನ್ನು ಹತ್ಯೆ ಮಾಡಲಾಗಿತ್ತು. ಹಿಂಸಾಚಾರದಲ್ಲಿ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಪ್ರಮುಖ ಆರೋಪಿ. ಈತ ಅಕ್ಟೋಬರ್ 9, 2021 ರಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್‌ ಗನ್‌ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ

“ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟದಿಂದ ಕೈ ಬಿಡಬೇಕು ಎಂಬ ನಮ್ಮ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಳ್ಳದಿದ್ದಲ್ಲಿ ಜನವರಿ 21 ರಿಂದ ಲಖಿಂಪುರ ಖೇರಿಯಲ್ಲಿ ರೈತರ ಹತ್ಯೆಯಾದ ಸ್ಥಳದಲ್ಲಿಯೇ ಪ್ರತಿಭಟನೆ ಆರಂಭಿಸುತ್ತೇವೆ” ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ರೈತ ಸಂಘಗಳ ಸಭೆಯ ಬಳಿಕ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದ “ನಿರ್ಲಜ್ಜ ಸಂವೇದನಾಶೀಲತೆ” ಮತ್ತು ತೆನಿಯನ್ನು ತೆಗೆದುಹಾಕುವಲ್ಲಿ ವಿಫಲವಾದ ಸರ್ಕಾರದ ವಿರುದ್ಧ ಲಖಿಂಪುರ ಖೇರಿಯಲ್ಲಿ ಶಾಶ್ವತ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರವು ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸದೆ ಇರುವ ಕಾರಣ ಜನವರಿ 31 ರಂದು ರಾಷ್ಟ್ರವ್ಯಾಪಿ “ದ್ರೋಹದ ದಿನ” (Day of Betrayal) ಆಚರಿಸಲು ಎಸ್‌ಕೆಎಂ ಕರೆ ನೀಡಿದೆ.

“ಜನವರಿ 21 ರ ಒಳಗೆ ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ನಾವು ಉತ್ತರ ಪ್ರದೇಶದ ಪ್ರತಿ ಹಳ್ಳಿಗೆ ಭೇಟಿ ನೀಡಿ ಸರ್ಕಾರದ ರೈತ ವಿರೋಧಿ ನೀತಿಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ” ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

“ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕೃಷಿ ಸಂಘಟನೆಗಳ ಬಗ್ಗೆ ತಿಳಿಸಿರುವ ಎಸ್‌ಕೆಎಂ, ಚುನಾವಣೆಯಲ್ಲಿ ಭಾಗವಹಿಸುವ ಅಥವಾ ಯಾವುದೇ ರಾಜಕೀಯ ಪಕ್ಷದ ಭಾಗವಾಗಿರುವ ಯಾವುದೇ ರೈತ ನಾಯಕರು ಈ ಸಂಘದ ಭಾಗವಾಗಿರುವುದಿಲ್ಲ. ಅಗತ್ಯವಿದ್ದಲ್ಲಿ, ಈ ನಿರ್ಧಾರವನ್ನು ಈ ವಿಧಾನಸಭಾ ಚುನಾವಣೆಯ ನಂತರ ಏಪ್ರಿಲ್‌ನಲ್ಲಿ ಪರಿಶೀಲಿಸಲಾಗುವುದು” ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ನನಗಾಗಿ ಜೋರಾಗಿ ಚಪ್ಪಾಳೆ ಹೊಡೆಯಿರಿ ಎಂದು ಕೇಳಿಕೊಂಡ ಬಿಜೆಪಿ ಎಂಪಿ, ನಿರಾಕರಿಸಿದ ರೈತರು: ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...