Homeಮುಖಪುಟಲಖಿಂಪುರ್‌ ಖೇರಿ ಹತ್ಯಾಕಾಂಡ: ಸಚಿವರ ವಜಾ, ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಎಸ್‌ಕೆಎಂ ಸಜ್ಜು

ಲಖಿಂಪುರ್‌ ಖೇರಿ ಹತ್ಯಾಕಾಂಡ: ಸಚಿವರ ವಜಾ, ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಎಸ್‌ಕೆಎಂ ಸಜ್ಜು

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ತೆನಿ ತಂದೆ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟದಿಂದ ವಜಾಗೊಳಿಸಬೇಕು ಮತ್ತ ಬಂಧಿಸಬೇಕು ಎಂದು ಆಗ್ರಹಿಸಿ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಗೆ ಕರೆ ನೀಡಿದೆ.

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಒಕ್ಕೂಟ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆದ ರೈತರ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘಟನೆಗಳ ಒಕ್ಕೂಟ.

ಕಳೆದ ವರ್ಷ ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಮಾಲೀಕತ್ವದ ಎಸ್‌ಯುವಿ ಹರಿದು ನಾಲ್ವರು ರೈತರು ಮತ್ತು ಪತ್ರಕರ್ತ ಸಾವನ್ನಪ್ಪಿದರು. ನಂತರದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಕಾರು ಚಾಲಕ ಮೃತಪಟ್ಟಿದ್ದರು. ಮೇಲೆ ಅಕ್ಟೋಬರ್ 3 ರಂದು ಕಾರು ಹರಿಸಿ ರೈತರನ್ನು ಹತ್ಯೆ ಮಾಡಲಾಗಿತ್ತು. ಹಿಂಸಾಚಾರದಲ್ಲಿ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಪ್ರಮುಖ ಆರೋಪಿ. ಈತ ಅಕ್ಟೋಬರ್ 9, 2021 ರಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್‌ ಗನ್‌ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ

“ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟದಿಂದ ಕೈ ಬಿಡಬೇಕು ಎಂಬ ನಮ್ಮ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಳ್ಳದಿದ್ದಲ್ಲಿ ಜನವರಿ 21 ರಿಂದ ಲಖಿಂಪುರ ಖೇರಿಯಲ್ಲಿ ರೈತರ ಹತ್ಯೆಯಾದ ಸ್ಥಳದಲ್ಲಿಯೇ ಪ್ರತಿಭಟನೆ ಆರಂಭಿಸುತ್ತೇವೆ” ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ರೈತ ಸಂಘಗಳ ಸಭೆಯ ಬಳಿಕ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದ “ನಿರ್ಲಜ್ಜ ಸಂವೇದನಾಶೀಲತೆ” ಮತ್ತು ತೆನಿಯನ್ನು ತೆಗೆದುಹಾಕುವಲ್ಲಿ ವಿಫಲವಾದ ಸರ್ಕಾರದ ವಿರುದ್ಧ ಲಖಿಂಪುರ ಖೇರಿಯಲ್ಲಿ ಶಾಶ್ವತ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರವು ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸದೆ ಇರುವ ಕಾರಣ ಜನವರಿ 31 ರಂದು ರಾಷ್ಟ್ರವ್ಯಾಪಿ “ದ್ರೋಹದ ದಿನ” (Day of Betrayal) ಆಚರಿಸಲು ಎಸ್‌ಕೆಎಂ ಕರೆ ನೀಡಿದೆ.

“ಜನವರಿ 21 ರ ಒಳಗೆ ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ನಾವು ಉತ್ತರ ಪ್ರದೇಶದ ಪ್ರತಿ ಹಳ್ಳಿಗೆ ಭೇಟಿ ನೀಡಿ ಸರ್ಕಾರದ ರೈತ ವಿರೋಧಿ ನೀತಿಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ” ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

“ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕೃಷಿ ಸಂಘಟನೆಗಳ ಬಗ್ಗೆ ತಿಳಿಸಿರುವ ಎಸ್‌ಕೆಎಂ, ಚುನಾವಣೆಯಲ್ಲಿ ಭಾಗವಹಿಸುವ ಅಥವಾ ಯಾವುದೇ ರಾಜಕೀಯ ಪಕ್ಷದ ಭಾಗವಾಗಿರುವ ಯಾವುದೇ ರೈತ ನಾಯಕರು ಈ ಸಂಘದ ಭಾಗವಾಗಿರುವುದಿಲ್ಲ. ಅಗತ್ಯವಿದ್ದಲ್ಲಿ, ಈ ನಿರ್ಧಾರವನ್ನು ಈ ವಿಧಾನಸಭಾ ಚುನಾವಣೆಯ ನಂತರ ಏಪ್ರಿಲ್‌ನಲ್ಲಿ ಪರಿಶೀಲಿಸಲಾಗುವುದು” ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ನನಗಾಗಿ ಜೋರಾಗಿ ಚಪ್ಪಾಳೆ ಹೊಡೆಯಿರಿ ಎಂದು ಕೇಳಿಕೊಂಡ ಬಿಜೆಪಿ ಎಂಪಿ, ನಿರಾಕರಿಸಿದ ರೈತರು: ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...