Homeಚಳವಳಿಲಖಿಂಪುರ್ ಖೇರಿ ಹತ್ಯಾಕಾಂಡ: ಇಂದು ಸಚಿವ ಅಜಯ್ ಮಿಶ್ರಾ ಮಗನ ವಿಚಾರಣೆ, ಮಧ್ಯಾಹ್ನ ಎಸ್‌ಕೆಎಂನಿಂದ ಸುದ್ದಿಗೋಷ್ಠಿ

ಲಖಿಂಪುರ್ ಖೇರಿ ಹತ್ಯಾಕಾಂಡ: ಇಂದು ಸಚಿವ ಅಜಯ್ ಮಿಶ್ರಾ ಮಗನ ವಿಚಾರಣೆ, ಮಧ್ಯಾಹ್ನ ಎಸ್‌ಕೆಎಂನಿಂದ ಸುದ್ದಿಗೋಷ್ಠಿ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಮುಖ ಆರೋಪಿ ಅಜಯ್ ಮಿಶ್ರಾ ತೇನಿ ಅವರ ಮಗ ಆಶಿಶ್ ಮಿಶ್ರಾರನ್ನು ಯುಪಿ ಪೊಲೀಸರು ಇಂದು (ಅ.09) ವಿಚಾರಣೆಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರ ಮನೆಗೆ ಭಾರಿ ಭದ್ರತೆ ನೀಡಲಾಗಿದೆ.

ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ 8 ಜನರು ಮೃತಪಟ್ಟಿದ್ದಾರೆ. 6 ದಿನಗಳಾದರೂ ಪ್ರಕರಣದ ಆರೋಪಿ ಅಶಿಶ್ ಮಿಶ್ರಾರನ್ನು ಬಂಧಿಸಿರದಿದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಶುಕ್ರವಾರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಆಶಿಶ್ ಮೋನು ಮಿಶ್ರಾ ವಿಚಾರಣೆಗೆ ಹಾಜರಾಗಿರಲಿಲ್ಲ.

ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಲುವಕುಶ್ ಮತ್ತು ಆಶಿಶ್ ಪಾಂಡೆ ಎಂಬ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಹತ್ಯಾಕಾಂಡದಲ್ಲಿ ಯುಪಿ ಪೊಲೀಸರು ಆಶಿಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ ಆದರೆ ಇದುವರೆಗೂ ಆತನನ್ನು ಬಂಧಿಸಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಹರಿದ ಎಸ್‌ಯುವಿ ವಾಹನ ತನಗೆ ಸೇರಿದ್ದು ಎಂದು ಒಪ್ಪಿಕೊಂಡಿದ್ದರೂ, ವಾಹನದಲ್ಲಿ ತನ್ನ ಮಗ ಇರಲ್ಲಿಲ್ಲ ಎಂದು ಕೇಂದ್ರ ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೈತರ ಹತ್ಯಾಕಾಂಡ: ಪರಿಹಾರ ನನ್ನ ಮಗನನ್ನು ವಾಪಸ್ ತರುವುದಿಲ್ಲ, ನಮಗೆ ನ್ಯಾಯ ಬೇಕು- ಮೃತರ ತಂದೆ

ಪ್ರಕರಣದಲ್ಲಿ ಸ್ವಯಂ ಪ್ರೇರಿತ ಕೇಸ್‌ ದಾಖಲಿಸಿಕೊಂಡಿರುವ ಸುಪ್ರೀಕೋರ್ಟ್, “ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಕೆಲಸ ಮಾಡಿಲ್ಲ” ಎಂದಿದೆ. “ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ನಾವು ತೃಪ್ತರಾಗಿಲ್ಲ. ಜವಾಬ್ದಾರಿಯುತ ಸರ್ಕಾರ ಹಾಗೂ ಪೊಲೀಸ್‌ ವ್ಯವಸ್ಥೆಯನ್ನು ನಾವು ನಿರೀಕ್ಷಿಸುತ್ತೇವೆ. ಬಂದೂಕನ್ನು ಬಳಸಿ ಕೊಲ್ಲಲಾಗಿದೆ ಎಂಬುದನ್ನು ಒಳಗೊಂಡಂತೆ ಈಗ ಕೇಳಿ ಬಂದಿರುವ ಆರೋಪಗಳು ತೀವ್ರ ಗಂಭೀರವಾಗಿವೆ” ಎಂದು ಸುಪ್ರೀಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಆತಂಕ ವ್ಯಕ್ತಪಡಿಸಿದ್ದಾರೆ.

“ಈ ರೀತಿ ಯಾವ ಸಂದೇಶವನ್ನು ನೀವು ಕಳುಹಿಸುತ್ತಿದ್ದೀರಿ? ಸಾಮಾನ್ಯ ಸಂದರ್ಭಗಳಲ್ಲಿ ಕೂಡ ಪೊಲೀಸರು ತಕ್ಷಣ ಹೋಗಿ ಆರೋಪಿಗಳನ್ನು ಬಂಧಿಸುವುದಿಲ್ಲ. ಇರಬೇಕಾದ ರೀತಿಯಲ್ಲಿ ಕೆಲಸಗಳು ಆಗುತ್ತಿಲ್ಲ. ಇದು ಕೇವಲ ಮಾತಿಗೆ ಸೀಮಿತವಾಗಿದೆ ಹೊರತು ಕ್ರಿಯೆಗಳಲ್ಲಿ ಕಂಡು ಬರುತ್ತಿಲ್ಲ” ಎಂದು ಉತ್ತರ ಪ್ರದೇಶ ಪೊಲೀಸರನ್ನು ಸಿಜೆಐ ತೀಕ್ಷ್ಣವಾಗಿ ಖಂಡಿಸಿದ್ದಾರೆ.

ಇತ್ತ, ಹತ್ಯಾಕಾಂಡ ಮತ್ತು ಮುಂದಿನ ಕ್ರಮಗಳ ಕುರಿತು ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಶನಿವಾರ ಮಧ್ಯಾಹ್ನ ದೆಹಲಿಯ ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾಗೋಷ್ಠಿ ಆಯೋಜಿಸಿದೆ.

ರೈತ ಮುಖಂಡರಾದ ದರ್ಶನ್ ಪಾಲ್, ಹನ್ನಾನ್ ಮೊಲ್ಲಾ, ಹರಪಾಲ್ ಬಿಲಾರಿ, ಜೋಗಿಂದರ್ ಉಗ್ರನ್, ರಾಕೇಶ್ ಟಿಕಾಯತ್‌, ಸುರೇಶ್ ಕೌತ್, ಯೋಗೇಂದ್ರ ಯಾದವ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.


ಇದನ್ನೂ ಓದಿ: ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...