Homeಚಳವಳಿಲಖಿಂಪುರ್ ಖೇರಿ ಹತ್ಯಾಕಾಂಡ: ಇಂದು ಸಚಿವ ಅಜಯ್ ಮಿಶ್ರಾ ಮಗನ ವಿಚಾರಣೆ, ಮಧ್ಯಾಹ್ನ ಎಸ್‌ಕೆಎಂನಿಂದ ಸುದ್ದಿಗೋಷ್ಠಿ

ಲಖಿಂಪುರ್ ಖೇರಿ ಹತ್ಯಾಕಾಂಡ: ಇಂದು ಸಚಿವ ಅಜಯ್ ಮಿಶ್ರಾ ಮಗನ ವಿಚಾರಣೆ, ಮಧ್ಯಾಹ್ನ ಎಸ್‌ಕೆಎಂನಿಂದ ಸುದ್ದಿಗೋಷ್ಠಿ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಮುಖ ಆರೋಪಿ ಅಜಯ್ ಮಿಶ್ರಾ ತೇನಿ ಅವರ ಮಗ ಆಶಿಶ್ ಮಿಶ್ರಾರನ್ನು ಯುಪಿ ಪೊಲೀಸರು ಇಂದು (ಅ.09) ವಿಚಾರಣೆಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರ ಮನೆಗೆ ಭಾರಿ ಭದ್ರತೆ ನೀಡಲಾಗಿದೆ.

ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ 8 ಜನರು ಮೃತಪಟ್ಟಿದ್ದಾರೆ. 6 ದಿನಗಳಾದರೂ ಪ್ರಕರಣದ ಆರೋಪಿ ಅಶಿಶ್ ಮಿಶ್ರಾರನ್ನು ಬಂಧಿಸಿರದಿದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಶುಕ್ರವಾರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಆಶಿಶ್ ಮೋನು ಮಿಶ್ರಾ ವಿಚಾರಣೆಗೆ ಹಾಜರಾಗಿರಲಿಲ್ಲ.

ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಲುವಕುಶ್ ಮತ್ತು ಆಶಿಶ್ ಪಾಂಡೆ ಎಂಬ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಹತ್ಯಾಕಾಂಡದಲ್ಲಿ ಯುಪಿ ಪೊಲೀಸರು ಆಶಿಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ ಆದರೆ ಇದುವರೆಗೂ ಆತನನ್ನು ಬಂಧಿಸಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಹರಿದ ಎಸ್‌ಯುವಿ ವಾಹನ ತನಗೆ ಸೇರಿದ್ದು ಎಂದು ಒಪ್ಪಿಕೊಂಡಿದ್ದರೂ, ವಾಹನದಲ್ಲಿ ತನ್ನ ಮಗ ಇರಲ್ಲಿಲ್ಲ ಎಂದು ಕೇಂದ್ರ ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೈತರ ಹತ್ಯಾಕಾಂಡ: ಪರಿಹಾರ ನನ್ನ ಮಗನನ್ನು ವಾಪಸ್ ತರುವುದಿಲ್ಲ, ನಮಗೆ ನ್ಯಾಯ ಬೇಕು- ಮೃತರ ತಂದೆ

ಪ್ರಕರಣದಲ್ಲಿ ಸ್ವಯಂ ಪ್ರೇರಿತ ಕೇಸ್‌ ದಾಖಲಿಸಿಕೊಂಡಿರುವ ಸುಪ್ರೀಕೋರ್ಟ್, “ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಕೆಲಸ ಮಾಡಿಲ್ಲ” ಎಂದಿದೆ. “ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ನಾವು ತೃಪ್ತರಾಗಿಲ್ಲ. ಜವಾಬ್ದಾರಿಯುತ ಸರ್ಕಾರ ಹಾಗೂ ಪೊಲೀಸ್‌ ವ್ಯವಸ್ಥೆಯನ್ನು ನಾವು ನಿರೀಕ್ಷಿಸುತ್ತೇವೆ. ಬಂದೂಕನ್ನು ಬಳಸಿ ಕೊಲ್ಲಲಾಗಿದೆ ಎಂಬುದನ್ನು ಒಳಗೊಂಡಂತೆ ಈಗ ಕೇಳಿ ಬಂದಿರುವ ಆರೋಪಗಳು ತೀವ್ರ ಗಂಭೀರವಾಗಿವೆ” ಎಂದು ಸುಪ್ರೀಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಆತಂಕ ವ್ಯಕ್ತಪಡಿಸಿದ್ದಾರೆ.

“ಈ ರೀತಿ ಯಾವ ಸಂದೇಶವನ್ನು ನೀವು ಕಳುಹಿಸುತ್ತಿದ್ದೀರಿ? ಸಾಮಾನ್ಯ ಸಂದರ್ಭಗಳಲ್ಲಿ ಕೂಡ ಪೊಲೀಸರು ತಕ್ಷಣ ಹೋಗಿ ಆರೋಪಿಗಳನ್ನು ಬಂಧಿಸುವುದಿಲ್ಲ. ಇರಬೇಕಾದ ರೀತಿಯಲ್ಲಿ ಕೆಲಸಗಳು ಆಗುತ್ತಿಲ್ಲ. ಇದು ಕೇವಲ ಮಾತಿಗೆ ಸೀಮಿತವಾಗಿದೆ ಹೊರತು ಕ್ರಿಯೆಗಳಲ್ಲಿ ಕಂಡು ಬರುತ್ತಿಲ್ಲ” ಎಂದು ಉತ್ತರ ಪ್ರದೇಶ ಪೊಲೀಸರನ್ನು ಸಿಜೆಐ ತೀಕ್ಷ್ಣವಾಗಿ ಖಂಡಿಸಿದ್ದಾರೆ.

ಇತ್ತ, ಹತ್ಯಾಕಾಂಡ ಮತ್ತು ಮುಂದಿನ ಕ್ರಮಗಳ ಕುರಿತು ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಶನಿವಾರ ಮಧ್ಯಾಹ್ನ ದೆಹಲಿಯ ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾಗೋಷ್ಠಿ ಆಯೋಜಿಸಿದೆ.

ರೈತ ಮುಖಂಡರಾದ ದರ್ಶನ್ ಪಾಲ್, ಹನ್ನಾನ್ ಮೊಲ್ಲಾ, ಹರಪಾಲ್ ಬಿಲಾರಿ, ಜೋಗಿಂದರ್ ಉಗ್ರನ್, ರಾಕೇಶ್ ಟಿಕಾಯತ್‌, ಸುರೇಶ್ ಕೌತ್, ಯೋಗೇಂದ್ರ ಯಾದವ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.


ಇದನ್ನೂ ಓದಿ: ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...