Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್‌ ಗನ್‌ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್‌ ಗನ್‌ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ

- Advertisement -
- Advertisement -

ಅಕ್ಟೋಬರ್ 3 ರಂದು ಲಖಿಂಪುರ್‌ ಖೇರಿಯಲ್ಲಿ ನಡೆದ ಹತ್ಯಾಕಾಂಡದ ಸಂದರ್ಭದಲ್ಲಿ ಆರೋಪಿ ಅಂಕಿತ್ ದಾಸ್ ಮತ್ತು ಆಶಿಶ್ ಮಿಶ್ರಾ ಅವರ ಪರವಾನಗಿ ಪಡೆದ ಬಂದೂಕುಗಳಿಂದ ಗುಂಡು ಹಾರಿಸಲಾಗಿದೆ ಎಂದು ವಿಧಿ ವಿಜ್ಞಾನ ಪ್ರಯೋಗಾಲಯವು ಮಂಗಳವಾರ (ನ.9) ದೃಢಪಡಿಸಿದೆ.

ಅಕ್ಟೋಬರ್‌ 3 ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಶಾಂತಿಯುತವಾಗಿ ಸಾಗುತ್ತಿದ್ದ ರೈತರ ಮೇಲೆ ಕಾರು ಹರಿಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ದೊಡ್ಡ ತಿರುವು ದೊರೆತಿದೆ.

ಗಲಾಟೆಯ ಸಂದರ್ಭದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಮಗ ಆಶಿಶ್ ಮಿಶ್ರಾ ಮತ್ತು ಅವರ ಸ್ನೇಹಿತ ಅಂಕಿತ್ ದಾಸ್ ಪಿಸ್ತೂಲ್‌ನಿಂದ ಗುಂಡು ಹಾರಿಸಿರುವುದು ವರದಿಯಲ್ಲಿ ದೃಢಪಟ್ಟಿದೆ. ಸದ್ಯ ಇಬ್ಬರೂ ಆರೋಪಿಗಳನ್ನು ಲಖಿಂಪುರ ಖೇರಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ಹತ್ಯಾಕಾಂಡದ ವೇಳೆ ಆಶಿಶ್ ಮಿಶ್ರಾ ಮತ್ತು ಅಂಕಿತ್ ದಾಸ್ ಹಲವು ಸುತ್ತು ಗುಂಡು ಹಾರಿಸಿದ್ದಾರೆ ಎಂದು ರೈತರು ಆರೋಪಿಸಿದ್ದರು. ಬಳಿಕ ಲಖಿಂಪುರ ಪೊಲೀಸರು ಆಶಿಶ್ ಮಿಶ್ರಾ ಮತ್ತು ಅಂಕಿತ್ ಮಿಶ್ರಾ ಅವರ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರು. ಅಕ್ಟೋಬರ್ 15ರಂದು ಎಲ್ಲಾ ಬಂದೂಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿತ್ತು.

ತನಿಖೆಗೆ ಕಳುಹಿಸಲಾದ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ವರದಿಗಳು ಬರಲಾರಂಭಿಸಿವೆ. ಅದರ ಆಧಾರದ ಮೇಲೆ ಮುಂದಿನ ತನಿಖೆ ನಡೆಸಲಾಗುವುದು ಎಂದು ಎಎಸ್ಪಿ ಅರುಣ್ ಕುಮಾರ್ ಸಿಂಗ್ ಹೇಳಿದ್ದಾರೆ.

ಸೋಮವಾರ (ನ.8) ಈ ವಿಷಯದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಲಖಿಂಪುರ ಖೇರಿ ಹಿಂಸಾಚಾರದ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ ಮೇಲ್ವಿಚಾರಣೆಗೆ ಯುಪಿ ಸರ್ಕಾರ ರಚಿಸಿರುವ ನ್ಯಾಯಾಂಗ ಆಯೋಗವನ್ನು ನಂಬುವುದಿಲ್ಲ ಎಂದು ತೀವ್ರ ಟೀಕೆ ಮಾಡಿತ್ತು. ಎಸ್‌ಐಟಿ ತನಿಖೆಯ ಸ್ಥಿತಿಗತಿ ವರದಿ ಬಗ್ಗೆಯೂ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತನಿಖೆಯಲ್ಲಿ ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತತೆಗಾಗಿ ಬೇರೆ ರಾಜ್ಯದ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ಮೇಲ್ವಿಚಾರಣೆ ನಡೆಸಬೇಕು ಎಂದು ಹೇಳಿ ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 12 ಕ್ಕೆ ಮುಂದೂಡಿದೆ.

ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ರೈತರ ಗುಂಪು, ಯುಪಿಯ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದರು. ಆಗ ಏಕಾಏಕಿ ಅವರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಬಲಿಗರು ಕಾರು ಹರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಆ ನಂತರ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಹತ್ಯೆಯಾಗಿದ್ದರು. ಇದುವರೆಗೆ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಯುಪಿ ಸರ್ಕಾರದ ಬಗ್ಗೆ ಅಸಮಾಧಾನ, ಸ್ವತಂತ್ರ ಮೇಲ್ವಿಚಾರಣೆಗೆ ಸುಪ್ರೀಂ ಒಲವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...