Homeಚಳವಳಿಜೈಲಿನಲ್ಲಿ ಇರಬೇಕಾದವರು ಕಾರ್ಯಕ್ರಮ ಉದ್ಘಾಟಿಸುತ್ತಿದ್ದಾರೆ: ಯೋಗೇಂದ್ರ ಯಾದವ್

ಜೈಲಿನಲ್ಲಿ ಇರಬೇಕಾದವರು ಕಾರ್ಯಕ್ರಮ ಉದ್ಘಾಟಿಸುತ್ತಿದ್ದಾರೆ: ಯೋಗೇಂದ್ರ ಯಾದವ್

- Advertisement -
- Advertisement -

ಲಖಿಂಪುರ್‌ ಖೇರಿ ಹತ್ಯಾಕಾಂಡದಲ್ಲಿ ಭಾಗಿಯಾಗಿದ್ದಾರೆ ಎಂದು ವಿವಾದಗಳಲ್ಲಿ ಸಿಲುಕಿರುವ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಇಂದು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಕಾರಾಗೃಹಗಳ ಕುರಿತಾದ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿಯ 7 ನೇ ರಾಷ್ಟ್ರೀಯ ಸಮ್ಮೇಳನವನ್ನು ಗುರುವಾರ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಉದ್ಘಾಟಿಸಲಿದ್ದಾರೆ.

ಈ ಮೊದಲು ಮಾಧ್ಯಮಗಳಿಗೆ ಕಾರ್ಯಕ್ರಮವನ್ನು ವರದಿ ಮಾಡಲು ಆಹ್ವಾನ ನೀಡಲಾಗಿದ್ದು, ವಿವಾದದ ಬಳಿಕ ಆಹ್ವಾನಗಳನ್ನು ವಾಪಸ್ ಪಡೆಯಲಾಗಿದೆ. ಸದ್ಯ ಮಾಧ್ಯಮಗಳಿಗೆ ಪ್ರವೇಶ ನಿರಾಕರಿಸಲಾಗಿದೆ. ಪ್ರವೇಶದ್ವಾರದ ಬಳಿಯೇ ಸುದ್ದಿಗಾರರನ್ನು ತಡೆಹಿಡಿಯಲಾಗಿದೆ.

ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ಕಾರ್ಯಕ್ರಮ ಉದ್ಘಾಟನೆಗೆ ಆಕ್ಷೇಪ ವ್ಯಕ್ತಪಡಿಸಿರುವ ಸಾಮಾಜಿಕ ಹೋರಾಟಗಾರರಾದ ಯೋಗೇಂದ್ರ ಯಾದವ್, ಇದು ಹೊಸ ಇಂಡಿಯಾ ಎಂದು ವ್ಯಂಗ್ಯವಾಡಿದ್ದಾರೆ.

“ಜೈಲಿನಲ್ಲಿ ಇರಬೇಕಾದ ವ್ಯಕ್ತಿ ಜೈಲಿನಲ್ಲಿಯೇ ಅಧಿಕೃತ ಸಮ್ಮೇಳನವನ್ನು ಉದ್ಘಾಟಿಸುತ್ತಿದ್ದಾರೆ!
ಹೊಸ ಇಂಡಿಯಾ !” ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದು ಟ್ವೀಟ್ ಮಾಡಿ, “ರಾಜಕೀಯವು ರಕ್ತ ಕುಡಿಯುವ ಚಟವಾಗಿ ಬದಲಾಗಿದೆ, ಇಲ್ಲದಿದ್ದರೆ ದೇಶದಲ್ಲಿ ಎಲ್ಲವೂ ಚೆನ್ನಾಗಿರುತ್ತದೆ” ಎಂದಿದ್ದಾರೆ.

ಕೊಲೆಗಾರ ಮತ್ತು ಮಂತ್ರಿಗೆ ಮುಕ್ತವಾಗಿ ತಿರುಗಾಡಲು ಅವಕಾಶ ನೀಡಲಾಗಿದೆ. ಸಾಂತ್ವನ ನೀಡಿದವರನ್ನು ಬಂಧನದಲ್ಲಿಡಲಾಯಿತು ಎಂದು ಆಪ್ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಕಿಡಿಕಾರಿದ್ದಾರೆ.

ಘಟನೆ ನಡೆದು ನಾಲ್ಕು ದಿನಗಳಾದರೂ ಆರೋಪಿಗಳ ಬಂಧನವಾಗದಕ್ಕೆ ರೈತ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. “ಲಖಿಂಪುರ್ ಖೇರಿ ಘಟನೆ ನಡೆದು 100 ಗಂಟೆಗೂ ಹೆಚ್ಚು ಸಮಯ ಕಳೆದಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಒಂದು ಮಾತನ್ನಾದರೂ ಆಡಿದ್ದಾರೆಯೇ? ರೈತರ ವಿರುದ್ಧ ಅಪರಾಧ ಮಾಡುವವರಿಗೆ ಅಧಿಕಾರದ ಸಂಪೂರ್ಣ ರಕ್ಷಣೆ ಇದೆ ಎಂಬುದು ಇದರಿಂದ ಸ್ಪಷ್ಟಪಡಿಸುತ್ತದೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಮುಖವಾಣಿ ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: 100 ಗಂಟೆಯಾದರೂ ಆರೋಪಿಗಳ ಬಂಧನವಿಲ್ಲ – ರೈತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...