Homeಚಳವಳಿಲಖಿಂಪುರ್ ಖೇರಿ: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ, 50ಕ್ಕೂ ಹೆಚ್ಚು ರೈತರಿಗೆ SIT ಸಮನ್ಸ್

ಲಖಿಂಪುರ್ ಖೇರಿ: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ, 50ಕ್ಕೂ ಹೆಚ್ಚು ರೈತರಿಗೆ SIT ಸಮನ್ಸ್

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (SIT) ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸ್ಥಳೀಯ ರೈತರ ವಿಚಾರಣೆಯನ್ನು ಆರಂಭಿಸಿದೆ.

ಅಕ್ಟೋಬರ್ 3 ರಂದು ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ನಡೆದ ಹತ್ಯಾಕಾಂಡದ ಬಳಿಕ ನಡೆದ ಹಿಂಸಾಚಾರದ ವೇಳೆ ಮೂವರು ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ್ದರು. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಹೀಗಾಗಿ 50 ಕ್ಕೂ ಹೆಚ್ಚು ರೈತರಿಗೆ ವಿಶೇಷ ತನಿಖಾ ತಂಡವು (SIT) ಸಮನ್ಸ್ ನೀಡಿದ್ದು, ವಿಚಾರಣೆ ಕರೆಸಿಕೊಂಡಿದೆ.

ಬಿಜೆಪಿ ಕಾರ್ಯಕರ್ತರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಹದಿನೈದು ರೈತರು ಸೋಮವಾರ ಎಸ್‌ಐಟಿ ಮುಂದೆ ಹಾಜರಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಅಡಿಯಲ್ಲಿ ಅವರಿಗೆ ನೋಟಿಸ್ ನೀಡಲಾಗಿತ್ತು.

ಇದನ್ನೂ ಓದಿ: ಲಿಖಿಂಪುರ್‌: 2 ನೇ FIR ನಲ್ಲಿ ರೈತರ ಮೇಲೆಯೇ ಆರೋಪ; ರೈತರ ಸಾವಿನ ಬಗ್ಗೆ ಉಲ್ಲೇಖವಿಲ್ಲ!

ಎಸ್‌ಐಟಿ ಅಧಿಕಾರಿಯೊಬ್ಬರು, “ನಾವು ಎರಡು ಎಫ್‌ಐಆರ್‌ಗಳನ್ನೂ ತನಿಖೆ ಮಾಡುತ್ತಿದ್ದೇವೆ. ಎರಡನೇ ಎಫ್‌ಐಆರ್‌ಗೆ ಸಂಬಂಧಿಸಿದಂತೆ ರೈತರನ್ನು ವಿಚಾರಣೆಗೆ ಕರೆಸಲಾಗಿದೆ” ಎಂದು ಹೇಳಿದ್ದಾರೆ. ಪ್ರತಿಯೊಬ್ಬ ರೈತರನ್ನು ಅವರ ವಕೀಲ ಮೊಹಮ್ಮದ್ ಅಮಾನ್ ಸಮ್ಮುಖದಲ್ಲಿ 15 ನಿಮಿಷಗಳಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಪಡಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದ ಬಗ್ಗೆ ದಾಖಲಾದ ಎರಡನೇ ಎಫ್‌ಐಆರ್‌‌ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ರೈತರು ಹಲ್ಲೆ ನಡೆಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಈ ಎಫ್‌ಐಆರ್‌ನಲ್ಲಿ ರೈತರ ಸಾವಿನ ಬಗ್ಗೆಯಾಗಲೀ, ಘಟನೆ ನಡೆಯುವ ಸಮಯಲ್ಲಿ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಮಗ ಆಶೀಶ್ ಮಿಶ್ರಾ ಕಾರಿನಲ್ಲಿ ಇದ್ದರು ಎಂದು ಬಗ್ಗೆಯಾಗಲಿ ಉಲ್ಲೇಖವಿಲ್ಲ ಎಂದು ವರದಿಯಾಗಿದೆ. ಬಿಜೆಪಿ ಕಾರ್ಯಕರ್ತ, ರೈತರ ಹತ್ಯೆ ಆರೋಪಿ ಸುಮಿತ್ ಜೈಸ್ವಾಲ್ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಲಿಖಿಂಪುರ್‌ ಖೇರಿ ಹತ್ಯಾಕಾಂಡ ಆರೋಪಿಗಳಾದ ಸುಮಿತ್‌ ಜೈಸ್ವಾಲ್‌, ಶಿಶುಪಾಲ್‌, ನಂದನ್‌ ಸಿಂಗ್ ಬಿಸ್ಟ್‌, ಸತ್ಯ ಪ್ರಕಾಶ್‌ ತ್ರಿಪಾಠಿ ಎಂಬವರನ್ನು ಲಖಿಂಪುರ್‌ ಖೇರಿ ಪೊಲೀಸರು ಹಾಗೂ ಅಪರಾಧ ಬ್ರಾಂಚ್ ಆದ ಸ್ವಾತ್‌‌ ತಂಡದವರು ಸೋಮವಾರ (ಅ.18) ಬಂಧಿಸಿದ್ದಾರೆ. ಸತ್ಯ ಪ್ರಕಾಶ್ ತ್ರಿಪಾಠಿ ಅವರ ಬಳಿ ಇದ್ದ ಪರವಾನಗಿ ಇದ್ದ ಬಂದೂಕು ಹಾಗೂ ಮೂರು ಬುಲೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್‌ ಕುಮಾರ್‌ ಹೇಳಿಕೆ ನೀಡಿದ್ದಾರೆ.

‌ಅಕ್ಟೋಬರ್‌‌ 3ರಂದು ಮೂರು ವಾಹನಗಳು ಹರಿದು ಒಬ್ಬ ಪತ್ರಕರ್ತ ಹಾಗೂ ನಾಲ್ವರು ರೈತರು ಹತ್ಯೆಯಾಗಿದ್ದರು. ಜೊತೆಗೆ ಭುಗಿಲೆದ್ದ ಪ್ರತಿರೋಧದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರೂ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ನನ್ನು ಅಕ್ಟೋಬರ್‌‌ 9ರಂದು ಬಂಧಿಸಲಾಯಿತು.


ಇದನ್ನೂ ಓದಿ: ಲಖಿಂಪುರ್‌‌ ಖೇರಿ ರೈತರ ಹತ್ಯೆ: ಬಿಜೆಪಿ ಮುಖಂಡ ಸೇರಿ ಮತ್ತೆ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...