Homeಚಳವಳಿಲಖಿಂಪುರ್ ಖೇರಿಯಲ್ಲಿ ರೈತರ ಹತ್ಯೆ: ಸಚಿವರ ಮೇಲೆ ಕೊಲೆ ಪ್ರಕರಣ ದಾಖಲಿಸಲು ಎಸ್‌ಕೆಎಂ ಒತ್ತಾಯ

ಲಖಿಂಪುರ್ ಖೇರಿಯಲ್ಲಿ ರೈತರ ಹತ್ಯೆ: ಸಚಿವರ ಮೇಲೆ ಕೊಲೆ ಪ್ರಕರಣ ದಾಖಲಿಸಲು ಎಸ್‌ಕೆಎಂ ಒತ್ತಾಯ

ಸಚಿವ ಅಜಯ್ ಮಿಶ್ರಾ ತೆನಿ ಅವರ ಪುತ್ರ ಆಶಿಶ್ ಮಿಶ್ರಾ, ಒಬ್ಬ ರೈತರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ

- Advertisement -
- Advertisement -

ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವರ ಬೆಂಗಾವಲು, ಅವರ ಮಗ, ಚಿಕ್ಕಪ್ಪ ಮತ್ತು ಇತರ ಗೂಂಡಾಗಳು ವಾಹನ ಹರಿಸಿದ್ದಾರೆ. ಇದರಿಂದ ಕನಿಷ್ಠ ಮೂವರು ರೈತರು ಸಾವನ್ನಪ್ಪಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆ ಹೊರಡಿಸಿದೆ.

ದುರಂತಯಲ್ಲಿ ಸುಮಾರು ಹತ್ತು ಮಂದಿ ಗಾಯಗೊಂಡಿದ್ದಾರೆ. ಎಸ್‌ಕೆಎಂ ಮುಖಂಡ ತೇಜಿಂದರ್ ಸಿಂಗ್ ವಿರ್ಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದೆ.

ಸರ್ಕಾರದ ಈ ಕೊಲೆಗಡುಕ ದಾಳಿಗಳನ್ನು ಸಂಯುಕ್ತ ಕಿಸಾನ್ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದಿರುವ ರೈತ ಸಂಘಟನೆ, ಘಟನೆಗೆ ಕಾರಣರಾದ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವರ ಮೇಲೆ ಪ್ರಕರಣ ದಾಖಲಿಸಬೇಕು ಮತ್ತು ಅವರನ್ನು ಪದವಿಯಿಂದ  ತಕ್ಷಣವೇ ವಜಾಗೊಳಿಸಬೇಕು ಎಂದು ಆಗ್ರಹಿಸಿದೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕ್ರೂರ ಮತ್ತು ಅಮಾನವೀಯ ದಾಳಿ ನಡೆಸಿರುವ ಬಿಜೆಪಿಯ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ, ಅವರ ಮಗ ಆಶಿಶ್ ಮಿಶ್ರಾ, ಅವರ ಚಿಕ್ಕಪ್ಪ ಮತ್ತು ಇತರ ಗೂಂಡಾಗಳ ವಿರುದ್ಧ ಎಸ್‌ಕೆಎಂ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ರೈತ ನಾಯಕರಿಗೆ ಬಹಿರಂಗ ಬೆದರಿಕೆ: ಹೆಲಿಪ್ಯಾಡ್ ಆಕ್ರಮಿಸಿಕೊಂಡ ರೈತರಿಂದ ಸರ್ಕಾರಕ್ಕೆ ಸವಾಲ್

 

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಅವರ ಪುತ್ರ ಆಶಿಶ್ ಮಿಶ್ರಾ, ಒಬ್ಬ ರೈತರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಲಖಿಂಪುರ್ ಖೇರಿ ಘಟನೆ ಬಳಿಕ ಆಕ್ರೋಶಗೊಂಡ ರೈತರು ಬಿಜೆಪಿ ನಾಯಕರ ವಾಹನಗಳನ್ನು ಜಖಂಗೊಳಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರವು ತಕ್ಷಣವೇ ಅಜಯ್ ಮಿಶ್ರಾ ತೇನಿಯ ಕಡೆಯಿಂದ ಭಾಗಿಯಾಗಿರುವ ಎಲ್ಲರ ವಿರುದ್ಧ ಕೊಲೆ ಆರೋಪದ ಪ್ರಕರಣಗಳನ್ನು ದಾಖಲಿಸಬೇಕು ಎಂದು ಒತ್ತಾಯಿಸಿದೆ.

ರೈತರನ್ನು ಗಲಭೆಗೆ ಪ್ರಚೋದಿಸದಂತೆ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿರುವ ರೈತ ಮುಖಂಡರು, ತುರ್ತು ಸಭೆ ನಡೆಸಿ, ಹಲವಾರು SKM ನಾಯಕರು ವಿವಿಧ ಸ್ಥಳಗಳಿಂದ ಘಟನಾ ಸ್ಥಳ ಲಖಿಂಪುರ್ ಖೇರಿಗೆ ತೆರಳಿದ್ದಾರೆ.

ಇತ್ತ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸ್ವಯಂಸೇವಕರನ್ನು ಲಾಠಿ ಎತ್ತಲು ಮತ್ತು ರೈತರ ಮೇಲೆ ಹಲ್ಲೆ ಮಾಡಲು ಧೈರ್ಯದಿಂದ ಪ್ರೋತ್ಸಾಹಿಸಿರುವ ಹಿಂಸಾತ್ಮಕ ಉದ್ದೇಶಕ್ಕೆ ಎಸ್‌ಕೆಎಂ ಖಂಡನೆ ವ್ಯಕ್ತಪಡಿಸಿದೆ. ಸಿಎಂ ಮನೋಹರ್ ಲಾಲ್ ಖಟ್ಟರ್ ತಕ್ಷಣ ಕ್ಷಮೆ ಕೇಳಬೇಕು ಮತ್ತು ಅವರ ಸಾಂವಿಧಾನಿಕ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಿಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಬಹಿರಂಗ ಬೆದರಿಕೆ ಹಾಕಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು, ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಹೆಲಿಪ್ಯಾಡ್ ಅನ್ನು ಆಕ್ರಮಿಸಿಕೊಂಡಿದ್ದರು.


ಇದನ್ನೂ ಓದಿ: ಲಖಿಂಪುರ್ ಖೇರಿಯಲ್ಲಿ ಬೆಂಗಾವಲು ವಾಹನ ಹರಿಸಿ ರೈತರ ಹತ್ಯೆ- ಭುಗಿಲೆದ್ದ ಹಿಂಸಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...